Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
Heavy Rain: ಉತ್ತರ ಭಾರತದ ಹಲವೆಡೆ ಮಳೆರಾಯನ ಆರ್ಭಟ ಶುರುವಾಗಿ ಈಗಾಗಲೇ ಹಲವು ಅನಾಹುತಗಳು ಸೃಷ್ಟಿಯಾಗಿವೆ. ಇದನ್ನು ಹೊರತುಪಡಿಸಿದರೆ ಕೆಲವೇ ಕಡೆಗಳಲ್ಲಿ ಮಾತ್ರ ಜಿನುಗು ಮಳೆಯಾಗುತ್ತಿದೆ, ಇನ್ನು ಬಹುತೇಕ ಕಡೆಗಳಲ್ಲಿ ಸೂರ್ಯನ ಶಾಖಕ್ಕೆ ಜನರು ಬೆಂದು ಹೋಗಿದ್ದಾರೆ. ಇದರ ನಡುವೆಯೇ ಇದೀಗ ದೇಶದ ಈಶಾನ್ಯ ಭಾಗದಲ್ಲಿ ಅಬ್ಬರದ ಮಳೆಯಿಂದ ದೊಡ್ಡ ಅನಾಹುತವೊಂದು ಸಂಭವಿಸಿದೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಮುಂದೆ ತಿಳಿಯೋಣ.
Disturbed to learn the inconvenience being caused to commuters due to the extensive damage to the highway between Hunli and Anini. Instructions have been issued to restore the connectivity at the earliest as this road connects Dibang Valley to the rest of the country.@PMOIndia https://t.co/xwiOu7yrJB
— Pema Khandu པདྨ་མཁའ་འགྲོ་། (Modi Ka Parivar) (@PemaKhanduBJP) April 25, 2024
ಅರುಣಾಚಲ ಪ್ರದೇಶದಲ್ಲಿ ಸತತವಾಗಿ ಬಿಟ್ಟುಬಿಡದೇ ಮಳೆರಾಯ ಅಬ್ಬರಿಸುತ್ತಲೇ ಇದ್ದಾನೆ. ಇನ್ನು ಇಂದು (ಏಪ್ರಿಲ್ 25) ಸುರಿದ ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ 313ರಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ವಾಹನ ಸವಾರಾರು ಹಿಂದಕ್ಕೂ ಹೋಗದೇ, ಮುಂದಕ್ಕೂ ಹೋಗದೇ ಪರದಾಡಿದ ಘಟನೆ ನಡೆದಿದೆ. ಇದಷ್ಟೇ ಅಲ್ಲದೆ, ಅಲ್ಲಿನ ನಿವಾಸಿಗಳು ಕೂಡ ಆತಂಕಕ್ಕೆ ಒಳಗಾಗಿದ್ದಾರೆ.

ಬುಧವಾರ (ಏಪ್ರಿಲ್ 24) ರಾತ್ರಿ ಭೂಕುಸಿತ ಉಂಟಾದ ಹಿನ್ನೆಲೆ ದಿಬಾಂಗ್ ವ್ಯಾಲಿ ಜಿಲ್ಲೆಯ ಹುನಲಿ, ಅನಿನಿ ಭಾಗದಲ್ಲಿ ಹಾದುಹೋಗುವ ರಸ್ತೆಗಳು ಸಂಪೂರ್ಣವಾಗಿ ಇಬ್ಭಾಗವಾಗಿವೆ. ಇನ್ನು ಈ ಜಿಲ್ಲೆಯನ್ನು ಸಂಪರ್ಕಿಸುವ ರಸ್ತೆ ಎಂದರೆ ಇದೊಂದೆ ಆಗಿತ್ತು. ಇದೀಗ ಈ ರಸ್ತೆ ಸಂಪರ್ಕವಿಲ್ಲದೆ, ಇಲ್ಲಿನ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications