ನಕ್ಸಲೀಯರ ವಿರುದ್ಧ ಕಾರ್ಯಾಚರಣೆಗೆ ಮಹಿಳಾ ಪಡೆ!
ನವದೆಹಲಿ, ನ.16: ಮೊಟ್ಟ ಮೊದಲ ಬಾರಿಗೆ ನಕ್ಸಲೀಯರ ವಿರುದ್ಧದ ಕಾರ್ಯಾಚರಣೆಗೆ ಮಹಿಳೆಯರೇ ಇರುವ ವಿಶೇಷ ಪಡೆಯನ್ನು ದಟ್ಟ ಅರಣ್ಯ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ದೇಶ ಎದುರಿಸುತ್ತಿರುವ ನಕ್ಸಲೀಯರ ಮಿತಿಮೀರಿದ ಹಿಂಸಾತ್ಮಕ ಚಟುವಟಿಕೆಗಳನ್ನು ನಿಗ್ರಹಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮಹಿಳಾ ಕಮಾಂಡೋಗಳು ನೇರ ಹೋರಾಟಕ್ಕಿಳಿದಿದ್ದಾರೆ.
ಅರಣ್ಯ ಪ್ರದೇಶಗಳಲ್ಲಿ ನಕ್ಸಲರ ವಿರುದ್ಧ ಹೋರಾಟಕ್ಕೆ ಮಹಿಳಾ ಕಮಾಂಡೋಗಳನ್ನು ಬಳಸಿರುವ ಕೆಲವೇ ರಾಷ್ಟ್ರಗಳ ಸಾಲಿಗೆ ಈಗ ಭಾರತವೂ ಸೇರಿದಂತಾಗಿದೆ. ಪುರುಷ ಸಿಬ್ಬಂದಿ ಜತೆ ಕೆಲವು ಮಹಿಳಾ ಕಮಾಂಡೋಗಳನ್ನು ನಕ್ಸಲೀಯರ ವಿರುದ್ಧದ ನೇರ ಕಾರ್ಯಾಚರಣೆಗಾಗಿ ಅರಣ್ಯ ಪ್ರದೇಶಕ್ಕೆ ಕಳುಹಿಸಲಾಗಿದ್ದು, ದಟ್ಟ ಅರಣ್ಯದಲ್ಲಿ ಈ ಮಹಿಳಾ ಸಿಆರ್ ಪಿಎಫ್ ಸಿಬ್ಬಂದಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೇಶದ ಅತಿ ದೊಡ್ಡ ಅರೆಸೈನಿಕ ಪಡೆ ಸಿಆರ್ ಪಿ ಎಫ್ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಈ ಮಹಿಳಾ ಸಿಬ್ಬಂದಿ ಕೇವಲ ಗಸ್ತು ತಿರುಗುವುದಕ್ಕಷ್ಟೇ ಸೀಮಿತವಾಗದೆ, ಕೆಂಪು ಉಗ್ರರ ವಿರುದ್ಧ ನೇರಾನೇರ ಗುಂಡಿನ ಚಕಮಕಿ ನಡೆಸಲೂ ಸಮರ್ಥರಾಗಿದ್ದಾರೆ. ದೇಶದಲ್ಲಿಯೇ ನಕ್ಸಲರ ಹಿಡಿತಕ್ಕೆ ಸಿಕ್ಕಿ ಜರ್ಝರಿತಗೊಂಡಿರುವ ಛತ್ತೀಸ್ ಗಢದ ಬಸ್ತಾರ್ ಜಿಲ್ಲೆಯ ಅರಣ್ಯಕ್ಕೆ ಬಂದು ಮಹಿಳಾ ತಂಡ ಹಾಗೂ ಜಾರ್ಖಂಡ್ ನ ರಹಸ್ಯ ತಾಣವೊಂದಕ್ಕೆ ಇನ್ನೊಂದು ತಂಡವನ್ನು ಕಳುಹಿಸಿಕೊಡಲಾಗಿದೆ.
ನಕ್ಸಲ್ ಪೀಡಿತ ಪ್ರದೇಶಗಳಿಗೆ ಈ ತಂಡಗಳನ್ನು ಕಳುಹಿಸಿ 15 ದಿನಗಳಾಗಿದ್ದು, ತಂಡದ ಕಮಾಂಡೋಗಳು ದಕ್ಷತೆಯಿಂದ ನಕ್ಸಲರ ಮುಖಾಮುಖಿಯಾಗಿ ಸೆಣಸಾಡುತ್ತಿದ್ದಾರೆ. ತಲಾ 35 ಮಹಿಳೆ ಯೋಧರುಳ್ಳ ಪ್ಲಾಟೂನ್ ಗಳನ್ನು ಕೂಂಬಿಂಗ್ ಗೆ ಬಿಡಲಾಗಿದೆ. ಪಶ್ಚಿಮಬಂಗಾಳದಲ್ಲಿ ಇದೇ ರೀತಿ ಪ್ರಯೋಗ ಮಾಡಿ ಯಶಸ್ಸು ಗಳಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications