Cauvery Dispute: ಕಾವೇರಿ ನೀರಿಗಾಗಿ ಮತ್ತೊಮ್ಮೆ ಬಂದ್ಗೆ ಕರೆ!
ಕಾವೇರಿ ನೀರಿನ ಗಲಾಟೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಈಗಾಗಲೇ ಈ ಕಾರಣಕ್ಕೆ ಕನ್ನಡಿಗರು 2 ಬಂದ್ಗಳನ್ನ ನೋಡಿದ್ದಾರೆ. ಮೊದಲು ರಾಜಧಾನಿ ಬೆಂಗಳೂರಿನ ಬಂದ್ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ನಂತರ ಕರ್ನಾಟಕ ಕೂಡ ಬಂದ್ ಆಗಿತ್ತು. ಈ ಎರಡೂ ಬಂದ್ಗಳ ಬಳಿಕ ಕಾವೇರಿ ನೀರಿಗಾಗಿ ಮತ್ತೊಮ್ಮೆ ಬಂದ್ಗೆ ಕರೆ ನೀಡಲಾಗಿದೆ. ಅರೆ ಮತ್ತೊಂದು ಬಂದ್? ಯಾವಾಗ? ಅಂತಾ ಕೇಳಿದ್ರಾ, ಮುಂದೆ ಓದಿ.
ಹೌದು, ಕಾವೇರಿ ನದಿ ಪಾತ್ರದಲ್ಲಿ ಈ ಬಾರಿ ಅಗತ್ಯ ಇರುವಷ್ಟು ಮಳೆ ಬಿದ್ದಿಲ್ಲ. ಹೀಗಾಗಿ ನೀರಿಗಾಗಿ ಭಾರಿ ಕೊರತೆ ಎದುರಾಗಿದೆ. ಅದ್ರಲ್ಲೂ ಕರ್ನಾಟಕದ ಕಾವೇರಿ ಕೊಳ್ಳ ಭಾಗದಲ್ಲಿ ನೀರು ಇಲ್ಲದೆ ರೈತರು ಪರಿತಪಿಸುತ್ತಿದ್ದಾರೆ. ಈ ಸಮಯದಲ್ಲೇ ತಮಿಳುನಾಡು ಸರ್ಕಾರವೂ ಕಾವೇರಿ ನೀರಿಗಾಗಿ ಕಿರಿಕ್ ತೆಗೆದಿದೆ. ಹೀಗಾಗಿ ಕರ್ನಾಟಕದಲ್ಲಿ ಬರ ಇದ್ದರೂ ಆರಂಭದಲ್ಲಿ ಹತ್ತಾರು ಟಿಎಂಸಿ ನೀರು ಬಿಟ್ಟಿತ್ತು ಕರ್ನಾಟಕ ಸರ್ಕಾರ. ಆದ್ರೆ ಮತ್ತೆಮತ್ತೆ ಕಾವೇರಿ ನೀರು ಬಿಡುವಂತೆ ತಮಿಳುನಾಡು ಒತ್ತಡ ಹೇರಿದ್ದು, ಕರ್ನಾಟಕ ಕೂಡ ಈ ಬಾರಿ ನೀರು ಬಿಡಲೇ ಬಾರದು ಅಂತಾ ನಿರ್ಧಾರ ಮಾಡಿದೆ. ಈ ಸಮಯಕ್ಕೇ ಮತ್ತೆ ಬಂದ್ಗೆ ಕರೆ ನೀಡಲಾಗಿದೆ.

ಕಾವೇರಿ ನೀರಿಗಾಗಿ ಬಂದ್ ಯಾವಾಗ?
ಇದೀಗ ಕಾವೇರಿ ನೀರಿಗಾಗಿ ಬಂದ್ಗೆ ಕರೆ ನೀಡಲಾಗಿದೆ ನಿಜ ಆದರೆ ಈ ಬಂದ್ ಕನ್ನಡಿಗರ ನೆಲದಲ್ಲಿ ನಡೆಯುತ್ತಿಲ್ಲ. ಬದಲಾಗಿ ನೆರೆಯ ತಮಿಳುನಾಡು ರೈತರು ನೀರಿಗಾಗಿ ಹೋರಾಟ ಆರಂಭಿಸಲು ಮುಂದಾಗಿದ್ದಾರೆ. ತಮಿಳುನಾಡಿನ ಕಾವೇರಿ ನದಿ ಕೊಳ್ಳದ ರೈತರು ಬಂದ್ಗೆ ಕರೆ ನೀಡಿದ್ದಾರೆ. ಕಾವೇರಿ ನದಿ ಹರಿಯುವ ತಮಿಳುನಾಡಿನ ಜಿಲ್ಲೆಗಳಲ್ಲಿ ಬಂದ್ ನಡೆಸಲು ನಿರ್ಧಾರ ಮಾಡಲಾಗಿದೆ. ಅಕ್ಟೋಬರ್ 11ರ ಬುಧವಾರ ಈ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಈ ಮೂಲಕ ಪ್ರತಿಭಟಿಸಲಿದ್ದಾರೆ.
ಕರ್ನಾಟಕ ಸರ್ಕಾರದ ವಿರುದ್ಧವೂ ಆಕ್ರೋಶ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಆದೇಶದ ನಂತರವೂ ಕರ್ನಾಟಕ ಕಾವೇರಿ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ರೈತರು ಆರೋಪಿಸಿದ್ದಾರೆ. ಅಲ್ದೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಚಾರ ಪ್ರಸ್ತಾಪಿಸಿ ಬಂದ್ಗೆ ಕರೆ ನೀಡಿದ್ದಾರೆ. ಬಂದ್ ನಡೆಯುವ ದಿನ ರೈತರು ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಜಿ ಸಂಸದ & ಡಿಎಂಕೆ ರೈತ ಘಟಕದ ಕಾರ್ಯದರ್ಶಿ ಎಕೆಎಸ್ ವಿಜಯನ್ ತಿಳಿಸಿದ್ದಾರೆ. ಹೀಗೆ ಕರ್ನಾಟಕ ಹಾಗೂ ತಮಿಳುನಾಡು ಗಡಿ ಭಾಗದಲ್ಲಿ ಮತ್ತೆ ಸೂಕ್ಷ್ಮ ಪರಿಸ್ಥಿತಿ ಉಂಟಾಗಿದೆ.

ಬರದಲ್ಲಿ ನರಳುತ್ತಿದೆ ನೆರೆ ರಾಜ್ಯ
ತಮಿಳುನಾಡು ಕೂಡ ಈ ಬಾರಿ ಬರದ ಬೇಗೆಯಲ್ಲಿ ನರಳಾಡುವ ಪರಿಸ್ಥಿತಿ ಇದ್ದು ಮಳೆ ಕೊರತೆ ಕಾರಣ ತಮಿಳುನಾಡು ಡ್ಯಾಂಗಳು ಒಣಗಿವೆ. ಅದ್ರಲ್ಲೂ ನೆರೆ ರಾಜ್ಯದ ಜೀವನಾಡಿ ಮೆಟ್ಟೂರು ಡ್ಯಾಂ ಭಾಗಶಃ ಖಾಲಿಯಾಗಿ ಹೋಗಿದೆ. ಇದೇ ಹಿನ್ನೆಲೆ ಕುಡಿಯುವ ನೀರಿಗೂ ಮುಂದೆ ಸಮಸ್ಯೆ ಎದುರಾಗುವ ಆತಂಕ ಆವರಿಸಿದೆ. ಹೀಗಾಗಿಯೇ ತಮಿಳುನಾಡಿನ ರೈತ ಸಂಘಟನೆಗಳು ಈಗ ಬಂದ್ಗೆ ಕರೆ ನೀಡಿವೆ. ಅಲ್ಲದೆ ಬಂದ್ ನಡೆಯುವ ದಿನ ತಮಿಳುನಾಡಿನ ರೈತರು ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದಾರೆ.
ತಮಿಳುನಾಡಿನ 24 ಜಿಲ್ಲೆಗಳು ಅವಲಂಬಿಸಿರುವುದು ಇದೇ ಡ್ಯಾಂ ನೀರನ್ನ. ಹೀಗಾಗಿ ಕಾವೇರಿ ವಿಚಾರಕ್ಕೆ ತಮಿಳುನಾಡು ದೊಡ್ಡ ಕಿರಿಕ್ ತೆಗೆಯುತ್ತೆ. ಆದರೂ ಕುಡಿಯುವ ನೀರನ್ನ ಮೊದಲು ರಕ್ಷಣೆ ಮಾಡುವ ಬದಲು, ತಮಿಳುನಾಡು ಸರ್ಕಾರ ಕೃಷಿಗೆ ಆದ್ಯತೆ ನೀಡಿದ್ದು ತಪ್ಪು ಎನ್ನುವ ಆರೋಪ ಕೂಡ ಇದೆ. ಈಗ ಮೆಟ್ಟೂರು ಜಲಾಶಯ ನೀರಿನ ಮಟ್ಟ 31.57 ಅಡಿಗೆ ಕುಸಿದಿದೆ. 120 ಅಡಿ ಇರುವ ಮೆಟ್ಟೂರು ಜಲಾಶಯದ ಗರಿಷ್ಠ ಮಟ್ಟ ಇದೀಗ ಕನಿಷ್ಠ ಹಂತಕ್ಕೆ ತಲುಪಿದೆ. 2,204 ಕ್ಯುಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ. ಹಾಗೇ ಕೇವಲ 86 ಕ್ಯುಸೆಕ್ ಒಳಹರಿವು ಮೆಟ್ಟೂರು ಡ್ಯಾಂನಲ್ಲಿ ಇದೀಗ ದಾಖಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications