Terror Attack: ಜಮ್ಮು ಕಾಶ್ಮೀರದಲ್ಲಿ ಮೂರು ದಿನಗಳಲ್ಲಿ ಉಗ್ರರ ಮೂರನೇ ದಾಳಿ
ಶ್ರೀನಗರ, ಜೂನ್. 12:ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ನಿನ್ನೆ ತಡರಾತ್ರಿ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಒ) ಗಾಯಗೊಂಡಿದ್ದಾರೆ.
ಕಥುವಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಒಬ್ಬ ನಾಗರಿಕ ಗಾಯಗೊಂದ್ದರು. ನಂತರ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ನಲ್ಲಿ ಒಂಬತ್ತು ಪ್ರಯಾಣಿಕರನ್ನು ಕೊಂದುಹಾಕಿದ್ದರು. ನಂತರ ಈ ದಾಳಿ ನಡೆದಿದೆ. ಜಮ್ಮುವಿನಲ್ಲಿ ಕಳೆದ ಮೂರು ದಿನಗಳಲ್ಲಿ ಇದು ಮೂರನೇ ಘಟನೆಯಾಗಿದೆ.

ಕಳೆದ ರಾತ್ರಿ ಕಥುವಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಸಹ ಹತ್ಯೆ ಮಾಡಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಹೇಳಿದ್ದಾರೆ.
ದೋಡಾ ಘಟನೆಯ ಕುರಿತು ಮಾಹಿತಿ ನೀಡಿರುವ ಅವರು, ನಿನ್ನೆ ತಡರಾತ್ರಿ ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಜಂಟಿ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಹೇಳಿದರು. ಉನ್ನತ ಮಟ್ಟದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದನೆಯಿಂದ ಮುಕ್ತವಾಗಿರುವ ಪ್ರದೇಶಗಳಿಂದ ಈ ದಾಳಿಗಳು ವರದಿಯಾಗುತ್ತಿರುವುದು ಈಗ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದು, ಅವರಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಈಗ ಕಥುವಾದ ಹೀರಾನಗರ ಪ್ರದೇಶದಲ್ಲಿ ಇನ್ನೊಬ್ಬ ಉಗ್ರನನ್ನು ಬೇಟೆಯಾಡಲು ಡ್ರೋನ್ಗಳನ್ನು ಬಳಸುತ್ತಿವೆ.
ಭಯೋತ್ಪಾದಕರು ಹಲವಾರು ಮನೆಗಳಿಂದ ನೀರು ಕೇಳಿದ್ದಾರೆ. ಇವರನ್ನು ನೋಡಿ ಗ್ರಾಮಸ್ಥರು ಅನುಮಾನಗೊಂಡಿದ್ದಾರೆ. ಕೆಲವು ಗ್ರಾಮಸ್ಥರು ಎಚ್ಚರಿಕೆ ನೀಡಿದಾಗ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಕಥುವಾ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ.
#WATCH | Jammu and Kashmir: Follow-up search operation underway after the terror attack in Kathua's Hiranagar last night.
— ANI (@ANI) June 12, 2024
Out of two terrorists, one was neutralised last night in an encounter. Search operations to nab the other terrorists are underway. The security forces have… pic.twitter.com/uMD7CfRKWD
"ಹಲವು ಜನರು ಗಾಯಗೊಂಡಿದ್ದಾರೆ ಮತ್ತು ಮೂವರು ಸತ್ತಿದ್ದಾರೆ ಎಂಬ ವದಂತಿಗಳಿವೆ. ಆದರೆ ಒಬ್ಬ ನಾಗರಿಕ ಮಾತ್ರ ಗಾಯಗೊಂಡಿದ್ದಾನೆ, ಇದನ್ನು ಹೊರತುಪಡಿಸಿ ಒತ್ತೆಯಾಳುಗಳು ಮತ್ತು ಸಾವಿನ ಬಗ್ಗೆ ಎಲ್ಲಾ ಮಾಹಿತಿಯು ವದಂತಿಗಳು" ಎಂದು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ, ರಿಯಾಸಿಯಲ್ಲಿ ಶಿವ ಖೋರಿ ಗುಹೆ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಬಸ್ ಚಾಲಕ ಪ್ರಯಾಣಿಕರನ್ನು ಇಳಿಸಲು ನಿರಾಕರಿಸಿದ ನಂತರ ಭಯೋತ್ಪಾದಕರು ಗುಂಡು ಹಾರಿಸಿದರು, ಆದರೆ ನಿಯಂತ್ರಣ ಕಳೆದುಕೊಂಡು ಬಸ್ ಕಮರಿಗೆ ಬಿದ್ದಿದೆ ಎಂದು ಬಸ್ ಕಂಪನಿಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಬು ಹಮ್ಜಾ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications