ಅರಾವಳಿ ಪರ್ವತ ಶ್ರೇಣಿ ಗಣಿಗಾರಿಕೆ: ಜನಾಂದೋಲನಕ್ಕೆ ಜಯ, ಸುಪ್ರೀಂ ಕೋರ್ಟ್ ಹೊಸ ಆದೇಶ
ನವದೆಹಲಿ: ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿ ಗಣಿಗಾರಿಕೆ ವಿಚಾರದಲ್ಲಿ ಜನರ ಆಂದೋಲನಕ್ಕೆ ಜಯ ಸಿಕ್ಕಿದೆ. ಅರಾವಳಿ ಪವರ್ತ ಶ್ರೇಣಿಯಲ್ಲಿ ಗಣಿಗಾರಿಕೆಗೆ ಅವಕಾಶ ಕಲ್ಪಿಸುವ (ನಿಗದಿತ ಮಿತಿಯನ್ನು ತೆಗೆದು ಹಾಕಿದ್ದು) ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಸರವಾದಿಗಳು ಹಾಗೂ ರಾಜಸ್ಥಾನದ ಜನ ಸೇರಿದಂತೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ದೆಹಲಿಗೆ ಕೆಲವೇ ಕಿ.ಮೀ ದೂರದಲ್ಲಿರುವ ಅರಾವಳಿ ಪರ್ವತ ಶ್ರೇಣಿಯ ಗಣಿಗಾರಿಕೆಯ ಬಗ್ಗೆ ಪರಿಷ್ಕೃತ ವ್ಯಾಖ್ಯಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಅಂಗೀಕರಿಸಿತ್ತು. ಇದೀಗ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ. ಈ ನಿರ್ಧಾರವು ಪರಿಸರ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ವಿಶಾಲ ಪ್ರದೇಶಗಳಲ್ಲಿ ಅಕ್ರಮ ಮತ್ತು ಅನಿಯಂತ್ರಿತ ಗಣಿಗಾರಿಕೆಗೆ ಕಾರಣವಾಗಲಿದೆ ಎಂದು ಪರಿಸರವಾದಿಗಳು ಮತ್ತು ವಿಜ್ಞಾನಿಗಳು ಆರೋಪಿಸಿದ್ದರು. ಹಲವರು ಬೀದಿಗೆ ಇಳಿದು ಪ್ರತಿಭಟನೆಗಳನ್ನು ನಡೆಸಿದ್ದರು.

ಸೋಮವಾರ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ರಜಾಕಾಲದ ಪೀಠವು, ಸಮಿತಿಯ ಶಿಫಾರಸುಗಳು ಮತ್ತು ಈ ನ್ಯಾಯಾಲಯದ ನಿರ್ದೇಶನಗಳನ್ನು ಸ್ಥಗಿತಗೊಳಿಸುವುದು ಅಗತ್ಯವೆಂದು ನಾವು ಪರಿಗಣಿಸುತ್ತೇವೆ ಎಂದು ಹೇಳಿದೆ. ಈ ಮೂಲಕ ಜನರ ಹೋರಾಟಕ್ಕೆ ಗೆಲುವಾಗಿದೆ. ಇನ್ನು ಇದೇ ಸಂದರ್ಭದಲ್ಲಿ ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿಯ ನವೀಕರಿಸಿದ ವ್ಯಾಖ್ಯಾನದ ಪ್ರಕಾರ ಪರಿಶೀಲಿಸಬೇಕಾದ ಅಥವಾ ಮರುಪರಿಶೀಲಿಸಬೇಕಾದ ವಿಷಯಗಳ ಅಧ್ಯಯನಕ್ಕಾಗಿ ಹೊಸ ಸಮಿತಿಯನ್ನು ರಚಿಸುವಂತೆ ನ್ಯಾಯಾಲಯ ಆದೇಶಿಸಿದೆ.
ನಾಲ್ಕು ರಾಜ್ಯಗಳಿಗೆ ನೋಟಿಸ್
ಇನ್ನು ಅರಾವಳಿ ಪರ್ವತ ಶ್ರೇಣಿಗಳನ್ನು ಒಳಗೊಂಡಿರುವ ನಾಲ್ಕು ಪ್ರಮುಖ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ರಾಜಸ್ಥಾನ, ಗುಜರಾತ್, ದೆಹಲಿ ಹಾಗೂ ಹರಿಯಾಣಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನು ಜನವರಿ 21ಕ್ಕೆ ನಿಗದಿ ಮಾಡಲಾಗಿದೆ.
ಸ್ವಯಂ ಪ್ರೇರಿತ ದೂರು ದಾಖಲು
ಅರಾವಳಿ ಪರ್ವತ ಶ್ರೇಣಿಗಳಲ್ಲಿ ಹೊಸ ವ್ಯಾಖ್ಯಾನದ ಪ್ರಕಾರ 100 ಮೀ.ಗಿಂತ ಕಡಿಮೆ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಶನಿವಾರ ಅರಾವಳಿ ಪವರ್ತಗಳ ಬದಲಾದ ವ್ಯಾಖ್ಯಾನದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಮಾಡಲು ನಿರ್ಧರಿಸಿತ್ತು.
ಕೇಂದ್ರ ಸರ್ಕಾರವು ಹೊಸ ವ್ಯಾಖ್ಯಾನವನ್ನು ಸೂಚಿಸಿದ ನಂತರ ವಿವಾದ ಪ್ರಾರಂಭವಾಗಿತ್ತು. ಇದನ್ನು ಸಾಕಷ್ಟು ಪರಿಶೀಲನೆ ಮಾಡದೆ ಅಥವಾ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿದೆ ಜಾರಿ ಮಾಡಲಾಗುತ್ತಿದೆ ಎನ್ನುವ ವಿರೋಧವು ವ್ಯಕ್ತವಾಗಿತ್ತು.
ಕೇಂದ್ರದಿಂದ ಗಣಿಗಾರಿಕೆ ನಿಷೇಧ
ಅರಾವಳಿ ಪರ್ವತ ಶ್ರೇಣಿಗಳ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿವಾದಗಳು ಹೆಚ್ಚಾದ ಬೆನ್ನಲ್ಲೇ ಡಿಸೆಂಬರ್ 25ರಂದು ಕೇಂದ್ರ ಸರ್ಕಾರವು ಅರಾವಳಿಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿತು. ಈ ಸಂಬಂಧ ಅರಾವಳಿ ಪವರ್ತ ಶ್ರೇಣಿ ವ್ಯಾಪ್ತಿಯ ರಾಜ್ಯಗಳಿಗೆ ಸೂಚನೆ ನೀಡಿತ್ತು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಗಣಿಗಾರಿಕೆ ಪ್ರದೇಶದಲ್ಲಿ ರಾಜ್ಯ ಸರ್ಕಾರಗಳು ಎಲ್ಲಾ ಪರಿಸರ ಸುರಕ್ಷತೆಗಳೊಂದಿಗೆ ಕಟ್ಟುನಿಟ್ಟಾದ ನಿಯಮ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.
ಅರಾವಳಿ ಪರ್ವತ ಶ್ರೇಣಿ ಏನಿದು ?
ಅರಾವಳಿ ಪರ್ವತ ಶ್ರೇಣಿಯು ಉತ್ತರ ಭಾರತದ ಹಸಿರು ತಡೆಗೋಡೆ ಅಂತಲೇ ಖ್ಯಾತಿ ಗಳಿಸಿದೆ. ದೆಹಲಿ ಸಮೀಪದಲ್ಲಿ ಪ್ರಾರಂಭವಾಗಿ ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಮೂಲಕ ಹಾದುಹೋಗುತ್ತದೆ. ಈ ಪವರ್ತ ಶ್ರೇಣಿಯು 670 ಕಿಮೀ ಉದ್ದವಾಗಿದೆ.
ಇದು ಭಾರತದ ಎರಡು ಶತಕೋಟಿ ವರ್ಷಗಳಷ್ಟು ಹಳೆಯದಾದ ಪರ್ವತ ಶ್ರೇಣಿಯಾಗಿದೆ. ದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಈ ಗಣಿಗಾರಿಕೆ ಬೇಡ ಎಂದು ಜನ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ್ದರು.
-
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳ ಆಯೋಜನೆಗೆ ಆರ್ಸಿಬಿ ಒಪ್ಪಿಗೆ -
Dharavi Slum: ಏಷ್ಯಾದ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಬಡತನವೂ ಬಂಡವಾಳ, ಧಾರಾವಿ ಸಂಪೂರ್ಣ ವಿವರ ಇಲ್ಲಿದೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಇರಾನ್-ಇಸ್ರೇಲ್ ಸಂಘರ್ಷ: ಕತಾರ್ನಲ್ಲಿ LNG ಉತ್ಪಾದನೆ ಸ್ಥಗಿತ: ಗಗನಕ್ಕೇರಿದ ತೈಲ ಮತ್ತು ಅನಿಲ ಬೆಲೆ












Click it and Unblock the Notifications