ಗಂಗಾ ನದಿ ಬಳಸಿ ವಿದ್ಯುತ್ ಯೋಜನೆಗೆ ವಿರೋಧಿಸಿದ್ದೆ: ಉಮಾ
ಹರಿದ್ವಾರ, ಫೆಬ್ರವರಿ 8: ಬಿಜೆಪಿ ನಾಯಕಿ ಉಮಾ ಭಾರತಿ ಅವರು ಉತ್ತಾರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯ ದುರಂತಕ್ಕೆ ಮರುಗಿದ್ದಾರೆ. ಇದು ಮುನ್ನೆಚ್ಚರಿಕೆಯಾಗಬೇಕು ಎಂದಿದ್ದಾರೆ. ಗಂಗಾ ನದಿ ಹಾಗೂ ಉಪನದಿ ಬಳಸಿ ಯಾವುದೇ ಪ್ರಮಾಣದ ವಿದ್ಯುತ್ ಯೋಜನೆಗೆ ನಾನು ವಿರೋಧಿಸಿದ್ದೆ ಎಂದು ಉಮಾ ಭಾರತಿ ಹೇಳಿದ್ದಾರೆ. ಮೋದಿ ನೇತೃತ್ವದ ಸರ್ಕಾರದಲ್ಲಿ ಈ ಹಿಂದೆ ಗಂಗಾ ನದಿ ಸ್ವಚ್ಛತೆ, ನದಿ ಅಭಿವೃದ್ಧಿ, ಜಲ ಸಂಪನ್ಮೂಲ ಖಾತೆ ಸಚಿವೆಯಾಗಿದ್ದ ಉಮಾ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಹಿಮನದಿಯ ಆರ್ಭಟದ ಸುದ್ದಿ ತಿಳಿಯುತ್ತಿದ್ದಂತೆ ಸರಣಿ ಟ್ವೀಟ್ ಮಾಡಿರುವ ಉಮಾ ಅವರು ಋಷಿಗಂಗಾ ವಿದ್ಯುತ್ ಯೋಜನೆ ನಾಶವಾಗಿದ್ದು, ದೊಡ್ಡ ದುರಂತಕ್ಕೆ ಮುನ್ಸೂಚನೆಯಾಗಬೇಕಿದೆ ಎಂದಿದ್ದಾರೆ. ಹಿಮಾಲಯದಲ್ಲಿ ಜಲ ವಿದ್ಯುತ್ ಯೋಜನೆ ನಿರ್ಮಾಣಕ್ಕೆ ನಾನು ವಿರೋಧಿಸಿದ್ದೆ. ಆದರೆ, ಈಗ ಈ ದುರಂತ ನಮಗೆ ಅಪಾಯದ ಮುನ್ಸೂಚನೆಯಾಗಿದೆ ಎಂದಿದ್ದಾರೆ.
''ನಾನು ಸಚಿವೆಯಾಗಿದ್ದಾಗ, ನನ್ನ ಸಚಿವಾಲಯದಿಂದ ಉತ್ತರಾಖಂಡ್ ರಾಜ್ಯದ ಹಿಮಾಲಯದಲ್ಲಿ ಅಣೆಕಟ್ಟು ನಿರ್ಮಾಣ, ವಿದ್ಯುತ್ ಯೋಜನೆ ಬಗ್ಗೆ ತೀವ್ರ ಕಾಳಜಿ ಹೊಂದಲಾಗಿತ್ತು. ಇದು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಗಂಗಾ ಹಾಗೂ ಗಂಗಾ ನದಿಯ ಉಪ ನದಿಯನ್ನು ಬಳಸಿ ಜಲ ವಿದ್ಯುತ್ ಯೋಜನೆ ಮಾಡುವುದನ್ನು ವಿರೋಧಿಸಿ ಅಫಿಡವಿಟ್ ಮಾಡಲಾಗಿತ್ತು''

ವಿದ್ಯುತ್ ಕೊರತೆ ಹಾಗೂ ಬೇಡಿಕೆಯನ್ನು ಬೇರೆ ರೀತಿಯಲ್ಲಿ ಪೂರೈಸಬಹುದಾಗಿದೆ. ರಾಷ್ಟ್ರೀಯ ಗ್ರಿಡ್ ನಿಂದ ರಾಜ್ಯಗಳಿಗೆ ಸಿಗುವ ಪಾಲು ಸರಿ ಹೊಂದಿಸಬಹುದಾಗಿದೆ ಎಂದು ಮಾಜಿ ಸಚಿವೆ ಉಮಾ ಅಭಿಪ್ರಾಯಪಟ್ಟಿದ್ದಾರೆ.
ಚಮೋಲಿಯ ಜೋಶಿಮಠ ಸಮೀಪದ ನಂದಾದೇವಿ ಹಿಮಪರ್ವತದ ಭಾಗ ಕುಸಿತವಾಗಿದ್ದರಿಂದ ದೌಲಿಗಂಗಾ, ಅಲಕಾನಂದ ನದಿಯಲ್ಲಿ ತ್ವರಿತ ಪ್ರವಾಹ ಪರಿಸ್ಥಿತಿ ಉಂಟಾಯಿತು. ತಪೋವನ್-ರೇನಿ ಭಾಗದಲ್ಲಿ ಋಷಿಗಂಗಾ ಹೈಡ್ರೋ ಪವರ್ ಯೋಜನೆಯಲ್ಲಿ ಕಾರ್ಯ ನಿರತ 150ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಸಮೀಪದ ಸುರಂಗದಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಕಾರ್ಮಿಕರ ರಕ್ಷಣೆ ಕಾರ್ಯವನ್ನು ಐಟಿಬಿಪಿ ಮುಂದುವರೆಸಿದ್ದು, 14 ಮಂದಿಯನ್ನು ರಕ್ಷಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೇದರಾನಾಥ್ ಕಡೆಯಿಂದ ಮಿಲಿಟರಿ ಪಡೆ ರವಾನೆಯಾಗಿದ್ದು, ಎನ್ ಡಿ ಆರ್ ಎಫ್ ಜೊತೆ ಕೈಜೋಡಿಸಿ ರಕ್ಷಣಾ ಕಾರ್ಯ, ವೈದ್ಯಕೀಯ ನೆರವು ಕಾರ್ಯದಲ್ಲಿ ತೊಡಗಿಕೊಂಡಿದೆ. ನಂದಾದೇವಿ ಹಿಮನದಿಯಲ್ಲಿ ಹಿಮ ಪಾತದ ಪರಿಣಾಮ ಉಂಟಾಗಿರುವ ಪ್ರವಾಹ ಭೀತಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 1070 or 9557444486ಕ್ಕೆ ಕರೆ ಮಾಡಬಹುದು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications