ನವದೆಹಲಿ, ಡಿಸೆಂಬರ್ 9: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 14 ಜನರಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ತಮಿಳುನಾಡಿನ ನೀಲ್ಗಿರಿ ಜಿಲ್ಲೆಯ ಕುನೂರ್ ಬಳಿ ನಡೆದಿದೆ. ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದ್ದು, ಹೆಲಿಕಾಪ್ಟರ್ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಾಗಿರುವುದನ್ನು ಇರುವುದನ್ನು ಭಾರತೀಯ ಸೇನೆ ಈಗಾಗಲೇ ಖಚಿತಪಡಿಸಿದ್ದು, ತನಿಖೆಗೆ ಆದೇಶಿಸಿದೆ.
'CDS ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟಾರ್ ಇದು ತಮಿಳುನಾಡು ಕೂನೂರ್ ಬಳಿ ಅಪಘಾತಕ್ಕೀಡಾಗಿದೆ. ಆರಂಭದಲ್ಲಿ ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಇತರರಿಗಾಗಿ ಶೋಧ ನಡೆಸಲಾಗುತ್ತಿದೆ' ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದರು. ಸೇನೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.
ದೆಹಲಿಯಿಂದ ಸೂಳೂರು ನಂತರ ವೆಲ್ಲಿಂಗ್ಟನ್ ಮಿಲಿಟರಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಜನರಲ್ ರಾವತ್ ಪ್ರಯಾಣಿಸುತ್ತಿದ್ದರು. ಪೂರ್ವ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್, ಲ್ಯಾನ್ಸ್ ನಾಯಕ್, ಸೇರಿದಂತೆ ಇತರೆ ಅಧಿಕಾರಿಗಳು, ನಾಲ್ವರು ಹೆಲಿಕಾಪ್ಟರ್ ಸಿಬ್ಬಂದಿ ಇದ್ದರು.
ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕೊಯಮತ್ತೂರು, ಸುಳೂರ್ ನಡುವೆ ಈ ಘಟನೆ ನಡೆದಿದೆ. ಇಬ್ಬರನ್ನು ರಕ್ಷಿಸಲಾಗಿದ್ದು, ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗುರುತು ಪತ್ತೆ ಹಚ್ಚಲಾಗುತ್ತಿದೆ. 9 ಪ್ರಯಾಣಿಕರು ಹಾಗೂ 5 ಮಂದಿ ಕ್ರ್ಯೂ ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣೆ ಮಾಡಲಾಗಿದ್ದ ಮೂವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರು ಎಂಬ ಮಾಹಿತಿಯಿದೆ.
ಭಾರತೀಯ ಸೇನಾ ಹೆಲಿಕಾಪ್ಟರ್ ಪತನದ ಘಟನೆ ಹಾಗೂ ಅದರ ಸುತ್ತಲಿನ ಕ್ಷಣಕ್ಷಣದ ಅಪ್ಡೇಟ್ಗಳನ್ನು ಇಲ್ಲಿ ತಿಳಿಯಿರಿ.
ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸೈನಿಕರಿಗೆ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅಂತಿಮ ನಮನ ಸಲ್ಲಿಸಿದರು.
The 3 service chiefs - Army Chief Gen MM Naravane, Navy Chief Admiral R Hari Kumar & IAF chief Air Chief Marshal VR Chaudhari pay last respects to CDS Gen Bipin Rawat, his wife Madhulika Rawat & other 11 Armed Forces personnel who lost their lives in military chopper crash y'day. pic.twitter.com/HoXt8Jw0U6
IAF ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಗೆ NSA ಅಜಿತ್ ದೋವಲ್ ಶ್ರದ್ಧಾಂಜಲಿ ಸಲ್ಲಿಸಿದರು.
Dec 09, 2021, 9:08 pm IST
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಿಮ ನಮನ:
ತಮಿಳುನಾಡು ಚಾಪರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಿಮ ನಮನ ಸಲ್ಲಿಸಿದರು.
Defence Minister Rajnath Singh pays last respects to CDS General Bipin Rawat, his wife Madhulika Rawat and other 11 Armed Forces personnel who lost their lives in the #TamilNaduChopperCrash yesterday. pic.twitter.com/TZI0XoAUZd
ಬೆಂಗಳೂರಿನ ವಾಯುಪಡೆ ಕಮಾಂಡ್ ಆಸ್ಪತ್ರೆಗೆ ಸಿಎಂ, ರಾಜ್ಯಪಾಲರ ಭೇಟಿ
ತಮಿಳುನಾಡು ಚಾಪರ್ ಅಪಘಾತದಲ್ಲಿ ಬದುಕುಳಿದ ಏಕೈಕ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದ್ದು, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಬೆಂಗಳೂರಿನ ವಾಯುಪಡೆಯ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿದರು.
Dec 09, 2021, 9:04 pm IST
ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ ಸಶಸ್ತ್ರ ಪಡೆ ಸಿಬ್ಬಂದಿಯ ಕುಟುಂಬ ಸದಸ್ಯರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಲಂ ವಾಯುನೆಲೆಯಲ್ಲಿ ಭೇಟಿ ಮಾಡಿದರು
Dec 09, 2021, 9:01 pm IST
ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಪಾರ್ಥಿವ ಶರೀರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರರು.
Prime Minister Narendra Modi pays last respects to CDS General Bipin Rawat, his wife Madhulika Rawat and other 11 Armed Forces personnel who lost their lives in the #TamilNaduChopperCrash yesterday. pic.twitter.com/QT3JHKTedq
ಎಲ್ಲಾ ಮೃತರ ಅಂತ್ಯಕ್ರಿಯೆಗಳನ್ನು ಸೂಕ್ತ ಸೇನಾ ಗೌರವಗಳೊಂದಿಗೆ ನೆರವೇರಿಸಲು ಎಲ್ಲ ರೀತಿ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಕುಟುಂಬ ಸದಸ್ಯರೊಂದಿಗೆ ನಿಕಟ ಸಮಾಲೋಚನೆ ನಡೆಸಲಾಗುತ್ತಿದೆ: ಭಾರತೀಯ ಸೇನೆ
Dec 09, 2021, 6:47 pm IST
ಶ್ರೀಲಂಕಾದ ಸೇನಾ ಕಮಾಂಡರ್, ಜನರಲ್ ಶವೇಂದ್ರ ಸಿಲ್ವಾ ಅವರು ಸಿಡಿಎಸ್ ಜನರಲ್ ಬಿಪಿನ್ ರಾವತ್ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
Dec 09, 2021, 6:17 pm IST
ಕೂನೂರು ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Indian Air Force’s Group Captain Varun Singh, the lone survivor of the Coonoor military chopper crash, shifted to Command Hospital, Bengaluru for further treatment pic.twitter.com/3zt4MZbsCh
ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದಿವಂಗತ ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ ಸಶಸ್ತ್ರ ಪಡೆ ಸಿಬ್ಬಂದಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಲಿದ್ದಾರೆ. ರಕ್ಷಣಾ ಸಚಿವರು, ರಕ್ಷಣಾ ರಾಜ್ಯ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ಮೂರು ಸೇವಾ ಮುಖ್ಯಸ್ಥರು ಸಹ ಉಪಸ್ಥಿತರಿರುತ್ತಾರೆ.
Dec 09, 2021, 5:08 pm IST
ಜನರಲ್ ಬಿಪಿನ್ ರಾವತ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನನಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ನಾಯಕ್ ಗುರುಸೇವಕ್ ಸಿಂಗ್ ಅವರ ಸಾವಿನಿಂದ ಇಲ್ಲಿನ ದೊಡೆ ಸೋಧಿಯಾನ್ ಗ್ರಾಮದಲ್ಲಿ ಶೋಕ ಆವರಿಸಿದೆ.
Dec 09, 2021, 5:06 pm IST
ಎರಡು C130 ಹರ್ಕ್ಯುಲಸ್ ವಿಮಾನಗಳು ಸುಲೂರ್ ವಾಯುಪಡೆಯ ನೆಲೆಯಿಂದ ಹೊರಡುತ್ತವೆ. ಒಂದು ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ 12 ಮಂದಿಯ ಪಾರ್ಥಿವ ಶರೀರವನ್ನು ದೆಹಲಿಗೆ ರವಾನಿಸಲಾಗುತ್ತಿದ್ದರೆ, ಇನ್ನೊಂದು ವಿಮಾನದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿಗೆ ರವಾನಿಸಲಾಗುತ್ತಿದೆ.
Dec 09, 2021, 4:43 pm IST
ಜಮ್ಮು ಮತ್ತು ಕಾಶ್ಮೀರ| ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ, GOC, ಶ್ರೀನಗರದ ಚಿನಾರ್ ಕಾರ್ಪ್ಸ್, ಬಾರಾಮುಲ್ಲಾದ ಶೆರ್ವಾನಿ ಸಮುದಾಯ ಭವನದಲ್ಲಿ ದಿವಂಗತ CDS ಜನರಲ್ ಬಿಪಿನ್ ರಾವತ್ ಅವರಿಗೆ ಗೌರವ ಸಲ್ಲಿಸಿದರು.
Jammu & Kashmir| Lt Gen DP Pandey, GOC, Srinagar's Chinar Corps, pays homage to late CDS Gen Bipin Rawat at Sherwani Community Hall, Baramulla
"The connection he had with the people of Uri, Baramulla &Kashmir was like no other. We'll take time to recover from this loss," he says pic.twitter.com/jtFGfZMBVX
ತಮಿಳುನಾಡು: ಜನರಲ್ ರಾವತ್ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ಆಂಬ್ಯುಲೆನ್ಸ್ಗಳ ಮೇಲೆ ಹೂವು ಎಸೆದ ಸ್ಥಳೀಯರು 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗಿದರು.
#WATCH| Tamil Nadu: Locals shower flower petals & chant 'Bharat Mata ki Jai' as ambulances carrying mortal remains of CDS Gen Rawat, his wife & other personnel who died in Coonoor military chopper crash, arrive at Sulur airbase from Madras Regimental Centre in Nilgiris district pic.twitter.com/fhVIDaf5FL
ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಅಜಯ್ ಭಟ್ ಮತ್ತು ಎನ್ಎಸ್ಎ ಅಜಿತ್ ದೋವಲ್ ಅವರು ಇಂದು ಸಂಜೆ ಪಾಲಂ ತಾಂತ್ರಿಕ ಪ್ರದೇಶದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಸಿಬ್ಬಂದಿಯ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸುವ ಸಾಧ್ಯತೆಯಿದೆ: ಮೂಲಗಳು
Dec 09, 2021, 3:39 pm IST
ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲು ಗುರುವಾರ ವೆಲ್ಲಿಂಗ್ಟನ್ನಿಂದ ಸೂಲೂರಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಅಪಘಾತದ ನಂತರ ಬುಧವಾರ ತೀವ್ರ ಸುಟ್ಟ ಗಾಯಗಳೊಂದಿಗೆ ಗ್ರೂಪ್ ಕ್ಯಾಪ್ಟನ್ ಅವರನ್ನು ವೆಲ್ಲಿಂಗ್ಟನ್ನ ಆಸ್ಪತ್ರೆಗೆ ದಾಖಲಿಸಲಾಯಿತು.
Dec 09, 2021, 2:41 pm IST
ಸೇನಾ ಹೆಲಿಕಾಪ್ಟರ್ ದುರಂತಕ್ಕೆ ದೇಶಕ್ಕೆ ದೇಶವೇ ಮರುಗುತ್ತಿದ್ದು, ಈ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಸಹ ಹುತಾತ್ಮರಾಗಿದ್ದು, ಈಗ ಕಾರ್ಕಳದಲ್ಲಿ ನೀರವ ಮೌನ ಆವರಿಸಿದೆ.
Dec 09, 2021, 1:11 pm IST
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಜೀವ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ತಮಿಳುನಾಡಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತದ ಕುರಿತು ಲೋಕಸಭೆಯಲ್ಲಿ ಹೇಳಿಕೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
Dec 09, 2021, 12:30 pm IST
ಜನರಲ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರ ಗುರುವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸುವ ಸಾಧ್ಯತೆಯಿದೆ ಮತ್ತು ಅವರ ಅಂತ್ಯಕ್ರಿಯೆ ಶುಕ್ರವಾರ ದೆಹಲಿ ಕಂಟೋನ್ಮೆಂಟ್ನಲ್ಲಿ ನಡೆಯಲಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
Dec 09, 2021, 12:23 pm IST
ಸುದ್ದಿ ಸಂಸ್ಥೆ ANI ತಮಿಳುನಾಡಿನ ಕುನೂರ್ ಬಳಿ Mi-17 ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ಅದರ ಅಂತಿಮ ಕ್ಷಣಗಳನ್ನು ತೋರಿಸುವ ವೀಡಿಯೊವನ್ನು ಗುರುವಾರ ಹಂಚಿಕೊಂಡಿದೆ.
Dec 09, 2021, 11:09 am IST
ಸಂಸತ್ತಿನಲ್ಲಿ ಹೆಲಿಕಾಪ್ಟರ್ ದುರಂತಕ್ಕೆ ಕಂಬನಿ
ಸಂಸತ್ತಿನಲ್ಲಿ ಹೆಲಿಕಾಪ್ಟರ್ ದುರಂತದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಸ್ತಾವನೆ ಮಾಡಿ, ಮೃತರ ಬಗ್ಗೆ ವಿವರ ನೀಡಿದರು. ನಂತರ ಸದಸ್ಯರೆಲ್ಲರೂ ಮೃತರ ಆತ್ಮಕ್ಕೆ ಶಾಂತಿ ಕೋರಿ ನಮನ ಸಲ್ಲಿಸಿದರು.
Dec 09, 2021, 10:52 am IST
ಘಟನಾ ಸ್ಥಳಕ್ಕೆ ಐಎಎಫ್ ಮುಖ್ಯಸ್ಥರ ಭೇಟಿ
ಭಾರತೀಯ ವಾಯುಸೇನೆ ಮುಖ್ಯಸ್ಥ ಏರ್ ಛೀಫ್ ಮಾರ್ಷಲ್ ವಿಆರ್ ಚೌಧರಿ ಹಾಗೂ ತಮಿಳುನಾಡು ಡಿಜಿಪಿ ಸಿ ಶೈಲೇಂದ್ರ ಬಾಬು ಅವರು ಹೆಲಿಕಾಪ್ಟರ್ ಪತನವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
IAF chief Air Chief Marshal VR Chaudhari along with Tamil Nadu DGP C Sylendra Babu visits the chopper crash site near Coonoor in Nilgiris district; visuals from near the site
13 people including CDS General Bipin Rawat and his wife lost their lives in the accident yesterday pic.twitter.com/M3dJ5409rL
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ಪತನಗೊಂಡಿದೆ. ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತಂಡ ಹೆಲಿಕಾಪ್ಟರ್ ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದಿದೆ.
Dec 09, 2021, 9:28 am IST
ತಮಿಳುನಾಡು
ಜನರಲ್ ಜೀವಂತವಾಗಿದ್ದರು, ಆಸ್ಪತ್ರೆಯಲ್ಲೇ ಅಸುನೀಗಿದರು
ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಘಟನಾ ಸ್ಥಳದಲ್ಲಿ ಜೀವಂತವಾಗಿದ್ದರು ಆದರೆ, ತೀವ್ರವಾಗಿ ಗಾಯಗೊಂಡಿದ್ದರು ಮತ್ತು ಎಂಐ-17ವಿ5 ಹೆಲಿಕಾಪ್ಟರ್ನ ಅವಶೇಷಗಳಿಂದ ಮತ್ತೊಬ್ಬ ಪ್ರಯಾಣಿಕನೊಂದಿಗೆ ಹೊರತೆಗೆಯಲ್ಪಟ್ಟಾಗ ಅವರ ಹೆಸರನ್ನು ಹೇಳಿದರು, ಅವರು ಹೇಳಿದ ಆ ವ್ಯಕ್ತಿಯೇ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪ್ರಮುಖ ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
READ MORE
3:24 PM, 8 Dec
ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನ ಕುನೂರ್ನಲ್ಲಿ ಘಟನೆ ನಡೆದಿದೆ. ಕೊಯಮತ್ತೂರು, ಸುಳೂರ್ ನಡುವೆ ಘಟನೆ ನಡೆದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮಿಳುನಾಡಿಗೆ ಹೊರಟಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದ್ದು, ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗುರುತು ಪತ್ತೆ ಹಚ್ಚಲಾಗುತ್ತಿದೆ. 9 ಪ್ರಯಾಣಿಕರು ಹಾಗೂ 5 ಮಂದಿ ಕ್ರ್ಯೂ ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣೆ ಮಾಡಲಾಗಿದ್ದ ಮೂವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
3:38 PM, 8 Dec
ಮೂವುರ ಆಸ್ಪತ್ರೆಗೆ ದಾಖಲು
ಮೂವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ನಾಲ್ಕು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಎಂಐ ಸೀರೀಸ್ನ ಹೆಲಿಕಾಪ್ಟರ್ ಇದಾಗಿತ್ತು.
3:40 PM, 8 Dec
ತನಿಖೆಗೆ ಆದೇಶಿಸಿದೆ
ಸೇನೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕುರಿತು ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದೆ, ಹೆಲಿಕಾಪ್ಟರ್ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇರುವುದನ್ನು ಭಾರತೀಯ ಸೇನೆ ಖಚಿತಪಡಿಸಿದೆ. ಜತೆಗೆ ತನಿಖೆಗೆ ಆದೇಶಿಸಿದೆ.
3:41 PM, 8 Dec
ಆರೋಗ್ಯ ಸ್ಥಿತಿ ಗಂಭೀರವಾಗಿದೆ
ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿಸಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದು ಬಂದಿದೆ.
3:42 PM, 8 Dec
ತಮಿಳುನಾಡು
ತಮಿಳುನಾಡಿನ ಕುನೂರ್ನಲ್ಲಿ ಘಟನೆ ನಡೆದಿದೆ
ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನ ಕುನೂರ್ನಲ್ಲಿ ಘಟನೆ ನಡೆದಿದೆ. ಕೊಯಮತ್ತೂರು, ಸುಳೂರ್ ನಡುವೆ ಘಟನೆ ನಡೆದಿದೆ.
An IAF Mi-17V5 helicopter, with CDS Gen Bipin Rawat on board, met with an accident today near Coonoor, Tamil Nadu. An Inquiry has been ordered to ascertain the cause of the accident.
12 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ಆರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಗಿದೆ.
3:52 PM, 8 Dec
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಪತನಗೊಂಡ ಹೆಲಿಕಾಪ್ಟರ್ ನಲ್ಲಿ ಒಟ್ಟು 14 ಮಂದಿಯಿದ್ದರು.
ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿದ್ದೇರ್, ಲೆಫ್ಟಿನೆಂಟ್ ಗವರ್ನರ್ ಹರಿಜಿಂದರ್ ಸಿಂಗ್, ಎನ್ ಕೆ ಗುರುವಾಕ್ ಸಿಂಗ್, ಎನ್ ಕೆ ಜೀತೇಂದ್ರ ಕುಮಾರ್, ಎನ್ ಕೆ ವಿವೇಕ್ ಕುಮಾರ್, ಎನ್ ಕೆ ಸಾಯಿ ತೇಜ್ ಮತ್ತು ಹವಾಲ್ದಾರ್ ಸತ್ಪಾಲ್ ಎಂಬುವವರು ಹೆಲಿಕಾಪ್ಟರ್ ನಲ್ಲಿದ್ದರು ಎಂದು ತಿಳಿದು ಬಂದಿದೆ.
3:54 PM, 8 Dec
ನವದೆಹಲಿಯಲ್ಲಿರುವ ಸಿಡಿಎಸ್ ಬಿಪಿನ್ ರಾವತ್ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ.
3:55 PM, 8 Dec
ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರನ್ನು ಹೊತ್ತೊಯ್ಯುತ್ತಿದ್ದ ಐಎಎಫ್ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಸುದ್ದಿ ಕೇಳಿ ಬೇಸರವಾಯಿತು. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇನೆ. ಪ್ರಾಥಮಿಕ ಮಾಹಿತಿಯಂತೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
3:57 PM, 8 Dec
ಸಿಎಂ ಸೂಚನೆ ಮೇರೆಗೆ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ನಾನು ಆಗಮಿಸಿದ್ದೇನೆ. ವಿಮಾನದಲ್ಲಿದ್ದ 14 ಜನರ ಪೈಕಿ ಐವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ: ತಮಿಳುನಾಡು ಅರಣ್ಯ ಸಚಿವ ಕೆ.ರಾಮಚಂದ್ರನ್
3:57 PM, 8 Dec
ಐಎಎಫ್ ಹೆಲಿಕಾಪ್ಟರ್ ಪತನ: ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಸೂಲೂರು ವಾಯುನೆಲೆಗೆ ಆಗಮಿಸುತ್ತಿದ್ದಾರೆ: ಮೂಲಗಳು
4:05 PM, 8 Dec
ಭ್ರಾತೃತ್ವದ ಯೋಗಕ್ಷೇಮ ಯಾವಾಗಲೂ ಮುಖ್ಯವಾಗಿದೆ. ಜನರಲ್ ಬಿಪಿನ್ ರಾವತ್ #COAS ಮತ್ತು ಶ್ರೀಮತಿ ಮಧುಲಿಕಾ ರಾವತ್, ಅಧ್ಯಕ್ಷೆ AWWA ಇಂದು ದೆಹಲಿ ಕ್ಯಾಂಟ್ನ ಸೇನಾ ಆಸ್ಪತ್ರೆಗೆ (ಸಂಶೋಧನೆ ಮತ್ತು ಉಲ್ಲೇಖಿತ) ಭೇಟಿ ನೀಡಿದರು. #COAS ರೋಗಿಗಳೊಂದಿಗೆ ಸಂವಾದ ನಡೆಸಿದರು ಮತ್ತು 2018ರ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು.
Well being of the fraternity is always important.General Bipin Rawat #COAS and Mrs Madhulika Rawat, President AWWA visited Army Hospital (Research & Referral), Delhi Cantt today. #COAS interacted with the patients and conveyed his greetings for the New Year 2018. pic.twitter.com/2EpK30c3Cv
ಸಿಡಿಎಸ್ ಬಿಪಿನ್ ರಾವತ್ ಜಿ ಅವರಿದ್ದ ಹೆಲಿಕಾಪ್ಟರ್ ದುರಂತ ಅಪಘಾತದ ಬಗ್ಗೆ ಕೇಳಿ ಆಘಾತವಾಯಿತು. ಎಲ್ಲರ ಸುರಕ್ಷತೆ, ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ: ನಿತಿನ್ ಗಡ್ಕರಿ
4:08 PM, 8 Dec
ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವಿನ ಸಂಖ್ಯೆ 11 ಕ್ಕೆ ಏರಿದೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಅವರ ಕೆಲವು ಕುಟುಂಬ ಸದಸ್ಯರಿದ್ದ ವಾಯುಪಡೆಯ ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿದೆ.
4:09 PM, 8 Dec
ಕೊಯಮತ್ತೂರು ಮತ್ತು ಸುಲೂರ್ ನಡುವೆ ಮಿಲಿಟರಿ ಹೆಲಿಕಾಪ್ಟರ್ ಅಪಘಾತದ ಘಟನೆಯ ನಂತರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಸಂಜೆ ಚೆನ್ನೈ ವಿಮಾನ ನಿಲ್ದಾಣದಿಂದ ಕೊಯಂಬತ್ತೂರ್ಗೆ ತೆರಳಿ ನಂತರ ನೀಲಗಿರಿಗೆ ಭೇಟಿ ನೀಡಲಿದ್ದಾರೆ.
4:16 PM, 8 Dec
ತಮಿಳುನಾಡಿನ ಮಿಲಿಟರಿ ಹೆಲಿಕಾಪ್ಟರ್ ಅಪಘಾತದ ಸ್ಥಳದಿಂದ ಇತ್ತೀಚಿನ ದೃಶ್ಯಗಳು.
#WATCH | Latest visuals from military chopper crash site in Tamil Nadu.
CDS Gen Bipin Rawat, his staff and some family members were on board chopper. pic.twitter.com/H3ewiYlVMU
ರಕ್ಷಣಾ ಸಿಬ್ಬಂದಿ ಮುಖ್ಯಸ್ಥರೊಂದಿಗೆ ಸೇನಾ ಹೆಲಿಕಾಪ್ಟರ್ ಪತನದ ಕುರಿತು ಕೇಂದ್ರ ಸರ್ಕಾರವು ಗುರುವಾರ ಸಂಸತ್ತಿನಲ್ಲಿ ಹೇಳಿಕೆ ನೀಡುವ ಸಾಧ್ಯತೆಯಿದೆ: ಮೂಲಗಳು
4:19 PM, 8 Dec
CDS ಜನರಲ್ ಬಿಪಿನ್ ರಾವತ್ ಮತ್ತು ಇತರ 13 ಮಂದಿ ಕುನೂರ್ ಬಳಿ ಅಪಘಾತಕ್ಕೀಡಾದ ಸೇನಾ ಹೆಲಿಕಾಪ್ಟರ್ ಅನ್ನು ಕೇಳಿ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ ಮತ್ತು ನಿರಾಶೆಗೊಂಡಿದ್ದೇನೆ. ನಾನು ಸ್ಥಳಕ್ಕೆ ಧಾವಿಸುತ್ತಿರುವಾಗಲೂ ರಕ್ಷಣಾ ಕಾರ್ಯಾಚರಣೆಯಲ್ಲಿ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದೇನೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಟ್ವೀಟ್.
I am deeply shocked & disheartened on hearing the army chopper with CDS General Bipin Rawat and 13 others has met with an accident near Coonoor.
I've instructed the local administration to provide all the help needed in rescue operations even as I'm rushing to the spot.
1993 ರಲ್ಲಿ GOC-in-C ಈಸ್ಟರ್ನ್ ಕಮಾಂಡ್ ಲೆಫ್ಟಿನೆಂಟ್ ಜನರಲ್ ಜಮೀಲ್ ಮೆಹಮೂದ್ ಅವರು ಭೂತಾನ್ನಲ್ಲಿ IAF MI-17 ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದಾಗ ಹಿರಿಯ ಸೇನಾ ಅಧಿಕಾರಿಯನ್ನು ಒಳಗೊಂಡ ಕೊನೆಯ ಪ್ರಮುಖ ವಿಮಾನ ಅಪಘಾತವಾಗಿತ್ತು. ಅಪಘಾತದಲ್ಲಿ ಸಾವನ್ನಪ್ಪಿದ ಎಂಟು ಜನರಲ್ಲಿ ಅವರ ಪತ್ನಿ ಮತ್ತು ಎಂಎ ಸೇರಿದ್ದಾರೆ.
4:33 PM, 8 Dec
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂಬೈನಲ್ಲಿ ಭಾಗಿಯಾಗಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ನವದೆಹಲಿಗೆ ವಾಪಸ್ ಆಗಿದ್ದಾರೆ.
4:38 PM, 8 Dec
ತಮಿಳುನಾಡಿನಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ವಿವರಿಸಿದ್ದಾರೆ.
Army Chief General MM Naravane briefs Defence Minister Rajnath Singh over the incident of the crash of a military chopper in Tamil Nadu, that was also carrying CDS Gen Bipin Rawat.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬೆನ್ನಲ್ಲೇ ನವದೆಹಲಿಯ ಬಿಪಿನ್ ರಾವತ್ ನಿವಾಸಕ್ಕೆ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಭೇಟಿ ನೀಡಿದ್ದಾರೆ.
5:12 PM, 8 Dec
ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾಗಿಯಾಗಿದ್ದ 14 ಮಂದಿಯಲ್ಲಿ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಡಿಎನ್ಎ ಪರೀಕ್ಷೆಯ ಮೂಲಕ ದೇಹಗಳ ಗುರುತು ಪತ್ತೆ ಮಾಡಲಾಗುತ್ತಿದೆ: ಮೂಲಗಳು
5:28 PM, 8 Dec
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಬೇಕಿದ್ದ ಮಹಾರಾಷ್ಟ್ರದ ನೂತನ ದರ್ಬಾರ್ ಹಾಲ್ ಉದ್ಘಾಟನಾ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಗೊಳಿಸಲಾಗಿದೆ: ಮಹಾರಾಷ್ಟ್ರ ರಾಜಭವನ ಮೂಲಗಳು
5:41 PM, 8 Dec
ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದ ನಂತರ ಸಂಜೆ 6.30ಕ್ಕೆ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆಯಲಿದೆ. ಬುಧವಾರ ನೀಲಗಿರಿಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಗುರುವಾರ ಹೇಳಿಕೆ ನೀಡಲಿದ್ದಾರೆ.
5:42 PM, 8 Dec
ಚೀಫ್ ಆಫ್ ಡಿಫೆನ್ಸ್ ಸ್ಟಾಫ್, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 12 ಮಂದಿ ಹೆಲಿಕಾಪ್ಟರ್ನಲ್ಲಿ ಇದ್ದರು. ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿ ರಾಜನಾಥ್ ಸಿಂಗ್, ಸದ್ಯ ತಮಿಳುನಾಡಿಗೆ ತೆರಳದೇ ನವದೆಹಲಿಯಿಂದಲೇ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಲಿದ್ದಾರೆ.
5:45 PM, 8 Dec
ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 14 ಸಿಬ್ಬಂದಿಯೊಂದಿಗೆ ಪತನಗೊಂಡ Mi-17V5 ಹೆಲಿಕಾಪ್ಟರ್ ಪೈಲಟ್ ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್ ಎಂದು ಗೊತ್ತಾಗಿದೆ. ಅವರು 109 ಹೆಲಿಕಾಪ್ಟರ್ ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದಾರೆ: ಮೂಲಗಳು
6:10 PM, 8 Dec
ಭಾರತೀಯ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಸಾವನ್ನಪ್ಪಿರುವ ಬಗ್ಗೆ ಭಾರತೀಯ ವಾಯುಪಡೆ ಟ್ವೀಟ್.
6:15 PM, 8 Dec
ಬಿಪಿನ್ ರಾವತ್ ಸಾವಿನ ಬಗ್ಗೆ ಭಾರತೀಯ ವಾಯು ಪಡೆ ಟ್ವೀಟ್.
With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.
ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Army Helicopter Crash Live Updates in Kannada: Mi-17V5 With CDS Bipin Rawat with his staff and family members on board crashed in Tamil Nadu. Check latest news and live updates.