ಪ್ರಶಸ್ತಿ ವಾಪಸ್ ಕೊಟ್ಟ ಅರುಂಧತಿಗೆ ಟ್ವಿಟ್ಟರ್ನಲ್ಲಿ ಮಂಗಳಾರತಿ
ನವದೆಹಲಿ, ನವೆಂಬರ್. 05: ಉತ್ತಮ ಚಿತ್ರಕತೆಗೆ ವಿಭಾಗಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಪ್ರಶಸ್ತಿ ಹಿಂದಿರುಗಿಸಿದ ಲೇಖಕಿ ಅರುಂಧತಿ ರಾಯ್ ನಡೆ ಮತ್ತು ಅವರು ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಬರೆದುಕೊಂಡ ಲೇಖನಕ್ಕೆ ಸಾಮಾಜಿಕ ತಾಣಗಳಲ್ಲಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಪ್ರಶಸ್ತಿ ಹಿಂದಕ್ಕೆ ನೀಡಿದ ಸಾಹಿತಿಗಳು, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಬಾಲಿವುಡ್ ನಟ ಶಾರುಖ್ ಖಾನ್ ಸೇರಿದಂತೆ ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿದ ಅನೇಕರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಅಲ್ಲದೇ ಕೆಲ ಪ್ರಶ್ನೆಗಳನ್ನು ಅವರ ಮುಂದಿಡಲಾಗಿದೆ.[ಪ್ರಶಸ್ತಿ ಹಿಂದಿರುಗಿಸಿದವರ ಪಟ್ಟಿ ಸೇರಿದ ಅರುಂಧತಿ ರಾಯ್]
ಸಾಹಿತಿಗಳ ಮೇಲಿನ ಹಲ್ಲೆ, ದಾದ್ರಿ ಘಟನೆ, ಗೋಮಾಂಸ ವಿವಾದ, ದಲಿತ ಮಕ್ಕಳ ಸಜೀವ ದಹನದಂತ ವಿಚಾರಗಳನ್ನು ಇಟ್ಟುಕೊಂಡು ಸಾಹಿತಿಗಳು, ಚಿಂತಕರು ಪ್ರಶಸ್ತಿ ಹಿಂದಕ್ಕನೀಡುತ್ತಿದ್ದಾರೆ. ಸಾಹಿತಿಗಳ ಈ ಕ್ರಮವನ್ನು ನಾಗರಿಕರು ತಮ್ಮದೇ ಆದ ದೃಷ್ಟಿಕೋನದಲ್ಲಿ ವಿಶ್ಲೇಷಿಸಿ, ಪ್ರಶ್ನೆ ಮಾಡುತ್ತಿದ್ದಾರೆ.

ಅಸಹಿಷ್ಣುತೆ ಪದಕ್ಕೆ ಬೇರೆ ಅರ್ಥವಿದೆ
ಅಸಹಿಷ್ಣುತೆ ಎಂಬ ಪದಕ್ಕೂ ನಡೆಯುತ್ತಿರುವ ದೌರ್ಜನ್ಯಕ್ಕೂ ಬಹಳ ವ್ಯತ್ಯಾಸವಿದೆ. ಈ ಬಗೆಯ ಹಿಂಸೆಯ ವಿರುದ್ಧ ಸಾಹಿತಿಗಳು, ಚಿಂತಕರು ಒಟ್ಟಾಗಿ ಹೋರಾಡಬೇಕು ಎಂದು ರಾಯ್ ಹೇಳಿದ್ದರು.

ಯಾಕೆ ಪ್ರಶಸ್ತಿ ಹಿಂದೆ ಕೊಡುತ್ತಿದ್ದಾರೆ?
ಯಾಕೆ ಸಾಹಿತಿಗಳೆಲ್ಲ ಪ್ರಶಸ್ತಿ ಹಿಂದಕ್ಕೆ ನೀಡುತ್ತಿದ್ದಾರೆ? ಇವರೇನು ಉಗ್ರಗಾಮಿಗಳ ಅಥವಾ ದೇಶದ ವೈರಿಗಳ ಜತೆ ಕೈ ಜೋಡಿಸಿದ್ದಾರೆಯೇ? ಎಂದು ಟ್ವಿಟರ್ ನಲ್ಲಿ ಪ್ರಶ್ನೆ ಮಾಡಲಾಗಿದೆ.
|
ಒಳ್ಳೆಯ ಬರಹಗಾರ್ತಿ, ಆದರೆ ಭಾರತ ವಿರೋಧಿ
ಅರುಂಧತಿ ರಾಯ್ ಉತ್ತಮ ಬರಹಗಾರ್ತಿ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಅವರಿಗೆ ನಿಕ್ಕೂ ಭಾರತದ ಬಗ್ಗೆ ಗೌರವಿದೆಯೇ? ಇಲ್ಲಿವರೆಗೆ ಭಾರತದ ಬಗ್ಗೆ ಸಕಾರಾತ್ಮಕವಾಗಿ ಬರೆದಿದ್ದನ್ನು ನಾನು ಕಂಡಿಲ್ಲ ಎಂದು ಅಭಿಪ್ರಾಯ ವ್ಯಕ್ಯವಾಗಿದೆ.

ಶಾರುಖ್ ಗೆ ಪಾಕಿಸ್ತಾನವಿದೆ
ಶಾರುಖ್ ಖಾನ್ ಗೆ ಪಾಕಿಸ್ತಾನವಿದೆ, ಅರುಂಧತಿ ರಾಯ್ ಮತ್ತು ದಿಪ್ನಾಕರ್ ಬ್ಯಾನರ್ಜಿ ಗೆ ಬಾಂಗ್ಲಾದೇಶವಿದೆ. ಆದರೆ ನಾರಾಯಣ ಮೂರ್ತಿ ಅವರಿಗೆ ಯಾವುದೇ ಆಯ್ಕೆ ಇಲ್ಲ ಎಂಬ ಕಟು ಅಭಿಪ್ರಾಯ ಮಂಡಿಸಲಾಗಿದೆ.

ಬರ್ಖಾ ದತ್ ಗೆ ಜತೆಗಾರ್ತಿ
ರಾಯ್ ಪ್ರಶಸ್ತಿ ಹಿಂದಕ್ಕೆ ನೀಡಿದ ನಂತರ ಬರ್ಖಾ ದತ್ ಅವರಿಗೆ ಅಂತಿಮವಾಗಿ ಜತೆಗಾರರೊಬ್ಬರು ಸಿಕ್ಕಂತಾಯಿತು ಎಂದೊಬ್ಬರು ಹೇಳಿದ್ದಾರೆ.
|
ಇದೀಗ ಹೋರಾಟ ಆರಂಭ
ರಾಯ್ ಪ್ರಶಸ್ತಿ ವಾಪಸ್ ನೀಡಿದ ನಂತರ ಇದೀಗ ಬೌದ್ಧಿಕ ಹೋರಾಟಕ್ಕೆ ನಿಜ ಆರಂಭ ಶುರುವಾಗಿದೆ. ಇದು ಯಾರ ಯಾರ ಮಧ್ಯೆ ಎಂಬುದನ್ನು ನೀವೇ ನೋಡಿಕೊಳ್ಳಿ
|
ಆಕ್ರೋಶದ ಟ್ವೀಟ್
ಪ್ರಶಸ್ತಿ ವಾಪಸ್ ಕೊಡುತ್ತಿರುವವರ ಮತ್ತು ಹೇಳಿಕೆ ನೀಡುತ್ತಿರುವವರನ್ನು ಉದ್ದೇಶಿಸಿ ಮಾಡಿದ ಆಕ್ರೋಶದ ಟ್ವೀಟ್.
| Array |
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವೇ?
ಕಳೆದ 20 ವರ್ಷಗಳಲ್ಲಿ ಅರುಂಧತಿ ರಾಯ್ 45000 ಅಂಕಣಗಳನ್ನು ಬರೆದಿದ್ದಾರೆ. 23000 ಕಡೆ ಭಾಷಣ ಮಾಡಿದ್ದಾರೆ. ಹಾಗಾದರೆ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವೆ?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications