ಹೈದರಾಬಾದ್ನಲ್ಲಿ ಪೊಲೀಸರ ಮೇಲೂ ಗುಂಡು ಹಾರಿಸಿದ ಬೀದರ್ ಎಟಿಎಂ ದರೋಡೆಕೋರರು
ಹಾಡು ಹಗಲೆ ಬೀದರ್ನಲ್ಲಿ ಎಸ್ಬಿಐನ ಬ್ಯಾಂಕ್ನ ಎಟಿಎಂನಲ್ಲಿ ಹಣ ಜಮೆ ಮಾಡಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ದರೋಡೆಕೋರರು ಇಬ್ಬರನ್ನು ಕೊಂದು 93 ಲಕ್ಷ ರೂಪಾಯಿ ಎಗರಿಸಿದ್ದ ಖದೀಮರು ಇದೀಗ ಹೈದರಾಬಾದ್ನಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಅಂತಾರಾಜ್ಯ ದರೋಡೆಕೋರರ ಕೃತ್ಯ ಕಂಡು ಎರಡೂ ರಾಜ್ಯದ ಜನ ಬೆಚ್ಚಿಬಿದ್ದಿದ್ದಾರೆ.
ಬೀದರ್ ಪೊಲೀಸರು ಅಪರಾಧಿಗಳನ್ನು ಹಿಡಿಯಲು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬೀದರ್ ನಲ್ಲಿ ದರೋಡೆ ಮಾಡಿರುವ ದುಷ್ಕರ್ಮಿಗಳು ಇಲ್ಲಿಂದ ತಪ್ಪಿಸಿಕೊಂಡ ಬಳಿಕ ಹೈದರಾಬಾದ್ ತಲುಪಿದ್ದಾರೆ. ಶಸ್ತ್ರಸಜ್ಜಿತ ದರೋಡೆಕೋರರು ಹೈದರಾಬಾದ್ನ ಅಫ್ಜಲ್ಗಂಜ್ನಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ.

ಜನನಿಬಿಡ ಪ್ರದೇಶದಲ್ಲೇ ಪೊಲೀಸರ ಮೇಲೆ ಗುಂಡು ಹಾರಿಸಿದ ಘಟನೆ ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಬೀದರ್ ನಿಂದ ಓಡಿಹೋದ ಕಳ್ಳರನ್ನು ಹಿಡಿಯಲು ಪೊಲೀಸ್ ತಂಡಗಳು ಬೆನ್ನು ಬಿದ್ದಿದ್ದು ಹೈದರಾಬಾದ್ನ ಅಫ್ಜಲ್ಗಂಜ್ನಲ್ಲಿ ಮುಖಾಮುಖಿಯಾಗಿದ್ದು ಗುಂಡಿನ ದಾಳಿ ನಡೆದಿದೆ.
ದರೋಡೆ ಮಾಡಿದ್ದ ತಂಡದ ಇಬ್ಬರು ಸದಸ್ಯರನ್ನು ಹೈದರಾಬಾದ್ನ ಅಫ್ಜಲ್ಗಂಜ್ನಲ್ಲಿ ಗುರುತಿಸಲಾಗಿದ್ದು ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದಾಗ ಒಬ್ಬ ದುಷ್ಕರ್ಮಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸರು ಕೂಡ ಪ್ರತಿದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಡಹಗಲೇ ದರೋಡೆ
ಬೀದರ್ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದ ಶೂಟೌಟ್ ವಿಚಾರ ತಿಳಿದು ರಾಜ್ಯದ ಜನತೆಯೇ ಬೆಚ್ಚಿಬಿದ್ದಿದ್ದಾರೆ. ಎಸ್ಬಿಐ ಮುಖ್ಯ ಕಚೇರಿ ಎದುರಿನಲ್ಲಿ ಗುಂಡಿನ ದಾಳಿ ನಡೆದಿದೆ. ಸಮೀಪದಲ್ಲೇ ಜಿಲ್ಲಾಧಿಕಾರಿಗಳ ಕಚೇರಿಯೂ ಇದ್ದು, ಆದರೂ ದರೋಡೆಕೋರರು ನಿರ್ಭಯವಾಗಿ ನಡುರಸ್ತೆಯಲ್ಲಿ ಪಿಸ್ತೂಲ್ ಹಿಡಿದು ಇಬ್ಬರು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 93 ಲಕ್ಷ ರೂಪಾಯಿ ಹಣ ಇದ್ದ ಪೆಟ್ಟಿಗೆಯನ್ನು ತೆಗೆದುಕೊಂಡಿ ಪರಾರಿಯಾಗಿದ್ದರು.
ನೂರಾರು ಜನ ಈ ಭೀಕರ ದೃಶ್ಯವನ್ನು ಮೂಕ ಪ್ರೇಕ್ಷಕರಂತೆ ನೋಡಿದರು. ದುಷ್ಕರ್ಮಿಗಳ ಕೈಯಲ್ಲಿ ಪಿಸ್ತೂಲ್ ಇರುವ ಕಾರಣ ಜನ ಭಯಬೀತರಾಗಿದ್ದರು. ಘಟನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ದರೋಡೆಕೋರರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚನೆ ಮಾಡಿದೆ.
ಬೀದರ್ ಘಟನೆಗೆ ವಿಪಕ್ಷಗಳು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಕಿಡಿಕಾರಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಘಟನೆಯನ್ನು ಖಂಡಿಸಿದ್ದು, ರಾಜಯದಲ್ಲಿ ಕಾನೂನು ಸುವ್ಯವಸ್ಥೆ ತಳಕಚ್ಚಿದ್ದು, ದುಷ್ಟ ಶಕ್ತಿಗಳಿಗೆ ಉತ್ತೇಜನ ನೀಡುತ್ತಿರುವುದು ಇಂತಹ ಕ್ರಿಮಿನಲ್ ಅಪರಾಧಗಳು, ಮಾಫಿಯಾಗಳು, ಅಟ್ಟಹಾಸ ಮೆರೆಯುತ್ತಿವೆ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದ್ದಾರೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು












Click it and Unblock the Notifications