ಈ ರಾಜ್ಯದಲ್ಲಿ ಜೂನ್ 4 ಅಲ್ಲ, 2ಕ್ಕೆ ಚುನಾವಣಾ ಫಲಿತಾಂಶ ಘೋಷಣೆ
ನವದೆಹಲಿ, ಮಾರ್ಚ್ 17: ಕೇಂದ್ರ ಚುನಾವಣಾ ಆಯೋಗ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಶನಿವಾರ ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆ ಮಾಡುವಾಗಲೇ ವಿವಿಧ ರಾಜ್ಯದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿತ್ತು.
ಭಾನುವಾರ ಚುನಾವಣಾ ಆಯೋಗ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ 2024ರ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಿದೆ. ಜೂನ್ 4ರ ಬದಲು ಜೂನ್ 2ರಂದು ಮತ ಎಣಿಕೆ ನಡೆಯಲಿದೆ.

ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡುವಾಗ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಿದ್ದರು. ಜೂನ್ 4ರಂದು ಮತ ಎಣಿಕೆ ಮಾಡಲಾಗುತ್ತದೆ ಎಂದು ಹೇಳಿದ್ದರು.
ಬದಲಾವಣೆ ಏಕೆ?; ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆಯ ಅವಧಿ ಜೂನ್ 4ರಂದು ಅಂತ್ಯಗೊಳ್ಳಲಿದೆ. ಜೂನ್ 4ರಂದು ಮತ ಎಣಿಕೆ ಮಾಡಿದರೆ ಕೆಲವು ದಿನ ರಾಜ್ಯದಲ್ಲಿ ಜನಪ್ರತಿನಿಧಿಗಳು ಇರುವುದಿಲ್ಲ. ಆದ್ದರಿಂದ ಆಡಳಿತಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಮತ ಎಣಿಕೆ ದಿನಾಂಕವನ್ನು ಜೂನ್ 2ಕ್ಕೆ ನಿಗದಿ ಮಾಡಲಾಗಿದೆ.
ಆದರೆ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯ ಮತ ಎಣಿಕೆ ಜೂನ್ 4ರಂದೇ ನಡೆಯಲಿದೆ. ವಿಧಾನಸಭಾ ಚುನಾವಣೆ ಮತ ಎಣಿಕೆ ದಿನಾಂಕ ಮಾತ್ರ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಸಿಕ್ಕಿಂ ರಾಜ್ಯದ ವಿಧಾನಸಭೆ ಚುನಾವಣೆ ಅಧಿಸೂಚನೆ ಮಾರ್ಚ್ 20ರಂದು ಘೋಷಣೆಯಾಗಲಿದೆ. ಮಾರ್ಚ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮಾರ್ಚ್ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಮಾರ್ಚ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏಪ್ರಿಲ್ 19ರಂದು ಮತದಾನ ನಡೆಯಲಿದೆ. ಮತ ಎಣಿಕೆ ಕಾರ್ಯ ಜೂನ್ 2ರಂದು ನಡೆಯಲಿದೆ. ಸಿಕ್ಕಿಂನಲ್ಲಿ 32 ವಿಧಾನಸಭಾ ಕ್ಷೇತ್ರಗಳಿವೆ.
2019ರ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 17 ಸ್ಥಾನಗಳನ್ನು ಗೆದ್ದಿತ್ತು. ಸಿಕ್ಕಿಂ ಡೆಮೋಕ್ರೆಟಿಕ್ ಫ್ರಂಟ್ ಪಕ್ಷ 15 ಸೀಟು ಗೆದ್ದಿತ್ತು.
ಅರುಣಾಚಲ ಪ್ರದೇಶ ರಾಜ್ಯದ 60 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಮಾರ್ಚ್ 20ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್ 27 ಕೊನೆಯ ದಿನ. ಮಾರ್ಚ್ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾರ್ಚ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏಪ್ರಿಲ್ 19ರಂದು ಮತದಾನ ನಡೆಯಲಿದೆ. ಜೂನ್ 2ರಂದು ಮತ ಎಣಿಕೆ ನಡೆಯಲಿದೆ.
2019ರ ಏಪ್ರಿಲ್ನಲ್ಲಿ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಬಿಜೆಪಿ ಅಧಿಕಾರಕ್ಕೆ ಬಂದಿತು ಮತ್ತು ಪೆಮಾ ಖಂಡು ಮುಖ್ಯಮಂತ್ರಿಯಾದರು. ಈಗ ಲೋಕಸಭೆ ಚುನಾವಣೆ 2024ರ ಜೊತೆಗೆ ರಾಜ್ಯದ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications