ಸೇನೆಯ ಯೋಧರು ಮಸೀದಿಗೆ ನುಗ್ಗಿ ಜನರನ್ನು ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸುತ್ತಿದ್ದಾರೆ: ಮೆಹಬೂಬಾ ಮುಫ್ತಿ
ಶ್ರೀನಗರ, ಜೂನ್ 27: ಆರ್ಆರ್ನ 50ಕ್ಕೂ ಸೇನಾ ಯೋಧರು ಪುಲ್ವಾಮಾದ ಮಸೀದಿಯೊಂದಕ್ಕೆ ನುಗ್ಗಿ ಅಲ್ಲಿನ ಮುಸ್ಲಿಮರನ್ನು 'ಜೈ ಶ್ರೀ ರಾಮ್' ಎಂದು ಕೂಗುವಂತೆ ಒತ್ತಾಯಿಸಿದರು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಮೆಹಬೂಬಾ ಮುಫ್ತಿ ಅವರು ಹೇಳಿದ್ದಾರೆ.
ಇದು ಪ್ರಚೋದನೆಯ ಕ್ರಮವಾಗಿದ್ದು, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರನ್ನು ಮುಫ್ತಿ ವಿನಂತಿಸಿದರು. ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು ಜೂನ್ 14 ರಂದು ಪಾಕಿಸ್ತಾನದೊಂದಿಗಿನ ಗಡಿ ನಿಯಂತ್ರಣ ರೇಖೆ ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಜವಾಬ್ದಾರಿಯನ್ನು ಪಡೆದು ಶ್ರೀನಗರ ಮೂಲದ ಸೇನೆಯ ಆಯಕಟ್ಟಿನ ಮಹತ್ವದ ಚಿನಾರ್ ಕಾರ್ಪ್ಸ್ನ ಕಮಾಂಡ್ ಅನ್ನು ವಹಿಸಿಕೊಂಡರು.

ಮುಫ್ತಿ ಟ್ವೀಟ್ ಮಾಡಿ ಆರ್ಆರ್ನ 50ಕ್ಕೂ ಸೇನಾ ಯೋಧರು ಪುಲ್ವಾಮಾದಲ್ಲಿ ಮಸೀದಿಯೊಂದಕ್ಕೆ ನುಗ್ಗಿ ಒಳಗಿದ್ದ ಮುಸ್ಲಿಮರಿಗೆ ಜೈ ಶ್ರೀ ರಾಮ್ ಎಂದು ಜಪಿಸುವಂತೆ ಒತ್ತಾಯಿಸಿದ ಬಗ್ಗೆ ಕೇಳಿ ಆಘಾತವಾಯಿತು. ಅಮಿತ್ ಶಾ ಇಲ್ಲಿರುವಾಗ ಅದೂ ಕೂಡ ಯಾತ್ರೆಗೆ ಮುಂದಾಗಿರುವಾಗ ಇಂತಹ ನಡೆ ಕೇವಲ ಪ್ರಚೋದನಕಾರಿ ಕೃತ್ಯವಾಗಿದೆ. ಈ ಬಗ್ಗೆ ರಾಜೀವ್ ಘಾಯ್ ಅವರನ್ನು ತಕ್ಷಣವೇ ತನಿಖೆಯನ್ನು ಆರಂಭಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದರು.
ಏಪ್ರಿಲ್ನಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಜಿ 20 ಕಾರ್ಯಕ್ರಮದ ಪೂರ್ವಭಾವಿಯಾಗಿ ಸ್ಥಳೀಯ ಜನರನ್ನು ಬಂಧಿಸಿ ಚಿತ್ರಹಿಂಸೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯು ಗ್ವಾಂಟನಾಮೊ ಕೊಲ್ಲಿಗಿಂತ ಹದಗೆಟ್ಟಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಜಿ 20 ಕಾರ್ಯಕ್ರಮವನ್ನು ನಡೆಸಲು ಸಿದ್ಧತೆಗಳು ಪ್ರಾರಂಭವಾದಾಗಿನಿಂದ ನೂರಾರು ಸ್ಥಳೀಯ ಪುರುಷರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications