ಪ್ರಶಸ್ತಿ ಹಿಂದಿರುಗಿಸಿದವರ ಪಟ್ಟಿ ಸೇರಿದ ಅರುಂಧತಿ ರಾಯ್
ನವದೆಹಲಿ, ನವೆಂಬರ್. 05: ಪ್ರಶಸ್ತಿ ಹಿಂದಿರುಗಿಸಿದ ಸಾಹಿತಿಗಳ ಪಟ್ಟಿಗೆ ಬೂಕರ್ ಪುರಸ್ಕೃತ ಲೇಖಕಿ ಅರುಂಧತಿ ರಾಯ್ ಸಹ ಸೇರ್ಪಡೆಯಾಗಿದ್ದಾರೆ.
ಸಾಹಿತಿಗಳು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ರಾಯ್ ಪ್ರಶಸ್ತಿ ಹಿಂದಕ್ಕೆ ನೀಡಿದ್ದಾರೆ. ' ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್' ಗೆ ಪ್ರತಿಷ್ಠಿತ ಬೂಕರ್ ಪಡೆದುಕೊಂಡ ಸಾಹಿತಿಯ ಈ ನಡೆ ಚರ್ಚೆಗೆ ಕಾರಣವಾಗಿದೆ. 1989ರಲ್ಲಿ 'ಇನ್ ವಿಚ್ ಆನ್ನಿ ಗಿವ್ಸ್ ಇಟ್ ದೋಸ್ ಒನ್ಸ್ ' ಸಿನಿಮಾದ ಚಿತ್ರಕಥೆಗೆ ಕೇಂದ್ರ ಸರ್ಕಾರ ರಾಯ್ ಅವರಿಗೆ ಕೊಡಮಾಡಿದ್ದ ಪ್ರಶಸ್ತಿಯನ್ನು ಹಿಂದಕ್ಕೆ ನೀಡಿದ್ದಾರೆ. [ಕಲಬುರ್ಗಿ ಹತ್ಯೆ ಖಂಡಿಸಿ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದವರ ಪಟ್ಟಿ]

ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಈ ಬಗ್ಗೆ ಲೇಖನವೊಂದನ್ನು ಬರೆದುಕೊಂಡಿದ್ದು, ಪ್ರಶಸ್ತಿ ವಾಪಸ್ ನೀಡಿದವರಿಗೆ ಪಟ್ಟಿಗೆ ಸೇರಲು ನನಗೆ ತುಂಬಾ ಸಂತೋಷವಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಬರೆದಿದ್ದಾರೆ.
ರಾಯ್ ಅವರ ಪ್ರಬಂಧಗಳ ಸಂಗ್ರಹಕ್ಕೆ 2005 ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆದರೆ ಕಾರ್ಮಿಕರ ಹಿತಾಸಕ್ತಿ ಹೆಸರಿನಲ್ಲಿ ರಾಯ್ ಪ್ರಶಸ್ತಿ ಸ್ವೀಕಾರ ಮಾಡಿರಲಿಲ್ಲ.[ಪ್ರಶಸ್ತಿ ಹಿಂದಿರುಗಿಸುತ್ತಿರುವವರಿಗೆ ವಿದ್ಯಾ ಬಾಲನ್ ಟಾಂಗ್ ನೀಡಿದ್ದು ಹೀಗೆ]
'ಇನ್ ಟಾಲರೆನ್ಸ್' ಎಂಬ ಪದಕ್ಕೂ ನಡೆಯುತ್ತಿರುವ ದೌರ್ಜನ್ಯಕ್ಕೂ ಬಹಳ ವ್ಯತ್ಯಾಸವಿದೆ. ಈ ಬಗೆಯ ಹಿಂಸೆಯ ವಿರುದ್ಧ ಸಾಹಿತಿಗಳು, ಚಿಂತಕರು ಒಟ್ಟಾಗಿ ಹೋರಾಡಬೇಕಿದೆ ಎಂದು ಬರೆದಿದ್ದಾರೆ. ರಾಯ್ ಅವರ ನಡೆಗೆ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications