ಆಪರೇಷನ್ ಸಿಂಧೂರದ ವೇಳೆ ಗೋಲ್ಡನ್ ಟೆಂಪಲ್ನಲ್ಲಿ ವಾಯು ರಕ್ಷಣಾ ವ್ಯವಸ್ಥೆ ಮಾಡಿರಲಿಲ್ಲ ಎಂದ ಸೇನೆ
ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪಾಕಿಸ್ತಾನದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಎದುರಿಸಲು ಅಮೃತಸರದ ಗೋಲ್ಡನ್ ಟೆಂಪಲ್ ಒಳಗೆ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸಲಾಗಿದೆ ಎನ್ನುವ ವದಂತಿಗಳನ್ನು ಭಾರತೀಯ ಸೇನೆ ನಿರಾಕರಿಸಿದೆ.
ಗೋಲ್ಡನ್ ಟೆಂಪಲ್ನಲ್ಲಿ ಎಡಿ ಗನ್ಗಳ ನಿಯೋಜನೆಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮ ವರದಿಗಳು ಪ್ರಸಾರವಾಗುತ್ತಿವೆ. ಶ್ರೀ ದರ್ಬಾರ್ ಸಾಹಿಬ್ ಅಮೃತಸರ (ಗೋಲ್ಡನ್ ಟೆಂಪಲ್) ಆವರಣದಲ್ಲಿ ಯಾವುದೇ ಎಡಿ (Anti Drone) ಗನ್ಗಳು ಅಥವಾ ಯಾವುದೇ ಇತರ ಎಡಿ ಸಂಪನ್ಮೂಲಗಳನ್ನು ನಿಯೋಜಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಭಾರತೀಯ ಸೇನೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಪ್ರಾರಂಭಿಸಿದ ಆಪರೇಷನ್ ಸಿಂಧೂರ್ಗೆ ಪ್ರತಿಕ್ರಿಯೆಯಾಗಿ ಅಮೃತಸರವನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಡ್ರೋನ್ಗಳು ಮತ್ತು ಸ್ಪೋಟಕಗಳು ಹಲವು ಬಾರಿ ದಾಳಿ ಮಾಡಿದ್ದವು.
ವದಂತಿಗಳ ಬಗ್ಗೆ ಸ್ಪಷ್ಟೀಕರಣ
ಗೋಲ್ಡನ್ ಟೆಂಪಲ್ನ ಮುಖ್ಯ ಗ್ರಂಥಿ ಸಿಂಗ್ ಸಾಹಿಬ್ ಗಿಯಾನಿ ರಘುಬೀರ್ ಸಿಂಗ್ ಸಹ ದೇವಾಲಯ ಆವರಣದಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳ ನಿಯೋಜನೆಯನ್ನು ತಳ್ಳಿಹಾಕಿದರು. "ಭಾರತೀಯ ಸೇನೆ ನಮ್ಮನ್ನು ಸಂಪರ್ಕಿಸಿದೆ ಎಂಬ ಮಾಹಿತಿ ನನಗಿಲ್ಲ. ನಾನು ರಜೆಯಲ್ಲಿದ್ದೆ ಮತ್ತು ವಿದೇಶಕ್ಕೆ ಪ್ರಯಾಣಿಸುತ್ತಿದ್ದೆ. ಈ ವಿಷಯದ ಬಗ್ಗೆ ನಾನು ಸಂಪೂರ್ಣ ತನಿಖೆಯನ್ನು ಬಯಸುತ್ತೇನೆ. ಇದರ ಹಿಂದೆ ಭಾರತೀಯ ಸೇನೆಯ ನಿಜವಾದ ಉದ್ದೇಶ ಏನೆಂದು ಸ್ಪಷ್ಟಪಡಿಸಬೇಕು" ಎಂದು ಹೇಳಿದ್ದಾರೆ.
ಪವಿತ್ರ ಆವರಣದಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸಲು ಸ್ವರ್ಣ ಮಂದಿರದ ಮುಖ್ಯ ಗ್ರಂಥಿ ನಮಗೆ ಅನುಮತಿ ನೀಡಿದ್ದಾರೆ ಎಂದು ವಾಯು ರಕ್ಷಣಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಸುಮರ್ ಇವಾನ್ ಡಿ'ಕುನ್ಹಾ ಹೇಳಿದ್ದಾರೆ ಎಂದು ಹಲವು ವರದಿಗಳು ತಿಳಿಸಿದ್ದರಿಂದ ವಿವಾದ ಶುರುವಾಗಿತ್ತು.
"ಸುವರ್ಣ ಮಂದಿರದ ಮುಖ್ಯ ಗ್ರಂಥಿ ನಮ್ಮ ಬಂದೂಕುಗಳನ್ನು ನಿಯೋಜಿಸಲು ನಮಗೆ ಅವಕಾಶ ಮಾಡಿಕೊಟ್ಟಿದ್ದು ತುಂಬಾ ಸಂತೋಷವಾಯಿತು. ಡ್ರೋನ್ ಬರುವುದನ್ನು ನಾವು ನೋಡುವಂತೆ ಅವರು ಸ್ವರ್ಣ ಮಂದಿರದ ದೀಪಗಳನ್ನು ಆಫ್ ಮಾಡಿರುವುದು ಬಹುಶಃ ಹಲವು ವರ್ಷಗಳಲ್ಲಿ ಮೊದಲ ಬಾರಿಗೆ ಆಗಿರಬಹುದು" ಎಂದು ಲೆಫ್ಟಿನೆಂಟ್ ಜನರಲ್ ಸುಮರ್ ಇವಾನ್ ಡಿ'ಕುನ್ಹಾ ಸುದ್ದಿ ಸಂಸ್ಥೆ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.
15 ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಅವರು ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಎಲ್ಲಾ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಸೇನಾ ವಾಯು ರಕ್ಷಣಾ ಗನ್ನರ್ಗಳು ಯಶಸ್ವಿಯಾಗಿ ತಡೆಹಿಡಿದಿದ್ದಾರೆ ಎಂದು ಬಹಿರಂಗಪಡಿಸಿದ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿದ ಡಿ'ಕುನ್ಹಾ, ಕಾನೂನುಬದ್ಧ ಮಿಲಿಟರಿ ಗುರಿಗಳ ಅನುಪಸ್ಥಿತಿಯಲ್ಲಿ ಪಾಕಿಸ್ತಾನವು ಗಡಿಯ ಸಮೀಪವಿರುವ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಬಹುದು ಎಂದು ಭಾರತೀಯ ಸೇನೆಯು ನಿರೀಕ್ಷಿಸಿತ್ತು ಎಂದು ಹೇಳಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications