Arvind Kejriwal: 90 ದಿನಗಳ ಜೈಲುವಾಸದಿಂದ ಕೊನೆಗೂ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು, ಇಲ್ಲೊಂದು ಟ್ವಿಸ್ಟ್!
ನವದೆಹಲಿ, ಜುಲೈ. 12: ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಎಎಪಿ ಮುಖ್ಯಸ್ಥರು "90 ದಿನಗಳ ಜೈಲುವಾಸವನ್ನು ಅನುಭವಿಸಿದ್ದಾರೆ" ಎಂದು ಹೇಳಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿ, ಅರವಿಂದ್ ಕೇಜ್ರಿವಾಲ್ ಅವರು 90 ದಿನಗಳ ಕಾಲ ಜೈಲುವಾಸವನ್ನು ಅನುಭವಿಸಿದ್ದಾರೆ ಮತ್ತು ಈ ಪ್ರಕರಣವು ಬದುಕುವ ಮತ್ತು ವ್ಯಕ್ತಿಯ ಸ್ವಾತಂತ್ರ್ಯದ ಹಕ್ಕನ್ನು ಒಳಗೊಂಡಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಕೂಡ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಪಾದಿತ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಿಂದ ಬಂಧಿಸಲ್ಪಟ್ಟಿರುವುದರಿಂದ ತಿಹಾರ್ ಜೈಲಿನಲ್ಲಿ ಉಳಿಯಲಿದ್ದಾರೆ.
ಜಾರಿ ನಿರ್ದೇಶನಾಲಯ (ಇಡಿ) ದ ಮಾಡಿರುವ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಕೇವಲ ವಿಚಾರಣೆಯಿಂದ ಬಂಧನಕ್ಕೆ ಅವಕಾಶವಿಲ್ಲ ಎಂದು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಹೇಳಿದೆ.
"ಈ ಪ್ರಕರಣವು ಜೀವನದ ಹಕ್ಕಿಗೆ ಸಂಬಂಧಿಸಿದೆ ಮತ್ತು ವಿಷಯವನ್ನು ವಿಸ್ತೃತ ಪೀಠಕ್ಕೆ ಉಲ್ಲೇಖಿಸಿರುವುದರಿಂದ, ಮಧ್ಯಂತರ ಜಾಮೀನಿನ ಮೇಲೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ" ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ. ಆದರೆ, ಮಧ್ಯಂತರ ಜಾಮೀನಿನ ಪ್ರಶ್ನೆಯನ್ನು ವಿಸ್ತೃತ ಪೀಠವು ಮಾರ್ಪಡಿಸಬಹುದು ಎಂದು ಪೀಠ ಸ್ಪಷ್ಟಪಡಿಸಿದೆ.

"ಅರವಿಂದ್ ಕೇಜ್ರಿವಾಲ್ ಅವರು 90 ದಿನಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ. ಅವರು ಚುನಾಯಿತ ನಾಯಕರಾಗಿದ್ದಾರೆ ಮತ್ತು ಅವರು ಪಾತ್ರದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟದ್ದು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನ್ಯಾಯಾಲಯಗಳು ಅವರಿಗೆ ನಿರ್ದೇಶಿಸಲು ಸಾಧ್ಯವಿಲ್ಲ" ಎಂದು ನ್ಯಾಯಾಲಯ ಹೇಳಿದೆ.
ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ಕೇಸ್ ಯಾವುದು?
ದೆಹಲಿ ಮುಖ್ಯಮಂತ್ರಿಯನ್ನು ಮಾರ್ಚ್ 21 ರಂದು ಇಡಿ ಬಂಧಿಸಿತು, ಇದೀಗ ರದ್ದುಗೊಂಡಿರುವ ದೆಹಲಿ ಮದ್ಯ ನೀತಿಯಲ್ಲಿ ಲೋಪದೋಷಗಳನ್ನು ಸೃಷ್ಟಿಸಲು ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು ಕ್ರಿಮಿನಲ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದೆ.
ಅದೇ ಸುಪ್ರೀಂ ಕೋರ್ಟ್ ಪೀಠವು ಮೇ ತಿಂಗಳಲ್ಲಿ ಕೇಜ್ರಿವಾಲ್ಗೆ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಎರಡು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಅವಧಿ ಮುಗಿದ ನಂತರ ಎಎಪಿ ಮುಖ್ಯಸ್ಥರು ತಿಹಾರ್ ಜೈಲಿಗೆ ಮರಳಿದ್ದರು.
ಜೂನ್ 20 ರಂದು ದೆಹಲಿಯ ವಿಚಾರಣಾ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್ಗೆ ಜಾಮೀನು ನೀಡಿತು ಮತ್ತು ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ಅಪರಾಧದ ಆದಾಯದೊಂದಿಗೆ ಯಾವುದೇ ನೇರ ಸಾಕ್ಷ್ಯವನ್ನು ನೀಡಲು ಇಡಿ ವಿಫಲವಾಗಿದೆ ಎಂದು ಹೇಳಿದ್ದರು. ಇಡಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದೂ ನ್ಯಾಯಾಲಯ ಹೇಳಿತ್ತು. ಆದರೆ, ಈ ಆದೇಶಕ್ಕೆ ದೆಹಲಿ ಹೈಕೋರ್ಟ್ ಜೂನ್ 25ರಂದು ತಡೆ ನೀಡಿತ್ತು












Click it and Unblock the Notifications