ಮಧ್ಯಪ್ರದೇಶ : ಹಾಜರಾತಿಗೆ ಎಸ್ ಸರ್, ಎಸ್ ಮೇಡಂ ಬದಲಿಗೆ "ಜೈ ಹಿಂದ್' ಎನ್ನಿ
ಮಧ್ಯಪ್ರದೇಶ, ನವೆಂಬರ್ 28 : ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ತುಂಬುವ ಪ್ರಯತ್ನ ಬಿಜೆಪಿ ಆಡಳಿತ ರಾಜ್ಯದಲ್ಲಿ ಬಹಳವೇ ಆಗುತ್ತಿವೆ. ರಾಜಸ್ಥಾನ ಸರ್ಕಾರವು ಶಾಲೆ ಮತ್ತು ವಸತಿಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಮಾಡಿದ್ದರೆ ಇತ್ತ ಮಧ್ಯಪ್ರದೇಶದಲ್ಲಿ ಹಾಜರಾತಿ ಸಮಯದಲ್ಲಿ ಮಕ್ಕಳು ಎಸ್ ಸರ್, ಎಸ್ ಮೇಡಂ ಬದಲಿಗೆ 'ಜೈ ಹಿಂದ್' ಎನ್ನುವಂತೆ ಆದೇಶ ಹೊರಡಿಸಲಾಗಿದೆ.
ಮಧ್ಯಪ್ರದೇಶ ಸರ್ಕಾರದ ಶಿಕ್ಷಣ ಸಚಿವ ವಿಜಯ್ ಷಾ ಅವರು ಹೀಗೊಂದು ಆದೇಶ ನೀಡಿದ್ದಾರೆ. ಇದರಿಂದ ಮಕ್ಕಳಲ್ಲಿ ರಾಷ್ಟ್ರೀಯತೆ ಬೆಳೆಯುತ್ತದೆ ಎಂದಿದ್ದಾರೆ ಅವರು.
ಆದೇಶದ ಸುತ್ತೋಲೆಯು ರಾಜ್ಯದ 1.22 ಲಕ್ಷ ಶಾಲೆಗಳನ್ನು ಅತಿ ಶೀಘ್ರವಾಗಿ ತಲುಪಲಿದೆ, ಆದೇಶವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳೂ ಪಾಲನೆ ಮಾಡಬೇಕು ಎಂದಿದ್ದಾರೆ ವಿಜಯ್ ಷಾ.

ಮಕ್ಕಳಲ್ಲಿ ಎಳವೆಯಲ್ಲೇ ರಾಷ್ಟ್ರೀಯತೆ ತುಂಬಲು ಇದು ಸಹಾಯ , ಮಾಡುತ್ತದೆ, ಈ ಆದೇಶಕ್ಕೆ ಯಾರದ್ದೂ ವಿರೋಧ ಇರುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಪ್ರಾಯೋಗಿಕವಾಗಿ ಮದ್ಯಪ್ರದೇಶದ ಸತ್ನಾ ಜಿಲ್ಲೆಯ ಶಾಲೆಯ ಮಕ್ಕಳು ಹಾಜರಾತಿ ಸಮಯದಲ್ಲಿ ಜೈಹಿಂದ್ ಎನ್ನುವಂತೆ ಸೆಪ್ಟೆಂಬರ್ ನಲ್ಲಿಯೇ ಆದೇಶ ಹೊರಡಿಸಲಾಗಿತ್ತು, ಈಗ ರಾಜ್ಯಾದ್ಯಂತ ಆದೇಶ ಜಾರಿಗೆ ಬರುವಂತೆ ಸೂಚಿಸಿದ್ದಾರೆ.
ಶಾಲೆಗಳ ಪಠ್ಯದಲ್ಲಿ ರಾಷ್ಟ್ರೀಯತೆಯ ಘೋಷಣೆಗಳು ಇರುವಂತೆ ಪಠ್ಯ ರೂಪಿಸುವುದಾಗಿ ಹೇಳಿಕೆ ನೀಡಿರುವ ಶಿಕ್ಷಣ ಸಚಿವರು ಆ ಸಂಬಂಧ ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.
ಸರ್ಕಾರಿ ಆದೇಶದಂತೆ ಮಧ್ಯಪ್ರದೇಶದ ಶಾಲೆಗಳಲ್ಲಿ ಈಗಾಗಲೇ ಪ್ರತಿದಿನ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications