Sachin Pilot: ರಾಜಸ್ಥಾನ ಸರ್ಕಾರದ ವಿರುದ್ದ ಪೈಲಟ್ ಧರಣಿ, ಪಕ್ಷ ವಿರೋಧಿ ಚಟುವಟಿಕೆ ಎಂದ ಕಾಂಗ್ರೆಸ್
ನವದೆಹಲಿ, ಏಪ್ರಿಲ್ 11: ಬಿಜೆಪಿ ನಡೆಸಿದ್ದ ಭ್ರಷ್ಟಾಚಾರ ಪ್ರಕರಣದ ತನಿಖೆಯಲ್ಲಿ ರಾಜಸ್ಥಾನ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ವಿಫಲವಾಗಿದ್ದಾರೆ ಎಂದು ಆರೋಪಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರಿಗೆ ಕಾಂಗ್ರೆಸ್ ತಾಕೀತು ಮಾಡಿದೆ.
ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ಏಪ್ರಿಲ್ 11 ರಂದು ಒಂದು ದಿನದ ಉಪವಾಸವನ್ನು ನಡೆಸುವುದಾಗಿ ಘೋಷಿಸಿದರು. ಅದರಂತೆ ನಡೆದುಕೊಂಡ ಪೈಲಟ್ ಅವರ ನಡೆಯನ್ನು ಪಕ್ಷ ವಿರೋಧಿ ಎಂದು ಕಾಂಗ್ರೆಸ್ ಕರೆದಿದೆ. ಅಲ್ಲದೇ ಈ ಸಂಬಂಧ ಶಾಂತವಾಗಿರುವಂತೆ, ಪಕ್ಷ ವಿರುದ್ಧ ಮಾತನಾಡದಂತೆಯೂ ಎಚ್ಚರಿಕೆ ನೀಡಿದೆ.

ಪೈಲಟ್ ಅವರದ್ದು 'ಪಕ್ಷ ವಿರೋಧಿ ಚಟುವಟಿಕೆ': ಕಾಂಗ್ರೆಸ್
ಸಚಿನ್ ಪೈಲಟ್ ಅವರು ನಡೆಸುತ್ತಿರುವ ಅಹೋರಾತ್ರಿ ಉಪವಾಸವನ್ನು ಕಾಂಗ್ರೆಸ್ ಸೋಮವಾರ 'ಪಕ್ಷ ವಿರೋಧಿ ಚಟುವಟಿಕೆ' ಎಂದು ಕಾಂಗ್ರೆಸ್ ಕರೆದಿದೆ. ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿ ನಡೆದ ಭ್ರಷ್ಟಾಚಾರದ ಪ್ರಕರಣಗಳ ತನಿಖೆಯಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಸಚಿನ್ ಪೈಲಟ್ ಆರೋಪಿಸಿದ್ದರು. ಈ ಸಂಬಂಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Statement issued by Shri Sukhjinder Singh Randhawa, AICC In charge of Rajasthan. pic.twitter.com/PMn8aDdu0O
— INC Sandesh (@INCSandesh) April 10, 2023
ಪಕ್ಷ ವಿರೋಧಿಯಾಗಿ ಮಾತನಾಡುವುದು, ಉಪವಾಸದಂತಹ ಉದ್ದೇಶಿತ ಧರಣಿಗೆ ರಾಜಸ್ಥಾನ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾದ ಸುಖಜಿಂದರ್ ರಾಂಧವಾ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿನ್ ಪೈಲಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ವಪಕ್ಷದ ವಿರುದ್ಧ ಧ್ವನಿ ಎತ್ತುವಾಗ ಆಲೋಚಿಸಬೇಕು. ಸರ್ಕಾರದ ವಿರುದ್ಧ ಸಾರ್ವಜನಿಕವಾಗಿ ಹೋಗುವ ಬದಲಾಗಿ ಸಮಸ್ಯೆಯ ಬಗ್ಗೆ ಪಕ್ಷದ ನಾಯಕರಲ್ಲಿ ಸಮಾಲೋಚಿಸಬಹುದಿತ್ತು ಎಂದು ಅವರು ತಿಳಿಸಿದ್ದಾರೆ.

ಪಕ್ಷದೊಳಗೆ ಸಮಸ್ಯೆ ಬಗೆಹರಿಸಿಕೊಳ್ಳಿ: ರಾಂಧವ ಸಲಹೆ
ಸಚಿನ್ ಪೈಲಟ್ ಅವರ ಇಂದಿನ ಅಹೋರಾತ್ರಿ ಉಪವಾಸ ಪಕ್ಷದ ಹಿತಾಸಕ್ತಿಗೆ ವಿರುದ್ಧದ ನಡೆಯಾಗಿದೆ. ಅಲ್ಲದೇ ಇದು (ಕಾಂಗ್ರೆಸ್) ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ಅವರದೇ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದನ್ನು ಮಾಧ್ಯಮಗಳು ಮತ್ತು ಸಾರ್ವಜನಿಕರ ಬದಲಿಗೆ ಪಕ್ಷದ ವೇದಿಕೆಗಳಲ್ಲಿ ಚರ್ಚಿಸಬಹುದು ಎಂದು ರಾಂಧವ ಸಲಹೆ ನೀಡಿದರು.
ರಾಜಸ್ಥಾನದ ರಾಜ್ಯ ಉಸ್ತುವಾರಿ ಸಚಿವರಾಗಿ ನಾಣು ಐದಾರು ತಿಂಗಳು ಕಳೆದಿದ್ದೇನೆ. ಆದರೆ ಸದರಿ ಸಮಸ್ಯೆ, ಸರ್ಕಾರ ವಿಫಲತೆ ಎನ್ನುತ್ತಿರುವ ಅವರು ತಮ್ಮೊಂದಿಗೆ ಒಮ್ಮೆಯೂ ಚರ್ಚಿಸಿಲ್ಲ ಎಂದು ಹೇಳಿದರು. ಏನೆ ಆದರೂ ಇದು ನಮ್ಮ ಪಕ್ಷದ ವಿಚಾರವಾಗಿದ್ದರಿಂದ ಪೈಲಟ್ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ. ಅವರನ್ನು ಉಪವಾಸ ಕೈ ಬಿಡುವುದಾಗಿ ಕೋರುವುದಾಗಿ ಅವರು ಹೇಳಿದರು.
ಸಚಿನ್ ಪೈಲಟ್ ಅವರು ಆರೋಪವೇನು?
ಮೂಲಗಳ ಪ್ರಕಾರ, ರಾಜಸ್ಥಾನದಲ್ಲಿ 2018 ರಲ್ಲಿಕಾಂಗ್ರೆಸ್ ಸರ್ಕಾರ ರಚಿನೆ ಮಾಡಿದಾಗಿನಿಂದಲೂ ಈ ಮುಖ್ಯಮಂತ್ರಿ ಹುದ್ದೆ ಕುರಿತು ಅಶೋಕ್ ಗೆಹ್ಲೋಟ್ ಅವರೊಂದಿಗೆ ಸಚಿನ ಪೈಲಟ್ ಭಿನ್ನಾಭಿಪ್ರಾಯ ಹೊಂದಿದ್ದರು ಎನ್ನಲಾಗಿದೆ. ಈ ಕಾರಣದಿಂಲೇ ಅವರು ಅವರ ತಪ್ಪು ಎತ್ತಿ ಹಿಡಿದು ದಿನವಿಡೀ ಉಪವಾಸವನ್ನು ಮುಂದುವರೆಸುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಹಿಂದಿನ ವಸುಂಧರಾ ರಾಜೇ ಸರ್ಕಾರದ ಭ್ರಷ್ಟಾಚಾರದ ಕುರಿತು ಗೆಹ್ಲೋಟ್ ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ.
ವಿರೋಧ ಪಕ್ಷದಲ್ಲಿದ್ದಾಗ ನಾವು 45,000 ಕೋಟಿ ರೂ.ಗಳ ಗಣಿ ಹಗರಣದ ತನಿಖೆಗೆ ಭರವಸೆ ನೀಡಿದ್ದೆವು. ಆದರೆ ನೀಡಿದ ಭರವಸೆ ಈಡೇರಿಸಲಾಗುತ್ತಿಲ್ಲ. 2022ರ ಮಾರ್ಚ್ 28 ಹಾಗೂ ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದರೂ ಅವರಿಂದ ಉತ್ತರ ಬಂದಿಲ್ಲ ಎಂದು ಸಚಿವ ಪೈಲಟ್ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ಮಾಡಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications