Get Updates
Get notified of breaking news, exclusive insights, and must-see stories!

ವಾಯುಪಡೆ ಮುಖ್ಯಸ್ಥ ಅರ್ಜಾನ್ ನಿಧನಕ್ಕೆ ಪ್ರಧಾನಿ, ರಾಷ್ಟ್ರಪತಿ ಶೋಕ

ನವದೆಹಲಿ, ಸೆಪ್ಟೆಂಬರ್ 16: ಭಾರತೀಯ ವಾಯುಸೇನಾ ಮುಖ್ಯಸ್ಥರಾದ ಅರ್ಜಾನ್ ಸಿಂಗ್ (98) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಶೋಕ ವ್ಯಕ್ತಪಡಿಸಿದ್ದಾರೆ.

ಶನಿವಾರ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು, ಇಲ್ಲಿನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದರು.

Arjan Singh, Marshal of Indian Air Force, Dies At 98

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಆಸ್ಪತ್ರೆಗೆ ಭೇಟಿ ಅರ್ಜಾನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.

ಪ್ರಧಾನಿ, ರಾಷ್ಟ್ರಪತಿ ಶೋಕ: ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶವು ಇಂದು ಮಹಾನ್ ಯೋಧರೊಬ್ಬರನ್ನು ಕಳೆದುಕೊಂಡಿದೆ. ದೇಶಕ್ಕೆ ಅವರು ಮಾಡಿದ ಸೇವೆಯನ್ನು ಚಿರಸ್ಮರಣೀಯ ಎಂದಿದ್ದಾರೆ.

ಸಿಂಗ್ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ''ಭಾರತ ಕಂಡ ವೀರ ಸೇನಾನಿ ಹಾಗೂ ವಾಯು ಸೇನೆಯ ಮಾರ್ಷಲ್ ಆಗಿದ್ದ ಅರ್ಜಾನ್ ಸಿಂಗ್ ಅವರ ನಿಧನದ ವಾರ್ತೆ ದುಃಖವಾಗಿದೆ. ಅಂಥ ಮಹಾನ್ ಯೋಧನನ್ನು ಕಳೆದುಕೊಂಡ ಭಾರತೀಯ ವಾಯು ಸೇನೆಗೆ ಹಾಗೂ ಸಿಂಗ್ ಅವರ ಕುಟುಂಬಕ್ಕೆ ನಾನು ಸಾಂತ್ವನ ಹೇಳಬಯಸುತ್ತೇನೆ'' ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+