ಜೇಟ್ಲಿ ಬಗ್ಗೆ ಅವಹೇಳನ ಪದ ಬಳಕೆಗೆ ಕೇಜ್ರಿಯದ್ದೇ ಕುಮ್ಮಕ್ಕು: ಜೇಠ್ಮಲಾನಿ
ಜೇಟ್ಲಿ ವಿರುದ್ಧ ಅವಹೇಳನಕಾರಿ ಪದ ಬಳಕೆಗೆ ಕೇಜ್ರಿವಾಲ್ ಅವರದ್ದೇ ಕುಮ್ಮಕ್ಕು. ಇತ್ತೀಚೆಗೆ, ವಿಚಾರಣೆ ವೇಳೆ ಜೇಟ್ಲಿ ಅವರನ್ನು ದಗಾಕೋರ ಎಂದಿದ್ದ ಜೇಠ್ಮಲಾನಿ. ಆನಂತರ, ಸ್ಪಷ್ಟನೆ ನೀಡಿ ಕೇಜ್ರಿವಾಲ್ ಕಡೆ ಬೆರಳು ಮಾಡಿದ ಹಿರಿಯ ವಕೀಲ. ಆದರೆ, ಜೇಠ
ನವದೆಹಲಿ, ಜುಲೈ 29: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿಚಾರಣೆ ನಡೆಸುವ ವೇಳೆ ಅವರ ವಿರುದ್ಧ ಅವಹೇಳನಕಾರಿ ಪದಗಗಳನ್ನು ಬಳಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೇ ತಮಗೆ ಸೂಚಿಸಿದ್ದರೆಂದು ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಪುನರುಚ್ಛರಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜೇಟ್ಲಿ ಅವರ ವಿಚಾರಣೆ ನಡೆಸುವ ವೇಳೆ ಅವರನ್ನು ಹೀನಾಯವಾಗಿ ಬೈಯ್ಯಬೇಕು ಎಂದು ಕೇಜ್ರಿವಾಲ್ ಅವರೇ ಸೂಚಿಸಿದ್ದರು. ಅವರ ಸೂಚನೆಯ ಮೇರೆಗೆ ನಾನು ಹಾಗೆ ನಡೆದುಕೊಂಡೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ'' ಎಂದಿದ್ದಾರೆ.

ಕೇಜ್ರಿವಾಲ್ ವಿರುದ್ಧ ಅರುಣ್ ಜೇಟ್ಲಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದ ಹಿನ್ನೆಲೆಯಲ್ಲಿ, ಕೇಜ್ರಿವಾಲ್ ವಿರುದ್ಧ ವಕೀಲರಾಗಿದ್ದ ರಾಮ್ ಜೇಠ್ಮಲಾನಿ ಇತ್ತೀಚೆಗೆ ಅರುಣ್ ಜೇಟ್ಲಿ ಅವರನ್ನು ವಿಚಾರಣೆ ಮಾಡುವಾಗ ದಗಾಕೋರ ಎಂದು ಆರೋಪಿಸಿದ್ದರು. ಹಾಗಾಗಿ, ಜೇಟ್ಲಿ ಅವರು ಜೇಠ್ಮಲಾನಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇದರಿಂದ ಎಚ್ಚೆತ್ತ, ರಾಮ್ ಜೇಠ್ಮಲಾನಿ ಅವರು ಅರವಿಂದ್ ಕೇಜ್ರಿವಾಲ್ ಅವರೇ ತಮಗೆ ಅಂಥ ಪದಗಳನ್ನು ಬಳಸಲು ಸೂಚಿಸಿದ್ದರೆಂದು ತಿಳಿಸಿದ್ದರು. ಆದರೆ, ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದ ಕೇಜ್ರಿವಾಲ್, ತಾವು ಅಂತ ಯಾವುದೇ ಸೂಚನೆ ನೀಡಿಲ್ಲವೆಂದು ತಿಳಿಸಿದ್ದರು.
ಇದರಿಂದ ರೊಚ್ಚಿಗೆದ್ದ ಜೇಠ್ಮಲಾನಿ, ಕೇಜ್ರಿವಾಲ್ ಅವರ ವಕೀಲಿಕೆಯಿಂದ ಹಿಂದೆ ಸರಿದಿದ್ದಾರಲ್ಲದೆ, ತಮಗೆ ಕೇಜ್ರಿವಾಲ್ ಅವರಿಂದ ಸಲ್ಲಬೇಕಿರುವ 2 ಕೋಟಿ ರು. ವಕೀಲಿಗೆ ಶುಲ್ಕವನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications