ಅರುಣ್ ಗೋಯೆಲ್ ನೂತನ ಚುನಾವಣಾ ಆಯುಕ್ತರಾಗಿ ನೇಮಕ
ನವದೆಹಲಿ, ನವೆಂಬರ್ 20: ಗುಜರಾತ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ನಿವೃತ್ತಿಗೆ ಆರು ವಾರಗಳ ಮೊದಲು ಸ್ವಯಂ ನಿವೃತ್ತಿ ಸೇವೆ (ವಿಆರ್ಎಸ್) ತೆಗೆದುಕೊಂಡಿದ್ದ ಭಾರೀ ಕೈಗಾರಿಕೆಗಳ ಸಚಿವಾಲಯದ ಮಾಜಿ ಕಾರ್ಯದರ್ಶಿ ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ದೇಶದ ಉನ್ನತ ಚುನಾವಣಾ ಸಂಸ್ಥೆಯಲ್ಲಿ ಮೂರನೇ ಸದಸ್ಯ ಹುದ್ದೆಯು ಸುಮಾರು ಆರು ತಿಂಗಳಿನಿಂದ ಖಾಲಿಯಾಗಿತ್ತು. ಶನಿವಾರ ಸಂಜೆ ಕಾನೂನು ಸಚಿವಾಲಯದ ಪ್ರಕಟಣೆಯಲ್ಲಿ ಅಧ್ಯಕ್ಷರು ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಚುನಾವಣಾ ಆಯೋಗದ ಚುನಾವಣಾ ಆಯುಕ್ತರಾಗಿ 1985ರ ಐಎಎಸ್ ಬ್ಯಾಚ್ನ ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ನೇಮಿಸಲು ಸಂತೋಷವಾಗಿದೆ ಎಂದು ಬರೆದಿದೆ.

1985 ರ ಬ್ಯಾಚ್ನ ಪಂಜಾಬ್ ಕೇಡರ್ ಅಧಿಕಾರಿಯಾಗಿರುವ ಗೋಯಲ್ ಅವರು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಚುನಾವಣಾ ಸಮಿತಿಯಲ್ಲಿ ಸೇರಿಕೊಳ್ಳಲಿದ್ದಾರೆ. ಮಾಜಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುಶೀಲ್ ಚಂದ್ರ ಅವರು ಈ ವರ್ಷದ ಮೇ ತಿಂಗಳಲ್ಲಿ ನಿವೃತ್ತಿ ಹೊಂದಿದ್ದು, ರಾಜೀವ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದರು. ಚುನಾವಣಾ ಸಮಿತಿಯು ಎರಡು ಸದಸ್ಯರ ಸಂಸ್ಥೆಯಾಗಿದೆ. ಇದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಅನರ್ಹತೆಯ ಬೇಡಿಕೆಗಳು ಸೇರಿದಂತೆ ಹಲವಾರು ನಿರ್ಣಾಯಕ ಸಮಸ್ಯೆಗಳನ್ನು ನಿಭಾಯಿಸಬೇಕಾಗಿತ್ತು.
ಮುಂಬರುವ ತಿಂಗಳಲ್ಲಿ ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮತ್ತು ಕರ್ನಾಟಕಕ್ಕೆ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಿದಾಗ ಚುನಾವಣಾ ಸಮಿತಿಯು ತನ್ನ ಸಂಪೂರ್ಣ ಶಕ್ತಿಯನ್ನು ಹೊಂದಿರುತ್ತದೆ. ಇತ್ತೀಚಿನವರೆಗೂ ಗೋಯೆಲ್ ಅವರು ಭಾರೀ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಡಿಸೆಂಬರ್ 31, 2022ರಂದು ನಿವೃತ್ತರಾಗಬೇಕಿತ್ತು. ಆದರೆ ಅವರ ಸ್ವಯಂ ನಿವೃತ್ತಿಯಾದ ಕಾರಣ ನವೆಂಬರ್ 18ರಿಂದಲೇ ನಿವೃತ್ತಿ ಅವಧಿ ಜಾರಿಗೆ ಬಂದಿತು.

ಒಮ್ಮೆ ಅರುಣ್ ಗೋಯಲ್ ಅವರು ಹುದ್ದೆಯನ್ನು ವಹಿಸಿಕೊಂಡ ನಂತರ ಫೆಬ್ರವರಿ 2025ರ ವೇಳೆಗೆ ರಾಜೀವ್ ಕುಮಾರ್ ಅವರು ಅಧಿಕಾರವನ್ನು ತ್ಯಜಿಸಿದ ಬಳಿಕ ಗೋಯೆಲ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುತ್ತಾರೆ. ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ಷರತ್ತುಗಳು ಮತ್ತು ನಿವೃತ್ತಿಯೊಂದಿಗೆ ವ್ಯವಹರಿಸುವ ಕಾನೂನಿನ ಪ್ರಕಾರ, ಒಬ್ಬ ವ್ಯಕ್ತಿಯು ಆರು ವರ್ಷಗಳವರೆಗೆ ಅಥವಾ 65 ವರ್ಷ ವಯಸ್ಸಿನವರೆಗೆ ಆಯುಕ್ತರ ಹುದ್ದೆಯನ್ನು ಹೊಂದಬಹುದು ಎನ್ನಲಾಗಿದೆ. ಈಗ ಗೋಯೆಲ್ ಡಿಸೆಂಬರ್ 2027 ರವರೆಗೆ ಅಧಿಕಾರದಲ್ಲಿರುತ್ತಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications