ಮಧ್ಯಪ್ರದೇಶ : ಹಾಜರಾತಿಗೆ ಎಸ್ ಸರ್, ಎಸ್ ಮೇಡಂ ಬದಲಿಗೆ "ಜೈ ಹಿಂದ್' ಎನ್ನಿ
ಮಧ್ಯಪ್ರದೇಶ, ನವೆಂಬರ್ 28 : ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ತುಂಬುವ ಪ್ರಯತ್ನ ಬಿಜೆಪಿ ಆಡಳಿತ ರಾಜ್ಯದಲ್ಲಿ ಬಹಳವೇ ಆಗುತ್ತಿವೆ. ರಾಜಸ್ಥಾನ ಸರ್ಕಾರವು ಶಾಲೆ ಮತ್ತು ವಸತಿಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಮಾಡಿದ್ದರೆ ಇತ್ತ ಮಧ್ಯಪ್ರದೇಶದಲ್ಲಿ ಹಾಜರಾತಿ ಸಮಯದಲ್ಲಿ ಮಕ್ಕಳು ಎಸ್ ಸರ್, ಎಸ್ ಮೇಡಂ ಬದಲಿಗೆ 'ಜೈ ಹಿಂದ್' ಎನ್ನುವಂತೆ ಆದೇಶ ಹೊರಡಿಸಲಾಗಿದೆ.
ಮಧ್ಯಪ್ರದೇಶ ಸರ್ಕಾರದ ಶಿಕ್ಷಣ ಸಚಿವ ವಿಜಯ್ ಷಾ ಅವರು ಹೀಗೊಂದು ಆದೇಶ ನೀಡಿದ್ದಾರೆ. ಇದರಿಂದ ಮಕ್ಕಳಲ್ಲಿ ರಾಷ್ಟ್ರೀಯತೆ ಬೆಳೆಯುತ್ತದೆ ಎಂದಿದ್ದಾರೆ ಅವರು.
ಆದೇಶದ ಸುತ್ತೋಲೆಯು ರಾಜ್ಯದ 1.22 ಲಕ್ಷ ಶಾಲೆಗಳನ್ನು ಅತಿ ಶೀಘ್ರವಾಗಿ ತಲುಪಲಿದೆ, ಆದೇಶವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳೂ ಪಾಲನೆ ಮಾಡಬೇಕು ಎಂದಿದ್ದಾರೆ ವಿಜಯ್ ಷಾ.

ಮಕ್ಕಳಲ್ಲಿ ಎಳವೆಯಲ್ಲೇ ರಾಷ್ಟ್ರೀಯತೆ ತುಂಬಲು ಇದು ಸಹಾಯ , ಮಾಡುತ್ತದೆ, ಈ ಆದೇಶಕ್ಕೆ ಯಾರದ್ದೂ ವಿರೋಧ ಇರುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಪ್ರಾಯೋಗಿಕವಾಗಿ ಮದ್ಯಪ್ರದೇಶದ ಸತ್ನಾ ಜಿಲ್ಲೆಯ ಶಾಲೆಯ ಮಕ್ಕಳು ಹಾಜರಾತಿ ಸಮಯದಲ್ಲಿ ಜೈಹಿಂದ್ ಎನ್ನುವಂತೆ ಸೆಪ್ಟೆಂಬರ್ ನಲ್ಲಿಯೇ ಆದೇಶ ಹೊರಡಿಸಲಾಗಿತ್ತು, ಈಗ ರಾಜ್ಯಾದ್ಯಂತ ಆದೇಶ ಜಾರಿಗೆ ಬರುವಂತೆ ಸೂಚಿಸಿದ್ದಾರೆ.
ಶಾಲೆಗಳ ಪಠ್ಯದಲ್ಲಿ ರಾಷ್ಟ್ರೀಯತೆಯ ಘೋಷಣೆಗಳು ಇರುವಂತೆ ಪಠ್ಯ ರೂಪಿಸುವುದಾಗಿ ಹೇಳಿಕೆ ನೀಡಿರುವ ಶಿಕ್ಷಣ ಸಚಿವರು ಆ ಸಂಬಂಧ ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.
ಸರ್ಕಾರಿ ಆದೇಶದಂತೆ ಮಧ್ಯಪ್ರದೇಶದ ಶಾಲೆಗಳಲ್ಲಿ ಈಗಾಗಲೇ ಪ್ರತಿದಿನ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications