Get Updates
Get notified of breaking news, exclusive insights, and must-see stories!

Delhi Assembly Election 2025: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ವಿಶೇಷ ಬೇಡಿಕೆ

ನವದೆಹಲಿ, ಫೆಬ್ರವರಿ 02: ದೆಹಲಿ ವಿಧಾನಸಭೆ ಚುನಾವಣೆ-2025ರ ಮತದಾನಕ್ಕೆ ಎರಡು ದಿನ ಬಾಕಿ ಇದೆ. ಫೆಬ್ರವರಿ 5ರ ಬುಧವಾರ 70 ಸದಸ್ಯ ಬಲದ ವಿಧಾನಸಭೆಗೆ ಮತದಾನ ನಡೆಯಲಿದೆ, ಫೆಬ್ರವರಿ 8ರಂದು ಫಲಿತಾಂಶ ಘೋಷಣೆಯಾಗಲಿದೆ. ರಾಜ್ಯದ ಎಎಪಿ ಸರ್ಕಾರ ಚುನಾವಣಾ ಆಯೋಗದ ಕಾರ್ಯ ವೈಖರಿಯ ಬಗ್ಗೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತಿದೆ. ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಆಯೋಗದ ಮುಂದೆ ಹೊಸ ಬೇಡಿಕೆಯನ್ನು ಇಟ್ಟಿದ್ದಾರೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಅರವಿಂದ ಕೇಜ್ರಿವಾಲ್ ಪತ್ರವೊಂದನ್ನು ಬರೆದಿದ್ದಾರೆ. ದೆಹಲಿ ಚುನಾವಣೆ ಉಸ್ತುವಾರಿ ನೋಡಿಕೊಳ್ಳಲು ಸ್ವತಂತ್ರ ವೀಕ್ಷಕರನ್ನು ನಿಯೋಜನೆ ಮಾಡಬೇಕು. ಎಎಪಿ ಕಾರ್ಯಕರ್ತರ ಮೇಲೆ ದಾಳಿ ನಡೆಯುವಾಗ ಕರ್ತವ್ಯ ನಿರ್ವಹಣೆ ಮಾಡಲು ವಿಫಲರಾದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Arvind Kejriwal Demand For Independent Observers For New Delhi Seat

ಅಧಿಕಾರಿಗಳ ದುರ್ಬಳಕೆ: ಅರವಿಂದ ಕೇಜ್ರಿವಾಲ್ ಚುನಾವಣೆಗೆ ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ ಎಂದು ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಆದ್ದರಿಂದ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ನವದೆಹಲಿ ಕ್ಷೇತ್ರದಲ್ಲಿ ಅಧಿಕಾರಿಗಳು ಬಿಜೆಪಿಯ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಪಕ್ಷಪಾತ ಮಾಡುವ ಅಧಿಕಾರಿಗಳನ್ನು ಅಮಾನತು ಮಾಡಿ, ಕ್ಷೇತ್ರಕ್ಕೆ ಸ್ವತಂತ್ರ ವೀಕ್ಷಕರನ್ನು ನೇಮಕ ಮಾಡಿ ಎಂದು ಅರವಿಂದ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಅಭ್ಯರ್ಥಿಗಳು. ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಕಣಕ್ಕಿಳಿದಿರುವ ಕ್ಷೇತ್ರವಾಗಿರುವ ಕಾರಣ ಈ ಕ್ಷೇತ್ರದ ಮೇಲೆ ದೇಶದ ಗಮನವಿದೆ. ಚುನಾವಣೆಯಲ್ಲಿ ಎಎಪಿ ಗೆದ್ದರೆ ಕೇಜ್ರಿವಾಲ್ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎಎಪಿ ಪಕ್ಷ ಈಗಾಗಲೇ ಘೋಷಣೆ ಮಾಡಿದೆ.

ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರಿಗೆ ರಕ್ಷಣೆ ಬೇಕಾಗಿದೆ. ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುವಾಗ ಕರ್ತವ್ಯ ನಿರ್ವಹಣೆ ಮಾಡದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಅರವಿಂದ ಕೇಜ್ರಿವಾಲ್ ಪತ್ರದಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಅಧಿಕಾರ ದುರುಪಯೋಗ ಮತ್ತು ಬೆದರಿಕೆ ತಂತ್ರದ ಮೂಲಕ ದೆಹಲಿ ಚುನಾವಣೆಯನ್ನು ಗೆಲ್ಲಲು ಹೊರಟಿದೆ. ಆದರೆ ದೆಹಲಿಯ ಜನರು ಬುದ್ಧಿವಂತರು ಅವರು ಮತಯಂತ್ರದ ಬಟನ್ ಒತ್ತುವ ಮೂಲಕ ಬಿಜೆಪಿಯವರನ್ನು ಹೀನಾಯವಾಗಿ ಸೋಲಿಸಲಿದ್ದಾರೆ ಎಂದು ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ನಡೆಯುವ ರಾಷ್ಟ್ರ ರಾಜಧಾನಿ ದೆಹಲಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ, ಕಾಂಗ್ರೆಸ್ ಪ್ರಮುಖ ಎದುರಾಳಿಗಳು. ಬಿಜೆಪಿ ಮತ್ತು ಎಎಪಿ ನಡುವೆ ಪ್ರಬಲ ಪೈಪೋಟಿ ಇದೆ ಎಂಬ ಮಾಹಿತಿ ಸಿಕ್ಕಿದೆ. 2015, 2020ರ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಎಎಪಿ 2025ರ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ.

ನವದೆಹಲಿ ಕ್ಷೇತ್ರದಲ್ಲಿ 2013ರ ಮೊದಲ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ 44,269 ಮತಗಳ ಅಂತರದಿಂದ ಗೆಲುವು ಸಾಧಿಸಿದರು. 2015ರ ಚುನಾವಣೆಯಲ್ಲಿ ಅವರು 57,213 ಮತಗಳು ಮತ್ತು 2020ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 46,758 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+