ಸಂಪ್ರದಾಯ ಮುರಿದು ಇಂಗ್ಲೀಷ್- ಹಿಂದಿಯಲ್ಲಿ ಬಜೆಟ್ ಭಾಷಣ
ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರದಂದು ಐದನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಬಜೆಟ್ ಭಾಷಣ ಆರಂಭಿಸಿದ್ದು, ಹಿಂದಿಯಲ್ಲೂ ಪ್ರಮುಖ ಅಂಶಗಳನ್ನು ಹೇಳಲಿದ್ದಾರೆ.
ಎನ್ ಡಿಎ ಸರ್ಕಾರದ ಪೂರ್ಣಪ್ರಮಾಣ ಬಜೆಟ್ ಇದಾಗಿದೆ. ಈ ಬಾರಿ ಸಂಪ್ರದಾಯ ಮೀರಿ ಜೇಟ್ಲಿ ಅವರು ಬಜೆಟ್ ಭಾಷನವನ್ನು ಹಿಂದಿಯಲ್ಲಿ ಪ್ರಸ್ತುತಪಡಿಸಲಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಕೂಡ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿ ಎನ್ನುವುದು ಸಚಿವಾಲಯದ ಉದ್ದೇಶ ಎಂದು ವಿತ್ತ ಸಚಿವಾಲಯದ ರಾಜ್ಯ ಸಚಿವ ಶಿವ್ ಪ್ರತಾಪ್ ಶುಕ್ಲಾ ಅವರು ಹೇಳಿದ್ದಾರೆ.
ಈ ಮೂಲಕ ಅರುಣ್ ಜೇಟ್ಲಿ ಅವರು ಸ್ವಾತಂತ್ರ್ಯ ನಂತರ ವಿತ್ತ ಸಚಿವರೊಬ್ಬರು ಮೊಟ್ಟ ಮೊದಲ ಬಾರಿಗೆ ಹಿಂದಿಯಲ್ಲಿ ಬಜೆಟ್ ಮಂಡನೆ ಮಾಡಿದ್ದಂತಾಗುತ್ತದೆ. ಇದು ಜನ ಸಾಮಾನ್ಯರಿಗಾಗಿ ಜನಸ್ನೇಹಿ ಬಜೆಟ್ ಆಗಲಿದೆ ಎಂದು ಶುಕ್ಲಾ ಹೇಳಿದರು.

ಕರ್ನಾಟಕ ಸೇರಿದಂತೆ 8 ರಾಜ್ಯಗಳ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಮಂಡಿಸಲಿರುವ 2018-19ನೆ ಸಾಲಿನ ಬಜೆಟ್ ಜನಸ್ನೇಹಿ, ಪ್ರಗತಿಪರವಾಗಿರುತ್ತದೆ ಎಂಬ ನಿರೀಕ್ಷೆಯಿದೆ.
More than 70% of GOI income comes from non Hindi states and 60% people are not from Hindi belt. What is Govt trying to convey? #HindiBudget
— DP SATISH (@dp_satish) February 1, 2018
ಕೃಷಿ, ನಿರುದ್ಯೋಗ ನಿವಾರಣೆ, ಮೂಲ ಸೌಕರ್ಯ, ಆರ್ಥಿಕ ಪ್ರಗತಿಗೆ ಬಜೆಟ್ ನಲ್ಲಿ ಮೋದಿ ಸರ್ಕಾರ ಹೆಚ್ಚಿನ ಒತ್ತು ಕೊಡುವ ಸಾಧ್ಯತೆ ಇದೆ. 8 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರೋ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಜನಪ್ರಿಯ ಬಜೆಟ್ ಮಂಡನೆ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications