ಸಿಕ್ಕಿಂ ಹಿಮಪಾತದಲ್ಲಿ ಸಿಲುಕಿ ಇಬ್ಬರು ಯೋಧರು ಹುತಾತ್ಮ
ನವದೆಹಲಿ, ಮೇ 15: ಸಿಕ್ಕಿಂ ಹಿಮಪಾತದಲ್ಲಿ ಸಿಲುಕಿ ಲೆಫ್ಟಿನೆಂಟ್ ಕರ್ನಲ್ ಹಾಗೂ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
Recommended Video
ಹಿಮಪಾತದಲ್ಲಿ ಲೆಫ್ಟಿನೆಂಟ್ ಕರ್ನಲ್ ರಾಬರ್ಟ್ ಟಿಎ ಮತ್ತು ಸೈನಿಕ ಸಪಾಲ ಸನ್ಮಮುಖ ರಾವ್ ಅವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಉತ್ತರ ಸಿಕ್ಕಿಂನ ಲುಗ್ನಾಕ್ ಪ್ರದೇಶದಲ್ಲಿ ಇರುವ ಪರ್ವತದಲ್ಲಿ ಈ ಹಿಮಪಾತ ನಡೆದಿದೆ. 16 ಮಂದಿ ಸೈನಿಕರನ್ನು ರಕ್ಷಣೆ ಮಾಡಲಾಗಿದೆ.
2019ರಲ್ಲಿ ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ಉತ್ತರ ಭಾಗದಲ್ಲಿ ಸಂಭವಿಸಿದ ಹಿಮಪಾತಕ್ಕೆ ನಾಲ್ವರು ಯೋಧರು ಹಾಗೂ ಇಬ್ಬರು ನಾಗರಿಕರು ಬಲಿಯಾಗಿದ್ದರು.

ಯೋಧರು ಎಂದಿನಂತೆ ಗಸ್ತಿನಲ್ಲಿದ್ದಾಗ ಈ ಅವಘಡ ಸಂಭವಿಸಿತ್ತು. ತಕ್ಷಣ ಸೈನಿಕರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಿಮದಡಿ ಸಿಲುಕಿದ ದುರ್ಗ ರೆಜಿಮೆಂಟ್ನ 6 ಯೋಧರು ಮತ್ತು ಇಬ್ಬರು ನಾಗರಿಕರನ್ನು ಹೊರ ತೆಗೆದು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅದರಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದ ಕಾರಣ ಮೃತಪಟ್ಟಿದ್ದರು.
ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು, ಲುಗ್ನಾಕ್ ಪ್ರದೇಶದಲ್ಲಿ ಒಬ್ಬರು ಕರ್ನಲ್ ಒಳಗೊಂಡಂತೆ 18 ಜನ ಭಾರತೀಯ ಸೈನಿಕರ ತಂಡ ಕಾರ್ಯನಿರ್ವಹಿಸುತ್ತಿತ್ತು.
ಈ ವೇಳೆ ಹಿಮಪಾತ ಸಂಭವಿಸಿದೆ. ಆಗ ತಕ್ಷಣ ಸ್ಥಳಕ್ಕೆ ಹೋದ ನಮ್ಮ ರಕ್ಷಣಾ ತಂಡ ಹಿಮಪಾತದಲ್ಲಿ ಸಿಲುಕಿದ್ದ 18 ಜನರ ಪೈಕಿ 16 ಜನರನ್ನು ಕಾಪಾಡಿದ್ದಾರೆ. ಆದರೆ ಕರ್ನಲ್ ಮತ್ತು ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
2016ರಲ್ಲಿ ಸಿಯಾಚಿನ್ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಬಳಿಕ ಸಾವನ್ನಪ್ಪಿದ್ದರು.
ಸಾವಿಗೆ ಸವಾಲೊಡ್ಡಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಅವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications