ಜಗಳ ಬಿಡಿಸಲು ಬಂದು ಜಗಳಕ್ಕೆ ನಿಂತ ಫುಡ್ ಡೆಲಿವರಿ ಬಾಯ್
ಭುವನೇಶ್ವರ ಏಪ್ರಿಲ್ 1: ಸಾಮಾನ್ಯವಾಗಿ ರಸ್ತೆ-ಪಾರ್ಕ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಜಗಳ ಗಲಾಟೆ ಕಂಡುಬಂದರೆ ಅದನ್ನು ತಡೆಯಲು ಜನ ಮುಂದಾಗುತ್ತಾರೆ. ವಾಗ್ವಾದ ವಿಕೋಪಕ್ಕೆ ತಿರುಗದಂತೆ ನೋಡಿಕೊಳ್ಳಲು ಮುಂದಾಗುತ್ತಾರೆ. ಆದರೆ ಇಲ್ಲೊಬ್ಬ ಫುಡ್ ಡೆಲಿವರಿ ಬಾಯ್ ಜಗಳ ಬಿಡಿಸಲು ಹೋಗಿ ತಾನೇ ಜಗಳಕ್ಕೆ ನಿಂತ ಘಟನೆ ನಡೆದಿದೆ. ಮಾತ್ರವಲ್ಲದೆ ಯುವತಿಗೆ ಮನಬಂದಂತೆ ಥಳಿಸಿದ್ದಾನೆ.
ಪ್ರೇಮಿಗಳ ನಡುವಿನ ವಿವಾದ ಬಗೆಹರಿಸಲು ಬಂದ ಫುಡ್ ಡೆಲಿವರಿ ಬಾಯ್ ಸ್ವತ: ಜಗಳಕ್ಕೆ ನಿಂತ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಮಾತ್ರವಲ್ಲದೆ ಜಗಳ ಬಿಡಿಸಲು ಮುಂದಾದ ಫುಡ್ ಡೆಲಿವರಿ ಬಾಯ್ ಯುವತಿಗೆ ಥಳಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭುವನೇಶ್ವರದ ಇಂದಿರಾ ಪಾರ್ಕ್ಗೆ ಆಗಮಿಸಿದ ದಂಪತಿ ಪರಸ್ಪರ ಜಗಳವಾಡುತ್ತಿದ್ದರು.
ಯುವತಿಯು ಯುವಕನಿಗೆ ಜಗಳ ಮಾಡಿ ಕಿರುಕುಳ ನೀಡುತ್ತಿರುವುದು ವಿಡಿಯೋ ದೃಶ್ಯಾವಳಿಯಲ್ಲಿ ಕಾಣಬಹುದು. ಈ ದೃಶ್ಯಾವಳಿಯಲ್ಲಿ ಯುವತಿ ಯುವಕನ ಮೇಲೆ ಕಲ್ಲು ಎಸೆಯುತ್ತಿರುವ ದೃಶ್ಯವೂ ಇದೆ. ಜೊತೆಗೆ ಆಕೆ ಯುವಕನಿಗೆ ಥಳಿಸುತ್ತಾಳೆ. ಇವರಿಬ್ಬರ ಹೊಡೆದಾಟ ಕಂಡು ಜನ ದೌಡಾಯಿಸುತ್ತಾರೆ. ಜೊತೆಗೆ ಇವರ ಜಗಳವನ್ನು ಜನರು ಫೋನ್ನಲ್ಲಿ ರೆಕಾರ್ಡ್ ಮಾಡಲು ಮುಂದಾಗುತ್ತಾರೆ. ಇದನ್ನು ಕಂಡು ಯುವತಿ ಮತ್ತೆ ಆಕ್ರೋಶ ವ್ಯಕ್ತಪಡಿಸುತ್ತಾಳೆ. ಬಾಲಕಿಯು ಜನರಿಂದ ಫೋನ್ ಕಸಿದುಕೊಳ್ಳಲು ಪ್ರಯತ್ನಿಸುತ್ತಾಳೆ.

ಈ ವೇಳೆ ಫುಡ್ ಡೆಲಿವರಿ ಬಾಯ್ ಬರುತ್ತಾನೆ. ಘಟನೆಯಲ್ಲಿ ಮಧ್ಯಸ್ಥಿಕೆ ವಹಿಸಲು ಯತ್ನಿಸುತ್ತಾನೆ. ಬಳಿಕ ಯುವತಿ ಡೆಲಿವರಿ ಬಾಯ್ ಜೊತೆ ಜಗಳವಾಡುತ್ತಾಳೆ. ಡೆಲಿವರಿ ಬಾಯ್ ವಿರುದ್ಧವೂ ಯುವತಿ ಅವಾಚ್ಯ ಶಬ್ದ ಬಳಸಿದ್ದಾಳೆ. ಅಷ್ಟರಲ್ಲಿ ಡೆಲಿವರಿ ಬಾಯ್ ತಾಳ್ಮೆ ಕಳೆದುಕೋಂಡು ಯುವತಿಗೆ ಥಳಿಸಿದ್ದಾನೆ.
Girl direct volley of expletives, beat up Boyfriend in full public glare outside #IG Park in #Bhubaneswar pic.twitter.com/7ZVUrfz7Wd
— Mohammad Suffian (@iamsuffian) March 31, 2022
ಈ ವೇಳೆ ಗುಂಪು ಮಧ್ಯ ಪ್ರವೇಶಿಸಿ ಇಬ್ಬರನ್ನು ಸಮಾಧಾನ ಪಡಿಸಲು ಯತ್ನಿಸಿದೆ. ನಂತರ ಇವರಿಬ್ಬರೂ ಪೊಲೀಸರಿಗೆ ದೂರು ನೀಡಿಲ್ಲ. ವಿಡಿಯೋ ವೈರಲ್ ಆದ ಬಳಿಕ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಭುವನೇಶ್ವರ ಡಿಸಿಪಿ ಉಮಾ ಶಂಕರ್ ತಿಳಿಸಿದ್ದಾರೆ.
Recommended Video
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications