ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ, ಇಬ್ಬರ ದುರಂತ ಅಂತ್ಯ
ಶ್ರೀನಗರ, ಫೆ.11: ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಬುಧವಾರ ರಾತ್ರಿ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೇಜರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸೇನೆಯ ವಕ್ತಾರರು ಹೇಳಿದ್ದಾರೆ.
ಭಾರತೀಯ ಸೇನೆಗೆ ಸೇರಿದ ಧ್ರುವ್ ಹೆಲಿಕಾಪ್ಟರ್ ಕಾಶ್ಮೀರದ ಬಂಡಿಪೊರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಅಪಘಾತಕ್ಕೀಡಾಗಿ ಪತನಗೊಂಡಿದೆ.
ಸೇನೆಯ ವಿಮಾನನೆಲೆಯಿಂದ ಹೊರಟ ವಿಮಾನ 30 ನಿಮಿಷಗಳ ಹಾರಾಟದ ನಂತರ ಪತನಗೊಂಡಿದ್ದು, ಇಬ್ಬರು ಅಧಿಕಾರಿಗಳಾದ ಲೆಫ್ಟಿನೆಂಟ್ ಕರ್ನಲ್ ರಾಜೇಶ್ ಗುಲಾಟಿ ಹಾಗೂ ಮೇಜರ್ ತಾಹೀರ್ ಖಾನ್ ಎಂದು ಗುರುತಿಸಲಾಗಿದೆ. ಎಎಲ್ ಎಚ್ ಧ್ರುವ್ ಹೆಲಿಕಾಪ್ಟರ್ ನಲ್ಲಿ ತೆರಳಿದ್ದ ಇಬ್ಬರ ದೇಹ ಗುರುತಿಸಲಾರದಷ್ಟು ಸುಟ್ಟು ಕರಕಲಾಗಿದೆ.

ಲೆಫ್ಟಿನೆಂಟ್ ಕರ್ನಲ್ ರಾಜೇಶ್ ಅವರು ಡೆಡ್ರಾಡೂನ್ ನ ನಿವಾಸಿಯಾಗಿದ್ದು, ಖಾನ್ ಅವರು ಹೈದರಾಬಾದ್ ಮೂಲದವರಾಗಿದ್ದಾರೆ. ಗುಲಾಟಿ ಅವರಿಗೆ ಧ್ರುವ್ ಹೆಲಿಕಾಪ್ಟರ್ ಚಾಲನೆ ಮಾಡುವಲ್ಲಿ ಐದು ವರ್ಷದ ಅನುಭವವಿತ್ತು. ಅದರೆ, ಈ ದುರಂತಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Two officers killed in a chopper crash in J&K http://t.co/KoTOnpSRHB @IndianExpress pic.twitter.com/wGogz31XEz
— Pranav Kulkarni (@PranavKulkarni) February 12, 2015 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ನಿರ್ಮಿತ ಎರಡು ಇಂಜಿನ್ ವುಳ್ಳ Advanced Light Helicopter ಧ್ರುವ್ ಇತ್ತೀಚೆಗೆ ಈಕ್ವಾಡರ್ ನಲ್ಲಿ ಅಪಘಾತಕ್ಕೀಡಾಗಿತ್ತು. ಉಳಿದಂತೆ ಜುಲೈನಲ್ಲಿ ಭಾರತೀಯ ವಾಯುಸೇನೆಯ ಏಳು ಜನ ಯೋಧರು ಲಕ್ನೋದಲ್ಲಿ ಅಪಘಾತಕ್ಕೀಡಾಗಿದ್ದರು. ಹವಾಮಾನ ವೈಪರೀತ್ಯ, ತಾಂತ್ರಿಕ ತೊಂದರೆ ಹಾಗೂ ಪೈಲಟ್ ಗಳ ದೋಷ ಹೀಗೆ ನಾನಾ ಕಾರಣಗಳು ಹೇಳಬಹುದಾದರೂ ತನಿಖೆ ನಂತರವಷ್ಟೇ ಸತ್ಯ ತಿಳಿದು ಬರಲಿದೆ.(ಪಿಟಿಐ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications