ಅಯ್ಯೋ ವಿಧಿಯೇ.. ಗೂಡು ಸೇರುವ ಮುನ್ನ ಶ್ರಮಿಕ್ ರೈಲಿನಲ್ಲಿ ಪ್ರಾಣ ಬಿಟ್ಟವರು 80 ಮಂದಿ!
ನವದೆಹಲಿ, ಮೇ 30: ತಾಯಿ ಸತ್ತಿದ್ದಾಳೆ ಎಂಬ ಪರಿವೆಯೇ ಇಲ್ಲದೆ, ಆಕೆಯನ್ನು ಎಬ್ಬಿಸುವ ವಿಫಲ ಪ್ರಯತ್ನ ನಡೆಸುತ್ತಿದ್ದ ಎರಡು ವರ್ಷದ ಕಂದಮ್ಮನ ವಿಡಿಯೋ ಇನ್ನೂ ಕಣ್ಣಿಗೆ ಕಟ್ಟಿದ ಹಾಗಿದೆ. ಈ ಮನಕಲಕುವ ಘಟನೆ ಮಾಸುವ ಮುನ್ನವೇ ಬೇಸರ ತರಿಸುವ ಮತ್ತೊಂದು ಮಾಹಿತಿಯನ್ನ ರೈಲ್ವೇ ಅಧಿಕಾರಿಗಳು ಹೊರಹಾಕಿದ್ದಾರೆ.
ಮೇ 9 ರಿಂದ ಮೇ 27 ರವೆರೆಗೂ ಶ್ರಮಿಕ್ ಸ್ಪೆಷಲ್ ರೈಲಿನಲ್ಲಿ ಸುಮಾರು 80 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಸಂಗತಿಯನ್ನು ರೈಲ್ವೇ ಅಧಿಕಾರಿಗಳು ಬಹಿರಂಗ ಪಡಿಸಿದ್ದಾರೆ. ಆ ಪೈಕಿ ಕೊರೊನಾ ವೈರಸ್ ಸೋಂಕಿನಿಂದ ಓರ್ವ ಸಾವನ್ನಪ್ಪಿದ್ದರೆ, ಇತರೆ ಆರೋಗ್ಯ ಸಮಸ್ಯೆಗಳಿಂದ 11 ಮಂದಿ ಜೀವ ಬಿಟ್ಟಿದ್ದಾರೆ.
ಮಹಾಮಾರಿ ಕೋವಿಡ್-19 ನ ತಡೆಗಟ್ಟಲು ಘೋಷಣೆಯಾದ ಲಾಕ್ ಡೌನ್ ನಿಂದಾಗಿ ದಿನಗೂಲಿಯನ್ನೇ ನೆಚ್ಚಿಕೊಂಡಿದ್ದ ಹಲವು ಕಾರ್ಮಿಕರು ಕೆಲಸ ಕಳೆದುಕೊಳ್ಳುವಂತಾಯಿತು. ಕೈಯಲ್ಲಿ ದುಡ್ಡಿಲ್ಲದೆ, ಹೊಟ್ಟೆಗೆ ಆಹಾರವಿಲ್ಲದೆ, ಸ್ವಗ್ರಾಮಕ್ಕೆ ತೆರಳಲು ಲೆಕ್ಕವಿಲ್ಲದಷ್ಟು ಕಾರ್ಮಿಕರು ಬರಿಗಾಲಲ್ಲೇ ಪ್ರಯಾಣ ಬೆಳೆಸಿದ್ದರು.

ವಲಸೆ ಕಾರ್ಮಿಕರಿಗೆ ಸಹಕಾರಿ ಆಗುವ ನಿಟ್ಟಿನಲ್ಲಿ ಮೇ 1 ರಿಂದ ಶ್ರಮಿಕ್ ಸ್ಪೆಷಲ್ ರೈಲು ಸಂಚಾರ ಆರಂಭಿಸಿತ್ತು. ಲಕ್ಷಾಂತರ ಶ್ರಮಿಕರು ವಿಶೇಷ ರೈಲಿನ ಮುಖಾಂತರ ತಮ್ಮ ಸ್ವಗ್ರಾಮಗಳನ್ನು ಸೇರಿದ್ದಾರೆ. ಸ್ವಗ್ರಾಮಕ್ಕೆ ಸೇರುವ ಮುನ್ನವೇ ಕೆಲ ವಲಸೆ ಕಾರ್ಮಿಕರು ಕೊನೆಯುಸಿರೆಳೆದಿದ್ದು ಮಾತ್ರ ದುರಂತ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications