ಇಷ್ಟಕ್ಕೂ ನರೇಂದ್ರ ಮೋದಿ ಜಾತಿ ಯಾವುದು?
ಅಹಮದಾಬಾದ್, ಮೇ 9: ಇನ್ನೇನು ಲೋಕಸಭಾ ಚುನಾವಣೆ ಮುಗಿಯುತ್ತಾ ಬಂದಿದೆ. ಮೇ 12ಕ್ಕೆ ಕೊನೆಯ ಚರಣ ಮುಗಿದರೆ ನಾಲ್ಕು ದಿನಗಳ ಕಾಲ ಫಲಿತಾಂಶಕ್ಕಾಗಿ ಕಾಯಬೇಕಷ್ಟೇ. ಈ ಮಧ್ಯೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷವು ತನ್ನ ಬತ್ತಳಿಕೆಯಲ್ಲಿದ್ದ ಎಲ್ಲ ಅಸ್ತ್ರಗಳನ್ನು ಬಳಸಿದ ಬಳಿಕ ಅಂತಿಮವೆಂಬಂತೆ ಮೋದಿ ಜಾತಿ ಬಗ್ಗೆ ಕೆದಕಿದೆ.
ಮೋದಿ ತಾವು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ನಕಲಿ ಎಂದು ಕಾಂಗ್ರೆಸ್ ಮುಖಂಡ ಶಕ್ತಿಸಿಂಹ ಗೋಹಿಲ್ ಅವರು ದಿಲ್ಲಿಯಲ್ಲಿ ನಿನ್ನೆ ಗುರುವಾರ ಬೆಳಗ್ಗೆ ಆಪಾದಿಸಿದ್ದರು.

'ಮೋದಿ ಅವರು ಅವರೇ ಹೇಳುವಂತೆ ಮೋದ್- ಗಾಂಚಿ ಜಾತಿಗೆ ಸೇರಿತ್ತಾರಂತೆ. ಆದರೆ ಆ ಜಾತಿಯು (ಎಣ್ಣೆ ಗಾಣಿಗರು) ಸಿರಿವಂತ ಮತ್ತು ಮುಂದುವರಿದ ಜಾತಿಯಾಗಿದೆ. ಆ ಜಾತಿ ಮೊದಲಿನಿಂದಲೂ ಯಾವ ಮೀಸಲಾತಿಗಳನ್ನೂ ಪಡೆದುಕೊಂಡಿಲ್ಲ. ಆದರೆ ಮೋದಿ ಮುಖ್ಯಮಂತ್ರಿಯಾದ ಮೇಲೆ ರಾಜಕೀಯ ಲಾಭಕ್ಕಾಗಿ ಆ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಕೆಳಜಾತಿಯವರೆಂದು ಗುರುತಿಸಿಕೊಂಡಿದ್ದಾರೆ' ಎಂದು ಆರೋಪಿಸಿದ್ದರು.
ಗುಜರಾತ್ ಸರಕಾರದ ಸ್ಪಷ್ಟನೆ
ಮೋದಿ 'ನಕಲಿ ಒಬಿಸಿ ಜಾತಿಯವರು' ಎಂಬ ಕಾಂಗ್ರೆಸ್ ಆರೋಪಕ್ಕೆ ಗುಜರಾತ್ ಸರ್ಕಾರ ತತ್ತಕ್ಷಣವೇ ಸ್ಪಷ್ಟನೆ ನೀಡಿದೆ, 'ಮೋದಿ ಅವರು ಒಬಿಸಿ ಪಟ್ಟಿಯಲ್ಲಿರುವ ಜಾತಿಗೆ ಸೇರಿವುದು ನಿಜ. ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಜುಲೈ 25, 1994ರಲ್ಲೇ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಮೋದಿ ಅವರ 'ಮೋದ್- ಗಾಂಚಿ' ಜಾತಿಯು (Modh Ghanchis -OBC) ಒಬಿಸಿ ಪ್ರವರ್ಗಕ್ಕೆ ಸೇರುತ್ತದೆ. ಒಬಿಸಿ ಪ್ರವರ್ಗದಡಿ 36 ಜಾತಿಗಳು ಇವೆ. ಇದರ 25 (ಬಿ) ಸಂಖ್ಯೆಯಡಿ ಮೋದ್- ಗಾಂಚಿ ಜಾತಿಯೂ ಸೇರಿದೆ' ಎಂದು ರಾಜ್ಯ ಸರ್ಕಾರದ ವಕ್ತಾರ ನಿತಿನ್ ಪಟೇಲ್ ಅವರು ವಾಸ್ತವವನ್ನು ತೆರೆದಿಟ್ಟಿದ್ದಾರೆ.
ಅಂದರೆ 1994ರಲ್ಲಿ ಮೋದಿ ಇನ್ನೂ ಮುಖ್ಯಮಂತ್ರಿಯಾಗಿರಲಿಲ್ಲ. ರಾಜ್ಯ ಸರಕಾರದ ಪರವಾಗಿ ಜಾತಿಯಂತಹ ಸೂಕ್ಷ್ಮ ವಿಚಾರಗಳಲ್ಲಿ ಅಧಿಸೂಚನೆ (1994 notification) ಹೊರಡಿಸುವ ಅಧಿಕಾರವೂ 1994ರಲ್ಲಿ ಅವರಿಗೆ ಇರಲಿಲ್ಲ. ಆದರೂ ಮೋದಿ ಮುಖ್ಯಮಂತ್ರಿಯಾದ ಮೇಲೆ ರಾಜಕೀಯ ಲಾಭಕ್ಕಾಗಿ ಆ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ!
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications