ಜನಸಂಖ್ಯೆಗಿಂತ ಜಾಸ್ತಿ ಆಧಾರ್ ಕಾರ್ಡ್ ವಿತರಣೆ!
ಯುಪಿಎ ಸರಕಾರ ಮಹತ್ವಾಕಾಂಕ್ಷೆಯಿಂದ ಆರಂಭಿಸಿದ್ದ 'ಆಧಾರ್ ಕಾರ್ಡ್' ವಿತರಣೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲವೇ? 2011ರ ಜನಗಣತಿಗೂ, ಇದುವರೆಗೆ ಆಧಾರ್ ಕಾರ್ಡ್ ವಿತರಣೆಯಾಗಿರುವುದಕ್ಕೂ ಹೋಲಿಕೆಯಾಗದೇ ಇರುವುದು ಇಂತಹ ಸಣ್ಣ ಅನುಮಾನಕ್ಕೆ ಈಗ ದಾರಿ ಮಾಡಿಕೊಟ್ಟಿದೆ.
ಒಂದೆಡೆ, ಸರಕಾರಿ ಸೇವೆಗಳನ್ನು ಪಡೆಯಲು, ಎಲ್ಪಿಜಿ ಪಡೆಯಲು, ಬ್ಯಾಂಕ್ ಖಾತೆಯನ್ನು ತೆರೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕೆನ್ನುವ ಕಾನೂನು ಕಟ್ಟುನಿಟ್ಟಾಗಿ ಜಾರಿಯಾಗುತ್ತಿದೆ. ಇನ್ನೊಂದೆಡೆ, 2011ರ ಜನಗಣತಿಗಿಂತ ಹೆಚ್ಚು ಆಧಾರ್ ಕಾರ್ಡ್ ವಿತರಣೆಯಾಗಿದೆ ಎನ್ನುವ ವಿಷಯ ಬಹಿರಂಗವಾಗಿದೆ.
ಆದರೂ, 2011ರ ಸೆನ್ಸಸ್ ನಂತರದ ನಾಲ್ಕು ವರ್ಷಗಳಲ್ಲಿ ಕುಟುಂಬ ಸದಸ್ಯರ ಸಂಖ್ಯೆಯಲ್ಲಿ ವ್ಯತ್ಯಾಸವಾಗಿದೆ ಎನ್ನುವ ಆಧಾರ್ ಪ್ರಾಧಿಕಾರದ ವಾದವೂ ಮೇಲ್ನೋಟಕ್ಕೆ ಒಪ್ಪಿಕೊಳ್ಳುವಂತದ್ದು. (ಆಧಾರ್ ಕಾರ್ಡ್ ಮಾಡಿಸುವುದು ಹೇಗೆ)
ದೇಶದ 36 ರಾಜ್ಯಗಳ ಪೈಕಿ ಕೆಲ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿತರಣೆಯಾಗಿರುವ ಆಧಾರ್ ಕಾರ್ಡುಗಳು 2011ರ ಜನಗಣತಿಗೆ ತಾಳೆಯಾಗದೇ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಡು ವಿತರಣೆಯಾಗಿರುವುದು ಈ ಗೊಂದಲಕ್ಕೆ ಕಾರಣ.
ದೇಶದ ಹದಿಮೂರು ರಾಜ್ಯಗಳಲ್ಲಿ ಆಧಾರ್ ಕಾರ್ಡ್ ಹೊಂದಿರುವವರ ಸಂಖ್ಯೆ, ಜನಸಂಖ್ಯೆಗಿಂತ ಹೆಚ್ಚಾಗಿದೆ. ಆದರೆ, ಯುಐಡಿಎಐ ಅಧಿಕಾರಿಗಳು ಇದರಲ್ಲಿ ಯಾವುದೇ ರೀತಿಯ ಎಡವಟ್ಟು ನಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಯಾವ ಯಾವ ರಾಜ್ಯಗಳಲ್ಲಿ ಈ ಗೊಂದಲ
ಕೇಂದ್ರಾಡಳಿತ ಪ್ರದೇಶ ದೆಹಲಿ, ಲಕ್ಷದ್ವೀಪ, ಪುದುಚೇರಿ, ಚಂಡೀಗಢ ಮತ್ತು ರಾಜ್ಯಗಳಾದ ಆಂಧ್ರಪ್ರದೇಶ, ಸಿಕ್ಕಿಂ, ಹಿಮಾಚಲ ಪ್ರದೇಶ, ಪಂಜಾಬ್, ಕೇರಳ, ಜಾರ್ಖಂಡ, ಗೋವಾ, ಹರ್ಯಾಣ, ತ್ರಿಪುರ ರಾಜ್ಯಗಳು. ಪುಣ್ಯಕ್ಕೆ ಈ ಪಟ್ಟಿಯಲ್ಲಿ ನಮ್ಮ ರಾಜ್ಯದ ಹೆಸರಿಲ್ಲ.

ಪ್ರಾಧಿಕಾರದ ಪ್ರಕಾರ
786 ಮಿಲಿಯನ್ ಆಧಾರ್ ಕಾರ್ಡನ್ನು ಪ್ರಾಧಿಕಾರ ಇದುವರೆಗೆ ವಿತರಿಸಿದೆ. ಇದರಲ್ಲಿ 642 ಮಿಲಿಯನ್ ಕಾರ್ಡ್ 24 ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿ ವಿತರಣೆಯಾಗಿದೆ. ಉಳಿದ ಹನ್ನೆರಡು ರಾಜ್ಯಗಳಲ್ಲಿನ 144 ಮಿಲಿಯನ್ ಕಾರ್ಡ್ ವಿತರಣೆಯಾಗಿದೆ.

ಆಧಾರ್ ಕಾರ್ಡ್ ವಿತರಣೆ ಜವಾಬ್ದಾರಿ
36 ರಾಜ್ಯಗಳ ಪೈಕಿ 24 ರಾಜ್ಯಗಳಲ್ಲಿ ಕಾರ್ಡ್ ವಿತರಿಸುವ ಜವಾಬ್ದಾರಿ ಯುಐಡಿಎಐಗೆ ಮತ್ತು 12 ರಾಜ್ಯಗಳಲ್ಲಿ ಆರ್ಜಿಐಗೆ (Registrar General of India) ನೀಡಲಾಗಿದೆ. ಹೊಸ ಆಧಾರ್ ಕಾರ್ಡ್ ನೊಂದಾಣಿ ವಿಚಾರದಲ್ಲಿ ಆರ್ಜಿಐ, ಯುಐಡಿಎಐಗಿಂತ ಹಿಂದಿದೆ.

ಪ್ರಾಧಿಕಾರ ಹೇಳುವುದೇನು?
ಆಧಾರ್ ಕಾರ್ಡಿನಲ್ಲಿ ಎಡವಟ್ಟು ಆಗಿರುವ ಸಾಧ್ಯತೆ ಇಲ್ಲವೇ ಇಲ್ಲ. ಬಯೋಮೆಟ್ರಿಕ್, ಫಿಂಗರ್ ಪ್ರಿಂಟ್ ಮುಂತಾದವುಗಳನ್ನು ತೆಗೆದುಕೊಂಡೇ ಆಧಾರ್ ಕಾರ್ಡ್ ವಿತರಿಸಲಾಗುತ್ತಿದೆ. ಮೇಲಾಗಿ ಇದು 2011ರ ಜನಗಣತಿ. ಸೆನ್ಸಸ್ ನಡೆಯುವ ಸಮಯದಲ್ಲಿ ವಿಳಾಸ ಸರಿಯಾಗಿರದೇ ಇರುವುದು, ಮನೆಯಲ್ಲಿನ ಸದಸ್ಯರ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡಿರಬಹುದು ಎಂದು ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

ಸೆನ್ಸಸ್ ಅಧಿಕಾರಿಗಳು ಹೇಳುವುದೇನು?
ಮನೆ ವಿಳಾಸದಲ್ಲಿ ತಪ್ಪಾಗಿರುವ ಯಾವುದೇ ಸಾಧ್ಯತೆಗಳಿಲ್ಲ. ಪ್ರತೀ ಮನೆಮನೆಗೆ ತೆರಳಿ ಜನಗಣತಿ ಮಾಡಲಾಗಿದೆ ಎಂದು ಸೆನ್ಸಸ್ ಅಧಿಕಾರಿಗಳೂ ಸೆನ್ಸಸ್ ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications