ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ, ಇಬ್ಬರ ದುರಂತ ಅಂತ್ಯ
ಶ್ರೀನಗರ, ಫೆ.11: ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಬುಧವಾರ ರಾತ್ರಿ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೇಜರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸೇನೆಯ ವಕ್ತಾರರು ಹೇಳಿದ್ದಾರೆ.
ಭಾರತೀಯ ಸೇನೆಗೆ ಸೇರಿದ ಧ್ರುವ್ ಹೆಲಿಕಾಪ್ಟರ್ ಕಾಶ್ಮೀರದ ಬಂಡಿಪೊರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಅಪಘಾತಕ್ಕೀಡಾಗಿ ಪತನಗೊಂಡಿದೆ.
ಸೇನೆಯ ವಿಮಾನನೆಲೆಯಿಂದ ಹೊರಟ ವಿಮಾನ 30 ನಿಮಿಷಗಳ ಹಾರಾಟದ ನಂತರ ಪತನಗೊಂಡಿದ್ದು, ಇಬ್ಬರು ಅಧಿಕಾರಿಗಳಾದ ಲೆಫ್ಟಿನೆಂಟ್ ಕರ್ನಲ್ ರಾಜೇಶ್ ಗುಲಾಟಿ ಹಾಗೂ ಮೇಜರ್ ತಾಹೀರ್ ಖಾನ್ ಎಂದು ಗುರುತಿಸಲಾಗಿದೆ. ಎಎಲ್ ಎಚ್ ಧ್ರುವ್ ಹೆಲಿಕಾಪ್ಟರ್ ನಲ್ಲಿ ತೆರಳಿದ್ದ ಇಬ್ಬರ ದೇಹ ಗುರುತಿಸಲಾರದಷ್ಟು ಸುಟ್ಟು ಕರಕಲಾಗಿದೆ.

ಲೆಫ್ಟಿನೆಂಟ್ ಕರ್ನಲ್ ರಾಜೇಶ್ ಅವರು ಡೆಡ್ರಾಡೂನ್ ನ ನಿವಾಸಿಯಾಗಿದ್ದು, ಖಾನ್ ಅವರು ಹೈದರಾಬಾದ್ ಮೂಲದವರಾಗಿದ್ದಾರೆ. ಗುಲಾಟಿ ಅವರಿಗೆ ಧ್ರುವ್ ಹೆಲಿಕಾಪ್ಟರ್ ಚಾಲನೆ ಮಾಡುವಲ್ಲಿ ಐದು ವರ್ಷದ ಅನುಭವವಿತ್ತು. ಅದರೆ, ಈ ದುರಂತಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Two officers killed in a chopper crash in J&K http://t.co/KoTOnpSRHB @IndianExpress pic.twitter.com/wGogz31XEz
— Pranav Kulkarni (@PranavKulkarni) February 12, 2015 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ನಿರ್ಮಿತ ಎರಡು ಇಂಜಿನ್ ವುಳ್ಳ Advanced Light Helicopter ಧ್ರುವ್ ಇತ್ತೀಚೆಗೆ ಈಕ್ವಾಡರ್ ನಲ್ಲಿ ಅಪಘಾತಕ್ಕೀಡಾಗಿತ್ತು. ಉಳಿದಂತೆ ಜುಲೈನಲ್ಲಿ ಭಾರತೀಯ ವಾಯುಸೇನೆಯ ಏಳು ಜನ ಯೋಧರು ಲಕ್ನೋದಲ್ಲಿ ಅಪಘಾತಕ್ಕೀಡಾಗಿದ್ದರು. ಹವಾಮಾನ ವೈಪರೀತ್ಯ, ತಾಂತ್ರಿಕ ತೊಂದರೆ ಹಾಗೂ ಪೈಲಟ್ ಗಳ ದೋಷ ಹೀಗೆ ನಾನಾ ಕಾರಣಗಳು ಹೇಳಬಹುದಾದರೂ ತನಿಖೆ ನಂತರವಷ್ಟೇ ಸತ್ಯ ತಿಳಿದು ಬರಲಿದೆ.(ಪಿಟಿಐ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications