ಮೂರೇ ನಿಮಿಷದಲ್ಲಿ ರೈಲ್ವೆ ಯೋಜನೆಗೆ ಸಚಿವ ಸುರೇಶ್ ಪ್ರಭು ಅಸ್ತು
ಯಾವುದೇ ಯೋಜನೆಗೆ ಒಪ್ಪಿಗೆ ಸೂಚಿಸುವುದಕ್ಕೆ ತಿಂಗಳುಗಳ ಸಮಯ, ಆ ನಂತರ ಅನುಷ್ಠಾನಕ್ಕೆ ವರ್ಷಗಟ್ಟಲೆ ಕಾಲ ಎಂದು ಸರಕಾರದ ಯೋಜನೆ ಬಗ್ಗೆ ನೀವಂದುಕೊಂಡಿದ್ದರೆ ಈ ವರದಿ ಓದಿ. ಮೂರು ನಿಮಿಷದಲ್ಲೇ ಆಗುವ ಜಾದೂ ಬಗ್ಗೆ ತಿಳಿಯಿರಿ
ಭುವನೇಶ್ವರ್, ಏಪ್ರಿಲ್ 30: ಈ ಘಟನೆ ಭಾರತದಲ್ಲೇ ನಡೆದಿದ್ದು, ಅದರಲ್ಲಿ ಸರಕಾರದ ಸಚಿವರ ಕಾಳಜಿ ಇದೆ ಅನ್ನೋದನ್ನು ಯಾರೂ ನಂಬಲು ಸಾಧ್ಯವಾಗದ ಘಟನೆಯೊಂದು ನಡೆದುಹೋಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಪ್ರಸ್ತಾವಿಸಿದ ಹೊಸ ರೈಲ್ವೆ ಮಾರ್ಗಕ್ಕೆ ರೈಲ್ವೆ ಸಚಿವ ಸುರೇಶ್ ಪ್ರಭು ಮೂರೇ ನಿಮಿಷದಲ್ಲಿ ಒಪ್ಪಿಗೆ ಸೂಚಿಸಿದ್ದಾರೆ.
ನವೀನ್ ಪಟ್ನಾಯಕ್ ಅವರು ಶುಕ್ರವಾರ ರಾತ್ರಿ 10.05ಕ್ಕೆ ಪುರಿ ಹಾಗೂ ಕೋನಾರ್ಕ್ ಮಧ್ಯೆ ಹೊಸ ರೈಲು ಮಾರ್ಗಕ್ಕೆ ಟ್ವಿಟ್ಟರ್ ಮೂಲಕ ಪ್ರಸ್ತಾವನೆ ಸಲ್ಲಿಸಿದ್ದಾರೆ. 10.08ಕ್ಕೆ ರೈಲ್ವ ಸಚಿವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯೋಜನೆಗೆ ತಗುಲುವ ವೆಚ್ಚದ ಶೇ 50ರಷ್ಟನ್ನು ರಾಜ್ಯ ಸರಕಾರವೇ ಭರಿಸುತ್ತದೆ ಎಂದು ತಿಳಿಸಿದ್ದಾರೆ.[ರೈಲ್ವೆ ಸಚಿವ ಸುರೇಶ್ ಪ್ರಭು ಬಿಚ್ಚಿಟ್ಟ 20 ನಿಮಿಷದ ಸ್ಪಂದನೆ ಎಂಬ ದಿವ್ಯಮಂತ್ರ]
CM @Naveen_Odisha proposes state sharing 50% of project cost for new rail line from Puri to Konark to boost tourism potential in #Odisha 1/3 pic.twitter.com/5tt2r0Ma3P
— CMO Odisha (@CMO_Odisha) 28 April 2017
CM@Naveen_Odisha ಪುರಿ ಹಾಗೂ ಕೋನಾರ್ಕ್ ಹೊಸ ರೈಲು ಮಾರ್ಗಕ್ಕೆ ಶೇ 50ರಷ್ಟು ಯೋಜನಾ ವೆಚ್ಚ ಭರಿಸುವುದಾಗಿಯೂ, ಇದರಿಂದ ಪ್ರವಾಸೋದ್ಯಮಕ್ಕೆ ಅನುಕೂಲವಾಗುತ್ತದೆ #Odisha ಎಂದು ಮುಖ್ಯಮಂತ್ರಿ ಕಚೇರಿಯಿಂದ ಟ್ವೀಟ್ ಮಾಡಲಾಗಿದೆ.
We are ready to sign it any day,we are waiting for it, as it was our initiative to share ownership with states of these JVs. @Naveen_Odisha https://t.co/LTurg6jsYv
— Suresh Prabhu (@sureshpprabhu) 28 April 2017
ಅದಕ್ಕೆ ತಕ್ಷಣವೇ ಸುರೇಶ್ ಪ್ರಭು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. "ನಾವು ಅದಕ್ಕೆ ಯಾವಾಗಲಾದರೂ ಸಹಿ ಹಾಕಲು ಸಿದ್ಧರಿದ್ದೇವೆ. ಅದಕ್ಕಾಗಿ ಕಾಯುತ್ತಿದ್ದೇವೆ. ರಾಜ್ಯಗಳ ಜತೆಗೆ ಈ ರೀತಿ ಯೋಜನೆಯಲ್ಲಿ ಪಾಲ್ಗೊಳ್ಳುವುದು ನಮ್ಮ ಉದ್ದೇಶ" ಎಂದಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications