ಹೈದರಾಬಾದ್ನಲ್ಲಿ ಪೊಲೀಸರ ಮೇಲೂ ಗುಂಡು ಹಾರಿಸಿದ ಬೀದರ್ ಎಟಿಎಂ ದರೋಡೆಕೋರರು
ಹಾಡು ಹಗಲೆ ಬೀದರ್ನಲ್ಲಿ ಎಸ್ಬಿಐನ ಬ್ಯಾಂಕ್ನ ಎಟಿಎಂನಲ್ಲಿ ಹಣ ಜಮೆ ಮಾಡಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ದರೋಡೆಕೋರರು ಇಬ್ಬರನ್ನು ಕೊಂದು 93 ಲಕ್ಷ ರೂಪಾಯಿ ಎಗರಿಸಿದ್ದ ಖದೀಮರು ಇದೀಗ ಹೈದರಾಬಾದ್ನಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಅಂತಾರಾಜ್ಯ ದರೋಡೆಕೋರರ ಕೃತ್ಯ ಕಂಡು ಎರಡೂ ರಾಜ್ಯದ ಜನ ಬೆಚ್ಚಿಬಿದ್ದಿದ್ದಾರೆ.
ಬೀದರ್ ಪೊಲೀಸರು ಅಪರಾಧಿಗಳನ್ನು ಹಿಡಿಯಲು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬೀದರ್ ನಲ್ಲಿ ದರೋಡೆ ಮಾಡಿರುವ ದುಷ್ಕರ್ಮಿಗಳು ಇಲ್ಲಿಂದ ತಪ್ಪಿಸಿಕೊಂಡ ಬಳಿಕ ಹೈದರಾಬಾದ್ ತಲುಪಿದ್ದಾರೆ. ಶಸ್ತ್ರಸಜ್ಜಿತ ದರೋಡೆಕೋರರು ಹೈದರಾಬಾದ್ನ ಅಫ್ಜಲ್ಗಂಜ್ನಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ.

ಜನನಿಬಿಡ ಪ್ರದೇಶದಲ್ಲೇ ಪೊಲೀಸರ ಮೇಲೆ ಗುಂಡು ಹಾರಿಸಿದ ಘಟನೆ ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಬೀದರ್ ನಿಂದ ಓಡಿಹೋದ ಕಳ್ಳರನ್ನು ಹಿಡಿಯಲು ಪೊಲೀಸ್ ತಂಡಗಳು ಬೆನ್ನು ಬಿದ್ದಿದ್ದು ಹೈದರಾಬಾದ್ನ ಅಫ್ಜಲ್ಗಂಜ್ನಲ್ಲಿ ಮುಖಾಮುಖಿಯಾಗಿದ್ದು ಗುಂಡಿನ ದಾಳಿ ನಡೆದಿದೆ.
ದರೋಡೆ ಮಾಡಿದ್ದ ತಂಡದ ಇಬ್ಬರು ಸದಸ್ಯರನ್ನು ಹೈದರಾಬಾದ್ನ ಅಫ್ಜಲ್ಗಂಜ್ನಲ್ಲಿ ಗುರುತಿಸಲಾಗಿದ್ದು ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದಾಗ ಒಬ್ಬ ದುಷ್ಕರ್ಮಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸರು ಕೂಡ ಪ್ರತಿದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಡಹಗಲೇ ದರೋಡೆ
ಬೀದರ್ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದ ಶೂಟೌಟ್ ವಿಚಾರ ತಿಳಿದು ರಾಜ್ಯದ ಜನತೆಯೇ ಬೆಚ್ಚಿಬಿದ್ದಿದ್ದಾರೆ. ಎಸ್ಬಿಐ ಮುಖ್ಯ ಕಚೇರಿ ಎದುರಿನಲ್ಲಿ ಗುಂಡಿನ ದಾಳಿ ನಡೆದಿದೆ. ಸಮೀಪದಲ್ಲೇ ಜಿಲ್ಲಾಧಿಕಾರಿಗಳ ಕಚೇರಿಯೂ ಇದ್ದು, ಆದರೂ ದರೋಡೆಕೋರರು ನಿರ್ಭಯವಾಗಿ ನಡುರಸ್ತೆಯಲ್ಲಿ ಪಿಸ್ತೂಲ್ ಹಿಡಿದು ಇಬ್ಬರು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 93 ಲಕ್ಷ ರೂಪಾಯಿ ಹಣ ಇದ್ದ ಪೆಟ್ಟಿಗೆಯನ್ನು ತೆಗೆದುಕೊಂಡಿ ಪರಾರಿಯಾಗಿದ್ದರು.
ನೂರಾರು ಜನ ಈ ಭೀಕರ ದೃಶ್ಯವನ್ನು ಮೂಕ ಪ್ರೇಕ್ಷಕರಂತೆ ನೋಡಿದರು. ದುಷ್ಕರ್ಮಿಗಳ ಕೈಯಲ್ಲಿ ಪಿಸ್ತೂಲ್ ಇರುವ ಕಾರಣ ಜನ ಭಯಬೀತರಾಗಿದ್ದರು. ಘಟನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ದರೋಡೆಕೋರರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚನೆ ಮಾಡಿದೆ.
ಬೀದರ್ ಘಟನೆಗೆ ವಿಪಕ್ಷಗಳು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಕಿಡಿಕಾರಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಘಟನೆಯನ್ನು ಖಂಡಿಸಿದ್ದು, ರಾಜಯದಲ್ಲಿ ಕಾನೂನು ಸುವ್ಯವಸ್ಥೆ ತಳಕಚ್ಚಿದ್ದು, ದುಷ್ಟ ಶಕ್ತಿಗಳಿಗೆ ಉತ್ತೇಜನ ನೀಡುತ್ತಿರುವುದು ಇಂತಹ ಕ್ರಿಮಿನಲ್ ಅಪರಾಧಗಳು, ಮಾಫಿಯಾಗಳು, ಅಟ್ಟಹಾಸ ಮೆರೆಯುತ್ತಿವೆ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದ್ದಾರೆ.
-
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications