ಶ್ರೀಶೈಲ ಕ್ಷೇತ್ರದ ಜಾತ್ರೆ: ಸೇವೆಗಳು, ವಿಶೇಷ ಬಸ್ ಸೌಲಭ್ಯ ಮಾಹಿತಿ
ಬೆಂಗಳೂರು, ಫೆಬ್ರವರಿ 27; ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಮಹಾ ಕ್ಷೇತ್ರದಲ್ಲಿ ಮಾರ್ಚ್ 1 ರಿಂದ 11, 2024ರ ತನಕ ಮಹಾಶಿವರಾತ್ರಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ದೇವಾಲಯದ ಸೇವೆಗಳು, ಬಸ್ ವ್ಯವಸ್ಥೆ ಬಗ್ಗೆ ಭಕ್ತರಿಗೆ ಮಾಹಿತಿ ನೀಡಲಾಗಿದೆ.
ಶ್ರೀಶೈಲ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ. ಪೆದ್ದಿರಾಜು ಪ್ರಕಟಣೆ ಮೂಲಕ ಭಕ್ತರಿಗೆ ಮಾಹಿತಿ ನೀಡಿದ್ದಾರೆ. ಈ ದೇವಾಲಯಕ್ಕೆ ಆಂಧ್ರ ಪ್ರದೇಶ ಮಾತ್ರವಲ್ಲ ಕರ್ನಾಟಕದಲ್ಲಿಯೂ ಅಪಾರ ಭಕ್ತರು ಇದ್ದಾರೆ. ಶಿವರಾತ್ರಿ ಸಮಯದಲ್ಲಿ ಸಾವಿರಾರು ಭಕ್ತರು ರಾಜ್ಯದಿಂದ ದೇವರ ದರ್ಶನಕ್ಕಾಗಿ ಸಾಗುತ್ತಾರೆ.

ಜಾತ್ರೆ ಮತ್ತು ಉತ್ಸವದ ಸಂದರ್ಭದಲ್ಲಿನ ಪರಿಸ್ಥಿತಿ ನಿರ್ವಹಣೆಗಾಗಿ ವಿವಿಧ ವ್ಯವಸ್ಥೆಗಳನ್ನು ಮಾಡಲಾಗಿದೆ. ಬ್ರಹ್ಮೋತ್ಸವದಲ್ಲಿ ಭಕ್ತರ ಜನದಟ್ಟಣೆಯ ನಿಯಂತ್ರಿಸುವ ಉದ್ದೇಶದಿಂದ ಭಕ್ತರಿಗೆ ಸ್ವಾಮಿಯ ಅಲಂಕಾರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದರ್ಶನದ ವಿವರಗಳು: ಭಕ್ತಾದಿಗಳಿಗೆ ಉಚಿತ ದರ್ಶನ ಸೌಲಭ್ಯವಿದೆ. ಶೀಘ್ರ ದರ್ಶನಕ್ಕಾಗಿ ರೂ.200, ಅತಿ ಶೀಘ್ರ ದರ್ಶನಕ್ಕಾಗಿ ರೂ.500 ಪಾವತಿಸಬೇಕಾಗುತ್ತದೆ. ಈ ಟಿಕಟ್ಗಳನ್ನು ದೇವಾಲಯದ ವೆಬ್ಸೈಟ್ www.srisailadevasthanam.org ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು. ದೇವಾಲಯದ ಕರೆಂಟ್ ಬುಕ್ಕಿಂಗ್ ಮೂಲಕ ತಕ್ಷಣವೇ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಬ್ರಹ್ಮೋತ್ಸವದ ಪ್ರಾರಂಭದ 5 ದಿನಗಳು ಅಂದರೆ ಮಾರ್ಚ್ 1 ರಿಂದ 5 ರವರೆಗೆ ಜ್ಯೋತಿರ್ಮುಡಿ (ಇರುಮುಡಿ) ಇರುವ ಶಿವದೀಕ್ಷಾ ಭಕ್ತರಿಗೆ ಮಾತ್ರ ಹಂತ ಹಂತವಾಗಿ ನಿರ್ದಿಷ್ಟ ಸಮಯದಲ್ಲಿ ಸ್ವಾಮಿಯ ಉಚಿತ ಸ್ಪರ್ಶ್ ದರ್ಶನವನ್ನು ಕಲ್ಪಿಸಲಾಗುತ್ತದೆ.
ಬ್ರಹ್ಮೋತ್ಸವ ಮುಗಿಯುವವರೆಗೂ ಎಲ್ಲಾ ಅರ್ಜಿತ (ಸಂಚಿತ) ಸೇವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳಿದ್ದಾರೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಈ ಕುರಿತು ಮಾಹಿತಿ ತಿಳಿದು ಭೇಟಿ ನೀಡಬಹುದು.
ಆಂಧ್ರಪ್ರದೇಶದ ಕರ್ನೂಲ ಜಿಲ್ಲೆಯ ಶ್ರೀಶೈಲ ಮಲ್ಲಿಕಾರ್ಜುನನ ಜಾತ್ರೆಯು ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣದಿಂದ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ಕಾಲ್ನೆಡಿಗೆ ಮೂಲಕವೂ ಸಹ ಭಕ್ತರು ದೇವರ ದರ್ಶನಕ್ಕಾಗಿ ಹೋಗುತ್ತಾರೆ.
ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಾರ್ಚ್ 1 ರಿಂದ 11ರ ವರೆಗೆ ಮಹಾಶಿವರಾತ್ರಿ ಬ್ರಹೋತ್ಸವ ಅಂಗವಾಗಿ ಸ್ವಾಮಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಕರ್ನಾಟಕದಿಂದ ಸಾಗುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆಯನ್ನು ಸಹ ಮಾಡಲಾಗುತ್ತದೆ.
ಬ್ರಹೋತ್ಸವದದ ಸಂದರ್ಭದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಮಾರ್ಚ್ 5ರಂದು ರಾತ್ರಿ 7.30 ರಿಂದ 11/03/2024 ರಾತ್ರಿಯವರೆಗೆ ಭಕ್ತರೆಲ್ಲರಿಗೂ ಶ್ರೀ ಸ್ವಾಮಿಯವರ ಅಲಂಕಾರ ದರ್ಶನಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ ಎಂದು ಭಕ್ತರಿಗೆ ಮಾಹಿತಿ ನೀಡಲಾಗಿದೆ.
ಶ್ರೀಶೈಲ ಮಲಿಕಾರ್ಜುನ ಸ್ವಾಮಿ ದೇವಾಲಯ ಜ್ಯೋತಿರ್ಲಿಂಗಕ್ಕೆ ನೆಲೆಯಾಗಿದೆ ಮತ್ತು ಪಾರ್ವತಿ ದೇವಿಯ 18 ಶಕ್ತಿ ಪೀಠಗಳಲ್ಲಿ ಒಂದಾಗಿದೆ. ಕೃಷ್ಣಾ ನದಿಯ ದಡದಲ್ಲಿರುವ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಇದ್ದಾರೆ. ಜಾತ್ರೆಯ ಸಮಯದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ?












Click it and Unblock the Notifications