ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಹೆಣ್ಣು ಚೀತಾ 'ದಕ್ಷ' ಸಾವು: 40 ದಿನಗಳಲ್ಲಿ ಮೂರನೇ ಸಾವು
ಆಫ್ರಿಕಾದಿಂದ ಭಾರತಕ್ಕೆ ಸ್ಥಳಾಂತರಗೊಂಡ ಮತ್ತೊಂದು ಚಿರತೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಮಂಗಳವಾರ ವರದಿ ಮಾಡಿದೆ, 40 ದಿನಗಳ ಅಂತರದಲ್ಲಿ ಇಲ್ಲಿ ಮೂರನೇ ಚೀತಾ ಮೃತಪಟ್ಟಿದೆ.
"ಮಂಗಳವಾರ ಬೆಳಿಗ್ಗೆ ಗಾಯಗೊಂಡ ಸ್ಥಿತಿಯಲ್ಲಿ ದಕ್ಷಾ ಪತ್ತೆಯಾಗಿದೆ ಎಂದು ಕೆಎನ್ಪಿಯ ಮೇಲ್ವಿಚಾರಣಾ ತಂಡ ತಿಳಿಸಿದೆ. ತಕ್ಷಣವೇ ಆಕೆಗೆ ಅಗತ್ಯವಾದ ಚಿಕಿತ್ಸೆ ಮತ್ತು ಔಷಧಿ ನೀಡಿದರೂ, ಯಾವುದೂ ಫಲ ನೀಡಿಲ್ಲ. ಮಧ್ಯಾಹ್ನ 12 ಗಂಟೆ ವೇಳೆಗೆ ಆಕೆ ಸಾವನ್ನಪ್ಪಿದ್ದಾಳೆ" ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.

"ದಕ್ಷಳನ್ನು ಮೊದಲನೇ ನಂಬರ್ ನ ಆವರಣದಲ್ಲಿ ಬಿಡುಗಡೆ ಮಾಡಲಾಗಿತ್ತು, ಎರಡು ಗಂಡು ಚಿರತೆಗಳಾದ ವಾಯು ಮತ್ತು ಅಗ್ನಿಯನ್ನು ಸಂಯೋಗಕ್ಕಾಗಿ ಬಿಡುಗಡೆ ಮಾತಲಾಯಿತು, ಆದರೆ ಈ ವೇಳೆ ಗಂಡು ಚೀತಾಗಳು ಹಿಂಸಾತ್ಮಕವಾಗಿ ವರ್ತಿಸಿದ್ದರಿಂದ ಹೆಣ್ಣು ಚಿರತೆ ಗಾಯಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಚೀತಾಗಳಲ್ಲಿ ಇದು ಸಾಮಾನ್ಯ ಎಂದು" ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾದ ವರ್ಷದ ಚಿರತೆ 'ಉದಯ್' ಹೃದಯಾಘಾತದಿಂದ ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ ದಕ್ಷ ಕೂಡ ಸಾವನ್ನಪ್ಪಿದೆ. 70 ವರ್ಷಗಳ ಹಿಂದೆ ದೇಶದಿಂದ ಕಣ್ಮರೆಯಾದ ಪ್ರಭೇದಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಯ ಆರಂಭಿಕ ಹಂತದಲ್ಲಿ ಸೆಪ್ಟೆಂಬರ್ ಮತ್ತು ಫೆಬ್ರವರಿಯಲ್ಲಿ ಒಟ್ಟು 20 ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಯಿತು. ಇದಕ್ಕೂ ಮುನ್ನ ಒಂದು ಹೆಣ್ಣು ಚಿರತೆ ಮತ್ತು ಒಂದು ಗಂಡು ಚಿರತೆ ಕ್ರಮವಾಗಿ ಮಾರ್ಚ್ 27 ಮತ್ತು ಏಪ್ರಿಲ್ 23 ರಂದು ಸಾವನ್ನಪ್ಪಿದ್ದವು.
ಭಾರತದಲ್ಲಿ ಚೀತಾಗಳ ಸಂಖ್ಯೆಯನ್ನು ಹೆಚ್ಚಿಸುವ ಸರ್ಕಾರದ ಆಸೆಗೆ ಇದು ಸಾಕಷ್ಟು ಹಿನ್ನಡೆಯುಂಟು ಮಾಡಿತ್ತು. ಆದರೆ ಉಳಿದ ಚೀತಾಗಳು ಆರೋಗ್ಯದಿಂದ ಇವೆ ಎಂದು ಸರ್ಕಾರ ಸಮರ್ಥನೆ ಮಾಡಿಕೊಂಡಿದೆ. "ಇತರ ಚಿರತೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗಿದೆ ಮತ್ತು ಅವುಗಳಲ್ಲಿ ಯಾವುದೂ ಯಾವುದೇ ರೀತಿಯ ರೋಗಲಕ್ಷಣಗಳನ್ನು ತೋರಿಸಿಲ್ಲ" ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications