ಕೋಲ್ಕತಾದಲ್ಲಿಯೂ ಪ್ರತಿಧ್ವನಿಸಿದ ರಾಷ್ಟ್ರವಿರೋಧಿ ಕೂಗು
ಕೋಲ್ಕತಾ, ಫೆಬ್ರವರಿ 16 : ರಾಷ್ಟ್ರವಿರೋಧಿ ಕೂಗುಗಳು ವಿಶ್ವವಿದ್ಯಾಲಯದಲ್ಲಿ ಮತ್ತೆ ಮೊಳಗಲು ಆರಂಭವಾಗಿವೆ. ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕೇಳಿಬಂದಿದ್ದ ರಾಷ್ಟ್ರವಿರೋಧಿ ಘೋಷಣೆಗಳು ಈಗ ಕೋಲ್ಕತಾದ ಜಾಧವಪುರ ವಿಶ್ವವಿದ್ಯಾಲಯದಲ್ಲಿಯೂ ಪ್ರತಿಧ್ವನಿಸುತ್ತಿವೆ.
ಮಂಗಳವಾರ ವಿಶ್ವವಿದ್ಯಾಲಯದಲ್ಲಿ ನಡೆಸಲಾದ ಮೆರವಣಿಗೆಯಲ್ಲಿ 2001ರ ಸಂಸತ್ ದಾಳಿಯ ರೂವಾರಿ, ಉಗ್ರ ಅಫ್ಜಲ್ ಗುರು ಪರವಾದ ಘೋಷಣೆಗಳು ಮುಗಿಲುಮುಟ್ಟಿವೆ. ರಾಜದ್ರೋಹದ ಆರೋಪ ಎದುರಿಸುತ್ತಿರುವ ಜೆಎನ್ಯು ನಾಯಕ ಕನ್ಹಯ್ಯ ಬಂಧನವನ್ನು ವಿರೋಧಿಸಿ ಈ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ಪಂಜಿನ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು "ಅಫ್ಜಲ್ ಬೋಲೆ ಆಜಾದಿ, ಗಿಲಾನಿ ಬೋಲೆ ಆಜಾದಿ, ಚಿಕ್ನೆ ಲೆಂಗೆ ಆಜಾದಿ" ಮುಂತಾದ ಘೋಷಣೆಗಳನ್ನು ಕೂಗುತ್ತ ವಿಶ್ವವಿದ್ಯಾಲಯದಿಂದ ದಕ್ಷಿಣ ಕೋಲ್ಕತಾದಲ್ಲಿರುವ ಗೋಲ್ ಪಾರ್ಕ್ ವರೆಗೆ ಪಾದಯಾತ್ರೆ ನಡೆಸಿದರು. [ದೆಹಲಿಯಲ್ಲಿ ವಕೀಲರು VS ಪತ್ರಕರ್ತರು]

"ನಮಗೆ ಆರೆಸ್ಸೆಸ್ ನಿಂದ ಸ್ವಾತಂತ್ರ್ಯ ಬೇಕು, ಮೋದಿ ಸರಕಾರದಿಂದ ಸ್ವಾತಂತ್ರ್ಯ ಬೇಕು", "ಕಾಶ್ಮೀರ ಸ್ವಾತಂತ್ರ್ಯ ಬೇಕು ಎಂದು ಕೂಗಿದಾಗ ಮಣಿಪುರ ಕೂಡ ಸ್ವಾತಂತ್ರ್ಯ ಎಂದು ಕೂಗಿತ್ತು" ಎಂದು ಘೋಷಣೆ ಕೂಗುತ್ತ, ಚಪ್ಪಾಳೆ ಬಾರಿಸುತ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರ ದಂಡು ಪಾದಯಾತ್ರೆ ನಡೆಸಿತು. ಇಷ್ಟೆಲ್ಲಾ ನಡೆದರೂ ಯಾವ ವಿದ್ಯಾರ್ಥಿಯನ್ನೂ ಮಮತಾ ಸರಕಾರ ಬಂಧಿಸಿಲ್ಲ.
ಅಫ್ಜಲ್ ಗುರುವನ್ನು ನೇಣಿಗೇರಿಸಿದ್ದನ್ನು ವಿರೋಧಿಸಿ ಪ್ರತಿಭಟನೆಯನ್ನು ಆಯೋಜಿಸಿ, ರಾಷ್ಟ್ರವಿರೋಧಿ ಘೋಷಣೆಗಳನ್ನು ಫೆಬ್ರವರಿ 9ರಂದು ಕೂಗಿದ ಆರೋಪದ ಮೇಲೆ ಕನ್ಹಯ್ಯನನ್ನು ಬಂಧಿಸಲಾಗಿದೆ. ಅಫ್ಜಲ್ ಗುರು ಪರ ವಿದ್ಯಾರ್ಥಿಗಳನ್ನು ಬಡೆದೆಬ್ಬಿಸಿದ ಆರೋಪದ ಮೇಲೆ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಗಿಲಾನಿಯನ್ನು ಮಂಗಳವಾರ ಬಂಧಿಸಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. [ಉಪನ್ಯಾಸಕ ಎಸ್ಎಆರ್ ಗಿಲಾನಿ ಬಂಧನ]
ಅಫ್ಜಲ್ ಗುರುವನ್ನು 'ಹುತಾತ್ಮ' ಎಂದು ಕೂಗುತ್ತಿರುವ ಇಂಥ ರಾಷ್ಟ್ರದ್ರೋಹಿ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರಕಾರ ಹಿಂದೇಟು ಹಾಕುತ್ತಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ. [ಭಾರತ ಮಾತೆಯ ಮಡಿಲು ಸೇರಿದ ಯೋಧ ಮಹೇಶ್]
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications