Mass Hysteria: ವಿದ್ಯಾರ್ಥಿನಿಯರಿಗೆ ದೆವ್ವದ ಕಾಟ? ದಿಢೀರ್ ಕಿರುಚಾಡಿದ್ದೇಕೆ?
ಉತ್ತರಕಾಶಿ: ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಕಿರುಚಾಡುತ್ತಾ, ವಿಚಿತ್ರವಾಗಿ ವರ್ತನೆ ತೋರಿದ ಘಟನೆ ಉತ್ತರಾಖಂಡ ರಾಜ್ಯದ ಶಾಲೆ ಒಂದರಲ್ಲಿ ನಡೆದಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಘಟನೆಗೆ ದೆವ್ವಗಳೇ ಕಾರಣ ಎಂಬ ಊಹಾಪೋಹ ಬಲು ಜೋರಾಗಿ ಹರಿದಾಡುತ್ತಿದೆ.
ಅಂದಹಾಗೆ ಉತ್ತರಾಖಂಡ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಹೀಗಾಗಿ ಶಾಲೆ ಮತ್ತು ಕಾಲೇಜುಗಳಿಗೆ ಬೀಗ ಹಾಕಿ, ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿತ್ತು. ಆದ್ರೆ ಪ್ರವಾಹ ಇಳಿಕೆಯಾದ ಬಳಿಕ ವಿದ್ಯಾರ್ಥಿಗಳು ಎಂದಿನಂತೆ ಮತ್ತೆ ಶಾಲೆಗೆ ಮರಳಿದ್ದರು. ಹೀಗೆ ಶಾಲೆಗೆ ಮರಳಿದ ವಿದ್ಯಾರ್ಥಿನಿಯರು, ಶಾಲೆಯ ಕಟ್ಟಡವನ್ನ ಪ್ರವೇಶಿಸುತ್ತಿದ್ದಂತೆ ಹೆಂಗೆಂಗೋ ಆಡಿದ್ದಾರೆ. ಹತ್ತಾರು ವಿದ್ಯಾರ್ಥಿನಿಯರು ದಿಢೀರ್ ಹೀಗೆ ವಿಚಿತ್ರವಾಗಿ ವರ್ತಿಸುತ್ತಿರುವುದನ್ನ ನೋಡಿ, ಚಂಪಾವತಿ ಜಿಲ್ಲೆಯ ಬಾಗೇಶ್ವರ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅಲ್ಲದೆ ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಇಂತಹ ಘಟನೆಗೆ ಕಾರಣ ದೆವ್ವಗಳಾ?
ಮೇಲ್ನೋಟಕ್ಕೆ ಘಟನೆಗೆ ಮಾನಸಿಕ ರೋಗ ಕಾರಣ ಎಂಬ ಮಾತನ್ನ ತಜ್ಞರು ಹೇಳುತ್ತಿದ್ದು, ಆದ್ರೆ ಈ ಮಾತನ್ನ ನಂಬಲು ಬಾಗೇಶ್ವರ ಗ್ರಾಮಸ್ಥರು ಸಿದ್ಧವಾಗಿಲ್ಲ. ಹೀಗಾಗಿ ನಾನಾ ರೀತಿ ಊಹಾಪೋಹ ಹುಟ್ಟಿಕೊಂಡಿದೆ. ಅದರಲ್ಲೂ ದೇವರ ಶಾಪದಿಂದ ಹೀಗೆ ಆಗಿದೆ, ದೆವ್ವಗಳ ಕಾಟ ಇರಬಹುದು ಅನ್ನೋ ವಾದಗಳು ಹರಿದಾಡುತ್ತಿವೆ. ಸ್ಥಳೀಯ ಆಡಳಿತ ಮತ್ತು ಶಿಕ್ಷಣ ಇಲಾಖೆ ಈ ಘಟನೆಯನ್ನ ಗಂಭೀರವಾಗಿ ಪರಿಗಣಿಸಿದೆ. ಹಲವು ವಿದ್ಯಾರ್ಥಿನಿಯರು ಹೀಗೆ ವಿಚಿತ್ರವಾಗಿ ವರ್ತಿಸಿದ್ದನ್ನು ನೋಡಿದ ಇತರ ವಿದ್ಯಾರ್ಥಿಗಳು ಕೂಡ ಬೆಚ್ಚಿಬಿದ್ದಿದ್ದಾರೆ. ಈ ಕಾರಣಕ್ಕೆ ಮಕ್ಕಳು ಶಾಲೆಗೆ ಚಕ್ಕರ್ ಹಾಕುವ ಭಯ ಕೂಡ ಶುರುವಾಗಿದೆ.
Alleged 'Mass Hysteria' case reported from a govt school in Uttarkashi #Uttarakhand Locals say girls under possession of 'divine power'. Earlier such videos appeared from #Bageshwar and #Champawat dists. Experts feel act related to physiological issue
— Anupam Trivedi (@AnupamTrivedi26) July 28, 2023
"Girls identity protected" pic.twitter.com/syiafgvP9C
ಒಟ್ನಲ್ಲಿ ಪರ್ವತಗಳ ನಾಡು ಉತ್ತರಾಖಂಡ ರಾಜ್ಯದಲ್ಲಿ ಪದೇ ಪದೆ ಈ ರೀತಿ ಘಟನೆಗಳು ನಡೆಯುತ್ತಿರುವುದು ಭೀತಿ ಮೂಡಿಸಿದೆ. ಹೀಗಾಗಿ ಪರಿಸ್ಥಿತಿಯನ್ನ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ. ಆದ್ರೆ ಈ ಸಮಸ್ಯೆ ಅದೆಷ್ಟು ಬೇಗ ಬಗೆಹರಿಯುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ತಮ್ಮ ಮಕ್ಕಳ ಪರಿಸ್ಥಿತಿಯನ್ನ ಕಂಡು ಪೋಷಕರು ಕೂಡ ಹೆದರಿದ್ದು, ಶಾಲೆಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕೂಡ ಕುಸಿಯುವ ಭೀತಿ ಇದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications