Delhi Election: ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ಗೆ ಶಾಕ್ ಕೊಟ್ಟ ಹರಿಯಾಣ ಪೊಲೀಸರು
ದೆಹಲಿ ವಿಧಾನಸಭಾ ಚುನಾವಣೆಗೆ ಒಂದು ದಿನ ಇರುವಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಹರಿಯಾಣ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಯಮುನಾ ನದಿ ನೀರಿನ ವಿಚಾರದಲ್ಲಿ ಹರಿಯಾಣ ವಿರುದ್ಧ ಆರೋಪ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಹೇಳಿಕೆಯನ್ನು ಹರಿಯಾಣ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಇದೀಗ ಎಫ್ಐಆರ್ ದಾಖಲು ಮಾಡಿದೆ.
ಹರಿಯಾಣ ಯಮುನಾ ನದಿಯ ನೀರನ್ನು ಉದ್ದೇಶಪೂರ್ವಕವಾಗಿಯೇ ವಿಷಪೂರಿತಗೊಳಿಸುತ್ತದೆ ಎಂದು ಅವರು ನೀಡಿರುವ ಹೇಳಿಕೆ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗಲಭೆಯನ್ನು ಪ್ರಚೋದಿಸುವುದು, ದ್ವೇಷ ಹರಡುವುದು, ಹಾನಿ ಮಾಡುವ ಉದ್ದೇಶಿಂದ ಯಾರ ಮೇಲಾದರೂ ಅಪರಾಧದ ಆರೋಪ ಹೊರಿಸುವುದು ಮತ್ತು ನಾಗರಿಕರ ಧಾರ್ಮಿಕ ಭಾವನೆಗಳನ್ನು ಅವಮಾನಿಸಲು ದುರುದ್ದೇಶಪೂರಿತ ಕೃತ್ಯಗಳನ್ನು ಎಸಗುವುದು ಪ್ರಮುಖ ಆರೋಪಗಳಾಗಿವೆ.
ಅರವಿಂದ್ ಕೇಜ್ರಿವಾಲ್ ಹೇಳಿಕೆ ವಿವಾದ
ದೆಹಲಿ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಹರಿಯಾಣ ಸರ್ಕಾರವು ದೆಹಲಿಗೆ ವಿಷಪೂರಿತ ನೀರನ್ನು ಪೂರೈಕೆ ಮಾಡುತ್ತಿದೆ, ಹರಿಯಾಣದಲ್ಲಿ ಬಿಜೆಪಿ ಸರ್ಕಾರವಿದ್ದು ದೆಹಲಿಗೆ ಸರಬರಾಜು ಮಾಡುವ ನೀರಿನಲ್ಲಿ ವಿಷ ಬೆರೆಸಲಾಗುತ್ತಿದೆ ಎನ್ನುವ ಅರ್ಥದ ಹೇಳಿಕೆಗಳನ್ನ ನೀಡಿದ್ದರು.
ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗವು ತಮ್ಮ ಆರೋಪಗಳಿಗೆ ಸರಿಯಾದ ಸಾಕ್ಷಿ ಒದಗಿಸುವಂತೆ ನೋಟಿಸ್ ಕೊಟ್ಟಿತ್ತು. ಇದಕ್ಕೆ ಉತ್ತರ ಕೊಟ್ಟಿದ್ದ ಅರವಿಂದ್ ಕೇಜ್ರಿವಾಲ್ ನಮ್ಮಲ್ಲಿ ನಾಲ್ಕು ಬಾಟಲಿಗಳಲ್ಲಿ ನೀರು ಇದ್ದು, ಪ್ರತಿಯೊಬ್ಬರಿಗೂ ಕಳಿಸುತ್ತೇನೆ ನೀವು ಕುಡಿದು ನಮಗೆ ತೋರಿಸಿ ಆಗ ನಾವು ನಂಬುತ್ತೇನೆ ಎಂದು ಬರೆದಿದ್ದರು.
ದೆಹಲಿ ಜಲಮಂಡಳಿತಿಂದ ಬಂದ ಪತ್ರವನ್ನು ಉಲ್ಲೇಖಿಸಿದ್ದ ಅವರು, ಯಮುನಾ ನದಿಯಲ್ಲಿ ಅಮೋನಿಯಾ ಮಟ್ಟವು ಸಾಮಾನ್ಯಕ್ಕಿಂತ 700 ಪಟ್ಟು ಹೆಚ್ಚಿಗೆ ಇದ್ದು ಅದು ಮಾನವನ ಆರೋಗ್ಯಕ್ಕೆ ಅತ್ಯಂತ ವಿಷಕಾರಿ ಎಂದು ಹೇಳಿದ್ದರು.
ಅಮೋನಿಯಾ ಮಟ್ಟ ಹೆಚ್ಚಿರುವುದನ್ನು ಒಪ್ಪಿಕೊಂಡಿರುವ ಚುನಾವಣಾ ಆಯೋಗವು, "ದೆಹಲಿಯಲ್ಲಿ ನರಮೇಧ ಉಂಟುಮಾಡಲು ಹರಿಯಾಣ ಸರ್ಕಾರ ಯಮುನಾ ನದಿಗೆ ವಿಷವನ್ನು ಸೇರಿಸಿದೆ" ಎನ್ನುವ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯು ಎರಡು ರಾಷ್ಟ್ರಗಳ ನಡುವಿನ ಯುದ್ಧದ ಕೃತ್ಯಕ್ಕೆ ಸಮನಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಯಮುನಾ ನದಿ ಸ್ವಚ್ಛತೆ ವಿಚಾರದಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಈ ಬಾರಿ ಕೂಡ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ದೆಹಲಿ ಮತದಾರ ಬುಧವಾರ ಮತಯಂತ್ರದಲ್ಲಿ ಜನತಾ ತೀರ್ಪು ಕೊಡಲಿದ್ದಾನೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications