Breaking: ಸಾಧ್ಯವಿದ್ದರೇ ನನ್ನನ್ನು ಬಂಧಿಸಿ, ಜಾರ್ಖಂಡ್ ಸಿಎಂ ಸವಾಲು
ರಾಂಚಿ, ನ.03: "ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾನು ತಪ್ಪಿತಸ್ಥನಾಗಿದ್ದರೆ, ನೀವು ನನ್ನನ್ನು ಏಕೆ ಪ್ರಶ್ನಿಸುತ್ತಿದ್ದೀರಿ?. ನಿಮಗೆ ಸಾಧ್ಯವಾದರೆ ಬಂದು ನನ್ನನ್ನು ಬಂಧಿಸಿ" ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುರುವಾರ ಸವಾಲು ಹಾಕಿದ್ದಾರೆ.
ರಾಂಚಿಯಲ್ಲಿ ಮಾತನಾಡಿರುವ ಹೇಮಂತ್ ಸೊರೆನ್, ಇದೆಲ್ಲಾ ಬುಡಕಟ್ಟು ಮುಖ್ಯಮಂತ್ರಿಗೆ ಕಿರುಕುಳ ನೀಡುವ ಸಂಚಿನ ಭಾಗ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ತನಿಖಾ ಸಂಸ್ಥೆ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ನೀಡಿದೆ.

"ನಾನು ಛತ್ತೀಸ್ಗಢದಲ್ಲಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಬೇಕಿದ್ದ ದಿನದಂದು ಏಜೆನ್ಸಿಯಿಂದ ನನಗೆ ಸಮನ್ಸ್ ಬಂದಿದೆ. ನಾನು ದೊಡ್ಡ ಅಪರಾಧ ಮಾಡಿದ್ದರೆ, ಬಂದು ನನ್ನನ್ನು ಬಂಧಿಸಿ. ಯಾಕೆ ಸುಮ್ಮನೆ ವಿಚಾರಣೆಗೆ ಕರೆದು ಪ್ರಶ್ನೆ ಮಾಡುತ್ತಿರಿ? ಸಾಧ್ಯವಾದರೆ ನನ್ನನ್ನು ಬಂಧಿಸಿ" ಎಂದಿದ್ದಾರೆ.
ಇನ್ನು, ಇಡಿ ಕಚೇರಿಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾಕೆ, ಜಾರ್ಖಂಡಿಗಳಿಗೆ ಹೆದರುತ್ತೀರಾ..? ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ದ ಅಧ್ಯಕ್ಷ ಸಭೆಯೊಂದರಲ್ಲಿ ಹೇಳಿದ್ದಾರೆ.
"ಕೇಂದ್ರದ ಬಿಜೆಪಿಯನ್ನು ವಿರೋಧಿಸುವವರ ಧ್ವನಿಯನ್ನು ಹತ್ತಿಕ್ಕಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ" ಎಂದು ಆರೋಪಿಸಿದ್ದಾರೆ.
"ರಾಜ್ಯದ ಆದಿವಾಸಿಗಳನ್ನು ತಮ್ಮ ಕಾಲ ಮೇಲೆ ನಿಲ್ಲಲು ಬಿಡದ ಕೆಲವು ಹೊರಗಿನ ಗುಂಪುಗಳನ್ನು ನಾವು ರಾಜ್ಯದಲ್ಲಿ ಗುರುತಿಸಿದ್ದೇವೆ. ಈ ರಾಜ್ಯದಲ್ಲಿ ಜಾರ್ಖಂಡಿಗಳ ಆಡಳಿತವಿರುತ್ತದೆಯೇ ಹೊರತು ಹೊರಗಿನ ಶಕ್ತಿಗಳಿಗಲ್ಲ. ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಿರ್ನಾಮವಾಗಲಿದೆ" ಎಂದು ಹೇಮಂತ್ ಸೊರೆನ್ ಭವಿಷ್ಯ ನುಡಿದಿದ್ದಾರೆ.
#WATCH | I've been summoned by ED today when I already have a program in Chhattisgarh today. If I've committed a crime that big, come & arrest me. Why the questioning?... Security near ED office has increased. Why, are you scared of Jharkhandis?, says Jharkhand CM Hemant Soren pic.twitter.com/41cR92FCHM
— ANI (@ANI) November 3, 2022
ಗುರುವಾರ ರಾಂಚಿಯಲ್ಲಿರುವ ಇಡಿ ಪ್ರಾದೇಶಿಕ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿತ್ತಾದರೂ ಅವರು ವಿಚಾರಣೆಗೆ ಹಾಜರಾಗಲಿಲ್ಲ. ಬದಲಾಗಿ, ತಮ್ಮ ಮನೆಯ ಹೊರಗೆ ಕಾಂಗ್ರೆಸ್ನೊಂದಿಗೆ ಸಮ್ಮಿಶ್ರ ರಾಜ್ಯ ಸರ್ಕಾರ ಹೊಂದಿರುವ ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
2021 ರಲ್ಲಿ ಅಧಿಕಾರದಲ್ಲಿದ್ದಾಗ ತಮಗೆಯೇ ಗಣಿ ಗುತ್ತಿಗೆ ನೀಡಿಕೊಂಡಿದ್ದಕ್ಕಾಗಿ ಬಿಜೆಪಿಯ ದೂರಿನ ಮೇರೆಗೆ ಹೇಮಂತ್ ಸೊರೆನ್ ಶಾಸಕರಾಗಿ ಅನರ್ಹತೆಯನ್ನು ಎದುರಿಸುತ್ತಿದ್ದಾರೆ. ಚುನಾವಣಾ ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ರಮೇಶ್ ಬೈಸ್ಗೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications