Arvind Kejriwal: ಜೈಲಿಗೆ ಮರಳುವ ಮುನ್ನ ಬಿಜೆಪಿ ಭವಿಷ್ಯ ನುಡಿದ ಅರವಿಂದ್ ಕೇಜ್ರಿವಾಲ್
ನವದೆಹಲಿ, ಜೂನ್. 02 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮತ್ತೆ ತಿಹಾರ್ ಜೈಲಿಗೆ ವಾಪಸ್ ಆಗಿದ್ದಾರೆ. ಅದಕ್ಕೂ ಮುನ್ನ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದೇಶದಲ್ಲಿ ಏನಾಗಲಿದೆ..? ಬಿಜೆಪಿ ಭವಿಷ್ಯವೇನು ಎಂದು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
ಜಾಮೀನು ಅವಧಿ ಮುಗಿದ ಕಾರಣ ವಾಪಸ್ ಜೈಲಿಗೆ ಹೊರಟ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸರ್ವಾಧಿಕಾರದ ವಿರುದ್ಧ ದನಿ ಎತ್ತಿದ್ದರಿಂದ ಅವರನ್ನು ಜೈಲಿಗೆ ಹಾಕಲಾಯಿತು ಎಂದು ಆರೋಪಿಸಿದ್ದಾರೆ. ಜೊತೆಗೆ ಜೂನ್ ನಾಲ್ಕರಂದು ಪ್ರಕಟವಾಗುವ ಅಧಿಕೃತ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗುವ ಮುನ್ನ ದೆಹಲಿಯ ಎಎಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಪ್ರಧಾನಿ ಮೋದಿ ದೇಶದ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದಕ್ಕೂ ಮೊದಲು ಕೇಜ್ರಿವಾಲ್ ಅವರು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ ಮತ್ತು ಕನ್ನಾಟ್ ಪ್ಲೇಸ್ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅವರ ಮೂರು ವಾರಗಳ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡಿದೆ. ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿರುವ ಮನವಿಯ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯವು ಜೂನ್ 5 ರವರೆಗೆ ಪ್ರಕರಣ ಮುಂದೂಡಿದೆ.
ಹಿಂದಿನ ದಿನ, ದೆಹಲಿ ಮುಖ್ಯಮಂತ್ರಿ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಮಧ್ಯಂತರ ಜಾಮೀನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ದೆಹಲಿಯ ಡಿಡಿಯು ಮಾರ್ಗ್ನಲ್ಲಿರುವ ಎಎಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ.
ಇನ್ನು, ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗುವುದು ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ. ಜೈಲಿನ ನಿಯಮಗಳ ಪ್ರಕಾರ, ಖೈದಿಯೊಬ್ಬ ಸೂರ್ಯಾಸ್ತದ ಮೊದಲು ಅಧಿಕಾರಿಗಳ ಮುಂದೆ ಶರಣಾಗಬೇಕು. ಶರಣಾಗುವ ಮೊದಲು, ಕೇಜ್ರಿವಾಲ್ ಶನಿವಾರ ತಮ್ಮ ನಿವಾಸದಲ್ಲಿ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯನ್ನು ನಡೆಸಿದ್ದರು. ಜೊತೆಗೆ ಇಂಡಿಯಾ ಬ್ಲಾಕ್ನ ಸಭೆಯಲ್ಲಿಯೂ ಭಾಗವಹಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಮತ್ತೊಮ್ಮೆ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಎಕ್ಸಿಟ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಬಿಜೆಪಿಗೆ 6 ರಿಂದ 7 ಸ್ಥಾನಗಳು ಮತ್ತು ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ 0-1 ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದೆ.
ಕಳೆದ ವಾರ, ಎಎಪಿ ಮುಖ್ಯಸ್ಥರು ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಏಳು ದಿನಗಳ ವಿಸ್ತರಣೆ ಮಾಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದರು. ಕೇಜ್ರಿವಾಲ್ ಅವರು ತೂಕವನ್ನು ಕಳೆದುಕೊಳ್ಳುತ್ತಿರುವುದರಿಂದ ಮತ್ತು ಹೆಚ್ಚಿನ ಕೀಟೋನ್ ಮಟ್ಟವನ್ನು ಹೊಂದಿರುವ ಕಾರಣ ಪರೀಕ್ಷೆಗಳನ್ನು ನಡೆಸಲು ಸಮಯ ಬೇಕಾಗುತ್ತದೆ ಎಂದು ಹೇಳಿಕೊಂಡಿದ್ದರು.
ಆದರೆ, ಸುಪ್ರೀಂ ಕೋರ್ಟ್ ಅವರ ಮನವಿಯ ತುರ್ತು ಪಟ್ಟಿಗೆ ಸೇರಿಸಲು ನಿರಾಕರಿಸಿತು. ನಂತರ ಅವರು ಮಧ್ಯಂತರ ಜಾಮೀನು ಕೋರಿ ವಿಶೇಷ ಸಿಬಿಐ-ಇಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯ ತನ್ನ ಆದೇಶವನ್ನು ಜೂನ್ 5ಕ್ಕೆ ಕಾಯ್ದಿರಿಸಿದೆ. ಜಾರಿ ನಿರ್ದೇಶನಾಲಯ (ED) ಕೇಜ್ರಿವಾಲ್ ಅವರ ಮನವಿಯನ್ನು ವಿರೋಧಿಸಿದೆ, ಅವರು ಚುನಾವಣೆಯ ಉದ್ದಕ್ಕೂ ಪ್ರಚಾರ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ ಎಂದು ವಾದಿಸಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications