ಪಾಕಿಸ್ತಾನ-ಚೀನಾ ಒಟ್ಟಿಗೆ ದಾಳಿ ಮಾಡಿದರೂ ನಾವು ಯುದ್ಧಕ್ಕೆ ಸಿದ್ಧ: ರಾವತ್
ನವದೆಹಲಿ, ಜೂನ್ 8: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ಭಾರತೀಯ ಸೇನಾ ಸಾಮರ್ಥ್ಯ ಎಂಥದ್ದು ಎಂದು ಕೂಡ ಹೇಳಿದ್ದಾರೆ. ಅಷ್ಟಕ್ಕೂ ರಾವತ್ ಅವರು ಹೇಳಿದ್ದೇನು ಅಂತ ತಿಳಿಯುವುದಕ್ಕೆ ಮುಂದೆ ಓದಿ.
ಪಾಕಿಸ್ತಾನ-ಚೀನಾ ಎರಡೂ ಸೇರಿ ಒಟ್ಟಿಗೆ ಯುದ್ಧಕ್ಕೆ ಇಳಿದರೂ, ಯಾವುದೇ ಬೆದರಿಕೆ ಹಾಗೂ ಆಂತರಿಕ ಭದ್ರತೆಗೆ ಸವಾಲೆನಿಸುವ ಯುದ್ಧವನ್ನು ಎದುರಿಸುವುದಕ್ಕೆ ಭಾರತೀಯ ಸೇನೆ ಸಿದ್ಧವಿದೆ ಎಂದು ಅವರು ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಕಾಶ್ಮೀರದಲ್ಲಿನ ಬಿಕ್ಕಟ್ಟು ಸದ್ಯದಲ್ಲೇ ಶಮನ ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನವು ಯುವಕರಿಗೆ ತಪ್ಪು ಸಂದೇಶ ಕಳುಹಿಸುತ್ತಿದೆ. ಇನ್ನು ಭಯೋತ್ಪಾದನಾ ಸಂಘಟನೆಗಳಿಗೆ ಸೇರಿದ ಯುವಕರಿಗೆ ಜಮ್ಮು-ಕಾಶ್ಮೀರದಲ್ಲಿರುವ ಸ್ಥಳೀಯರೇ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.[ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ನುಸುಳುಕೋರರ ಹತ್ಯೆ]

ಇತ್ತೀಚೆಗೆ ಪಾಕ್ ನಿಂದ ಗಡಿ ನಿಯಂತ್ರಣ ರೇಖೆಯ ಬಳಿ ಅಪ್ರಚೋದಿತ ದಾಳಿ ಹೆಚ್ಚಾಗಿದೆ. ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತದೆ. ಅದೇ ರೀತಿ ಕಾಶ್ಮೀರದೊಳಕ್ಕೆ ಉಗ್ರರು ಒಳ ನುಸುಳುವ ಪ್ರಮಾಣ ಕೂಡ ಹೆಚ್ಚಾಗಿದ್ದು, ಅದನ್ನು ತಡೆಯುವ ಯತ್ನದಲ್ಲಿ ಭಾರತೀಯ ಯೋಧರು ಹುತಾತ್ಮರಾಗುತ್ತಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications