'ಭಿನ್ನಾಭಿಪ್ರಾಯ ಹತ್ತಿಕ್ಕಲು ಭಯೋತ್ಪಾದನಾ ವಿರೋಧಿ ಕಾನೂನು ದುರುಪಯೋಗ ಪಡಿಸಿಕೊಳ್ಳಬಾರದು'
ನವದೆಹಲಿ, ಜು.13: ಭಯೋತ್ಪಾದನಾ ವಿರೋಧಿ ಕಾನೂನನ್ನು "ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ದುರುಪಯೋಗಪಡಿಸಿಕೊಳ್ಳಬಾರದು" ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಾ.ಧನಂಜಯ ಯಶ್ವಂತ್ ಚಂದ್ರಚೂಡ್ ಸೋಮವಾರ ಹೇಳಿದ್ದಾರೆ.
ಭಾರತ ಮತ್ತು ಅಮೆರಿಕ ನಡುವಿನ ಕಾನೂನು ಸಂಬಂಧಗಳ ಕುರಿತು ಜಂಟಿ ಸಮ್ಮೇಳನದಲ್ಲಿ ಮಾತನಾಡಿದ ಸಂದರ್ಭ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಾ.ಧನಂಜಯ ಈ ಮೇಲಿನ ಹೇಳಿಕೆ ನೀಡಿದ್ದಾರೆ. "ಭಯೋತ್ಪಾದನಾ-ವಿರೋಧಿ ಶಾಸನ ಸೇರಿದಂತೆ ಕ್ರಿಮಿನಲ್ ಕಾನೂನನ್ನು ಭಿನ್ನಾಭಿಪ್ರಾಯ ಹತ್ತಿಕ್ಕಲು ಅಥವಾ ನಾಗರಿಕರಿಗೆ ಕಿರುಕುಳವನ್ನು ನೀಡಲು ದುರುಪಯೋಗಪಡಿಸಿಕೊಳ್ಳಬಾರದು," ಎಂದಿದ್ದಾರೆ.
"ಅರ್ನಾಬ್ ಗೋಸ್ವಾಮಿ ಹಾಗೂ ರಾಜ್ಯದ ನನ್ನ ತೀರ್ಪಿನಲ್ಲಿ ನಾನು ಗಮನಿಸಿದಂತೆ, ನಮ್ಮ ನ್ಯಾಯಾಲಯಗಳು ನಾಗರಿಕರ ಸ್ವಾತಂತ್ರ್ಯದ ಕೊರತೆ ವಿರುದ್ಧ ರಕ್ಷಣೆಯಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ," ಎಂದು ಅಭಿಪ್ರಾಯಿಸಿದ್ದಾರೆ. "ಒಂದು ದಿನದ ಸ್ವಾತಂತ್ರ್ಯ ಕೊರತೆಯೂ ತುಂಬಾ ಹೆಚ್ಚು. ನಮ್ಮ ನಿರ್ಧಾರಗಳ ಆಳವಾದ ವ್ಯವಸ್ಥಿತ ಸಮಸ್ಯೆಗಳ ಬಗ್ಗೆ ನಾವು ಯಾವಾಗಲೂ ಜಾಗರೂಕರಾಗಿರಬೇಕು," ಎಂದರು.

ಸ್ಟಾನ್ ಸಾವಿನ ಬೆನ್ನಲ್ಲೇ ಸುಪ್ರೀಂ ನ್ಯಾಯಾಧೀಶರ ಹೇಳಿಕೆ
ಇನ್ನು ಕಳೆದ ವರ್ಷ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಅಥವಾ ಯುಎಪಿಎ ಅಡಿಯಲ್ಲಿ ಬಂಧಿಸಲ್ಪಟ್ಟ 84 ವರ್ಷದ ಕಾರ್ಯಕರ್ತ ಸ್ಟಾನ್ ಸ್ವಾಮಿ ಸಾವಿನ ಬಗ್ಗೆ ಆಕ್ರೋಶದ ಮಧ್ಯೆ ಈ ಹೇಳಿಕೆ ಬಂದಿದೆ. ಆರೋಗ್ಯದ ಕಾರಣಕ್ಕಾಗಿ ಜಾಮೀನು ಪಡೆಯಲು ಹಲವಾರು ಬಾರಿ ಪ್ರಯತ್ನ ಮಾಡಿದ ಸ್ಟಾನ್ ಕೊನೆಗೂ ಮುಂಬೈನಲ್ಲಿ ನಿಧನರಾದರು.

ಯುಎಪಿಎಯಡಿ ದಾಖಲಾದ ಪ್ರಕರಣಗಳು ಮುನ್ನಲೆಗೆ
ಯುಎಪಿಎ ಪ್ರಕರಣದಡಿ ದಾಖಲಾದ ಹಲವಾರು ಇತರ ಪ್ರಕರಣಗಳು ಇತ್ತೀಚೆಗೆ ಮುನ್ನಲೆಗೆ ಬಂದಿದೆ. ಈ ತಿಂಗಳ ಆರಂಭದಲ್ಲಿ, ಅಸ್ಸಾಂ ನಾಯಕ ಅಖಿಲ್ ಗೊಗೊಯ್ 1.5 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಅಖಿಲ್ ಗೊಗೊಯ್ ಬಂಧನಕ್ಕೆ ಒಳಗಾಗಿದ್ದರು. ಬಿಡುಗಡೆಯಾದ ಕೂಡಲೇ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ದುರುಪಯೋಗದ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದರು. ಮತ್ತೊಂದು ಪ್ರಕರಣದಲ್ಲಿ, ಭಯೋತ್ಪಾದನೆ ಆರೋಪದ ಮೇಲೆ ಬಂಧಿಸಲ್ಪಟ್ಟ ಕಾಶ್ಮೀರಿ ವ್ಯಕ್ತಿಯೊಬ್ಬನನ್ನು ಕೆಲವು ವಾರಗಳ ಹಿಂದೆ ಬಿಡುಗಡೆ ಮಾಡಲಾಯಿತು. 11 ವರ್ಷಗಳ ಕಾನೂನು ಹೋರಾಟದ ನಂತರ ನಿರಪರಾಧಿ ಎಂದು ಸಾಬೀತಾಗಿತ್ತು.

''ಭಾರತ ಮಾನವ ಹಕ್ಕುಗಳ ಗೌರವ ಕೇಂದ್ರಿಕೃತ''
ನ್ಯಾಯಮೂರ್ತಿ ಚಂದ್ರಚೂಡ್ ಇಂಡೋ-ಯುಎಸ್ ಸಂಬಂಧಗಳ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ "ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಮತ್ತು ಧಾರ್ಮಿಕ ಶಾಂತಿಯನ್ನು ಉತ್ತೇಜಿಸುವಲ್ಲಿ ಸಫಲವಾಗಿದೆ," ಎಂದು ಹೇಳಿದರು. "ಭಾರತವು ಅತ್ಯಂತ ಹಳೆಯ ಮತ್ತು ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ಬಹುಸಾಂಸ್ಕೃತಿಕ, ಬಹುತ್ವವಾದಿ ಸಮಾಜದ ಆದರ್ಶಗಳನ್ನು ಪ್ರತಿನಿಧಿಸುತ್ತದೆ. ಅಲ್ಲಿ ಸಂವಿಧಾನಗಳು ಆಳವಾದ ಬದ್ಧತೆ ಮತ್ತು ಮಾನವ ಹಕ್ಕುಗಳ ಗೌರವವನ್ನು ಕೇಂದ್ರೀಕರಿಸಿದೆ," ಎಂದು ಒತ್ತಿಹೇಳಿದ್ದಾರೆ.

''ಭಾರತ, ಯುಎಸ್ ಅತ್ಯಂತ ಶಕ್ತಿಶಾಲಿ ನ್ಯಾಯಾಲಯಗಳನ್ನು ಹೊಂದಿದೆ''
ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ನ ಉನ್ನತ ನ್ಯಾಯಾಲಯಗಳ ಬಗ್ಗೆ ಮಾತನಾಡಿದ ಚಂದ್ರಚೂಡ್, "ಎರಡೂ ತಮ್ಮ ಸ್ವಂತ ಶಕ್ತಿಯ ದೃಷ್ಟಿಯಿಂದ ಅತ್ಯಂತ ಶಕ್ತಿಶಾಲಿ ನ್ಯಾಯಾಲಯಗಳು ಎಂದು ಕರೆಯಲಾಗುತ್ತದೆ. ಯುಎಸ್ಎ ಭಾರತೀಯ ನ್ಯಾಯಶಾಸ್ತ್ರದ ಮೇಲೆ ಪ್ರಭಾವ ಬೀರುತ್ತದೆ. ಇದು ಭಾರತೀಯ ಸಂವಿಧಾನದ ಹೃದಯ ಮತ್ತು ಆತ್ಮಕ್ಕೆ ಕೊಡುಗೆ ನೀಡಿದೆ," ಎಂದು ನುಡಿದಿದ್ದಾರೆ. "ವಯಸ್ಕರ ನಡುವಿನ ಸಲಿಂಗ ಸಂಬಂಧದ ಬಗ್ಗೆ ನನ್ನ ತೀರ್ಪು ಲಾರೆನ್ಸ್ Vs ಟೆಕ್ಸಾಸ್ನ ಯುಎಸ್ ಸುಪ್ರೀಂ ಕೋರ್ಟ್ ತೀರ್ಪನ್ನು ಅವಲಂಬಿಸಿದೆ," ಎಂದು ತಿಳಿಸಿದರು.
(ಒನ್ಇಂಡಿಯಾ ಸುದ್ದಿ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications