ಚುನಾವಣೆ ಎದುರಿಸದೆಯೇ ಜೇಟ್ಲಿ ನಿರ್ವಹಿಸಿದ್ದರು ಹಲವು ಮಂತ್ರಿ ಖಾತೆ
ನವದೆಹಲಿ, ಆಗಸ್ಟ್ 24: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಸರ್ಕಾರದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದ ಅವರು ವಿತ್ತ ಸಚಿವರಾಗಿಯೇ ಬಹಳ ಖ್ಯಾತರು.
ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ರಾಜಕೀಯಕ್ಕೆ ಅಡಿ ಇಟ್ಟಿದ್ದ ಅರುಣ್ ಜೇಟ್ಲಿ ಅವರು ಬಿಜೆಪಿಯನ್ನು 1991 ರಲ್ಲಿ ಸೇರಿದರು. ಅಲ್ಲಿಂದ ಅವರು ಹಿಂತುರಿಗಿ ನೋಡಿದ್ದೇ ಇಲ್ಲ.
ಅರುಣ್ ಜೇಟ್ಲಿ ಬದುಕಿನ ಅಪರೂಪದ ಚಿತ್ರಗಳು
1999 ರಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಕ್ಕೆ ಬಂದಾಗ ಜೇಟ್ಲಿ ಅವರು ಬಿಜೆಪಿಯ ಪ್ರಮುಖ ವಕ್ತಾರರಾಗಿದ್ದರು. ವಾಜಪೇಯಿ ಅವರು ಮೊದಲ ಬಾರಿಗೆ ಜೇಟ್ಲಿ ಅವರಿಗೆ ಸಚಿವರಾಗುವ ಅವಕಾಶ ನೀಡಿದರು. ವಾಜಪೇಯಿ ಸಂಪುಟದಲ್ಲಿ ಹಲವು ಖಾತೆಗಳನ್ನು ಜೇಟ್ಲಿ ನಿಭಾಯಿಸಿದರು ಮತ್ತು ಯಶಸ್ವಿಯೂ ಎನಿಸಿಕೊಂಡರು.
ವಾಜಪೇಯಿ ಸರ್ಕಾರದಲ್ಲಿ ಮೊದಲಿಗೆ ಮಾಹಿತಿ ಮತ್ತು ಪ್ರಸಾರ ಖಾತೆಯನ್ನು ಜೇಟ್ಲಿ ಅವರಿಗೆ ನೀಡಲಾಯಿತು. ಇದರ ಜೊತೆಗೆ ಹೂಡಿಕೆ ಕುರಿತಾದ ಹೊಸ ಖಾತೆಯೊಂದನ್ನು ಸಹ ನೀಡಲಾಯಿತು. ಇದೇ ಅವಧಿಯಲ್ಲಿ ರಾಮ್ ಜೇಟ್ಮಲಾನಿ ರಾಜೀನಾಮೆಯಿಂದ ತೆರವಾದ ಕಾನೂನು, ನ್ಯಾಯ ಮತ್ತು ಕಂಪನಿ ವ್ಯವಹಾರ ಖಾತೆಯನ್ನು ಅವರು ನಿಭಾಯಿಸಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕ
2000 ಇಸವಿಯಲ್ಲಿ ಸಾಗಾಣೆ ಸಚಿವರಾಗಿ ಕಾರ್ಯನಿರ್ವಹಿಸಿದರು. ನಂತರ 2002ರಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆ ಆದರು. ನಂತರ 2003 ರ ವರೆಗೆ ಕಾರ್ಯದರ್ಶಿ ಹುದ್ದೆ ನಿರ್ಹವಿಸಿದ ಜೇಟ್ಲಿ ನಂತರ ಮತ್ತೆ ಸಂಪುಟಕ್ಕೆ ಸೇರಿ ವಾಣಿಜ್ಯ ಮತ್ತು ಕೈಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಿಸಿದರು. 2004 ರಲ್ಲಿ ಎನ್ಡಿಎ ಸರ್ಕಾರ ಉರುಳಿದ ನಂತರ ಮತ್ತೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನಕ್ಕೆ ಮರಳಿದರು.

ರಾಜ್ಯಸಭೆ ವಿಪಕ್ಷ ನಾಯಕರಾಗಿ ಕಾರ್ಯ
2009 ರಲ್ಲಿ ಅರುಣ್ ಜೇಟ್ಲಿ ಅವರನ್ನು ರಾಜ್ಯಸಭೆಯ ವಿಪಕ್ಷ ನಾಯಕನನ್ನಾಗಿ ಅಡ್ವಾಣಿ ಅವರು ಆಯ್ಕೆ ಮಾಡಿದರು. ಅದೇ ಸಮಯದಲ್ಲಿ ಅವರು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದರು. 2014 ರ ವರೆಗೆ ರಾಜ್ಯಸಭೆ ವಿಪಕ್ಷ ನಾಯಕರಾಗಿ ಅವರು ಮುಂದುವರೆದರು. ಈ ಅವಧಿಯಲ್ಲಿ ಕೆಲವು ಅತ್ಯುತ್ತಮ ಚರ್ಚೆಗಳಲ್ಲಿ ಅವರು ಭಾಗವಹಿಸಿದ್ದರು. ಅಣ್ಣಾ ಹಜಾರೆ ಅವರ ಜನಲೋಕಪಾಲಕ್ಕೆ ಅವರು ಬೆಂಬಲಿಸಿದ್ದರು.

ಮೋದಿ ಅವಧಿಯಲ್ಲಿ ಹಲವು ಖಾತೆ ನಿರ್ವಹಣೆ
2014 ರಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗ ಜೇಟ್ಲಿ ಅವರು ಹಲವು ಖಾತೆಗಳನ್ನು ನಿಭಾಯಿಸಿದರು. ಹಣಕಾಸು ಸಚಿವ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ, ಕಾರ್ಪೊರೇಟ್ ಸಚಿವರಾಗಿ ಕಾರ್ಯ ನಿರ್ವಹಿಸಿದರು ಇದೇ ಅವಧಿಯಲ್ಲಿ ರಕ್ಷಣಾ ಸಚಿವರಾಗಿಯೂ ಕೆಲ ಕಾಲ ಕಾರ್ಯ ನಿರ್ವಹಿಸಿದರು.

ಅಪನಗದೀಕರಣ, ಜಿಎಸ್ಟಿ ಪ್ರಮುಖ ನಿರ್ಣಯಗಳು
ಅಪನಗದೀಕರಣ ಮತ್ತು ಜಿಎಸ್ಟಿ ನಿರ್ಣಯಗಳು ಜೇಟ್ಲಿ ಅವರ ಅತ್ಯಂತ ಪ್ರಮುಖ ನಿರ್ಣಯಗಳು. ದೇಶದ ಆರ್ಥಿಕತೆಗೆ ಈ ಎರಡೂ ನೇರವಾಗಿ ಸಂಬಂಧಿಸಿವೆ. ಈ ಎರಡೂ ನಿರ್ಣಯಗಳು ದೇಶದ ಆರ್ಥಿಕತೆಗೆ ಮಾರಕವಾದುವೋ, ವರವಾದವೋ ಎಂಬ ಚರ್ಚೆ ಈಗಲೂ ನಡೆಯುತ್ತಲೇ ಇದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications