ನೂತನ ಪ್ರಜಾಪ್ರಭುತ್ವ ದೇಗುಲವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್ಜೆಡಿ ವಿರುದ್ಧ ಓವೈಸಿ ಗರಂ
ನವದೆಹಲಿಯಲ್ಲಿ ಇಂದು (ಮೇ 28, ಭಾನುವಾರ) ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಉದ್ಘಾಟಿಸಿದರು.
ಎರಡೂವರೆ ವರ್ಷಗಳ ಅವಧಿಯಲ್ಲಿ, 1200 ಕೋಟಿ ರೂಪಾಯಿ ವೆಚ್ಚದಲ್ಲಿ, 39.6 ಮೀಟರ್ ಎತ್ತರದಲ್ಲಿ ನಾಲ್ಕು ಅಂತಸ್ತಿನ ಹೊಸ ಸಂಸತ್ ಭವನ ನಿರ್ಮಾಣ ಮಾಡಲಾಗಿದೆ. 1272 ಆಸನ ಸಾಮರ್ಥ್ಯವನ್ನು ಇದು ಹೊಂದಿದ್ದು, ಲೋಕಸಭೆಯನ್ನು ಗರಿಬಿಚ್ಚಿರುವ ನವಿಲಿನ ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗಿದೆ.

ಭಾರತದ ಪ್ರಜಾಭುತ್ವದ ದೇಗುಲ ಉದ್ಘಾಟನೆ ಹಲವು ಕಾರಣಗಳಿಂದ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಉದ್ಘಾಟನೆ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿವೆ. ಇದೇ ವೇಳೆ ಹೊಸ ಸಂಸತ್ ಭವನವನ್ನು ಆರ್ಜೆಡಿ ಪಕ್ಷ ಶವ ಪೆಟ್ಟಿಗೆಗೆ ಹೋಲಿಸಿ ವಿವಾದ ಮೈಮೇಲೆಳೆದುಕೊಂಡಿದೆ.
ನೂತನ ಸಂಸತ್ ಭವನವನ್ನು ಶವ ಪೆಟ್ಟಿಗೆಗೆ ಹೋಲಿಸಿದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ವಿರುದ್ಧ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಸಾದುದ್ದೀನ್ ಓವೈಸಿ, "ಆರ್ಜೆಡಿ ಪಕ್ಷಕ್ಕೆ ಯಾವುದೇ ಸ್ಪಷ್ಟ ನಿಲುವು ಇಲ್ಲ. ಏಕೆ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸದ್ದಾರೆ?, ಬೇರೆ ಯಾವುದಾದರೂ ಉದಾಹರಣೆಯನ್ನು ನೀಡಬಹುದಿತ್ತು. ಇದರಲ್ಲೂ ಕೆಲವು ಕೋನವನ್ನು ತರಲಾಗಿದೆ. ಕೆಲವೊಮ್ಮೆ ಅವರು ಜಾತ್ಯತೀತ ನಾಟಕವಾಡುತ್ತಾರೆ," ಎಂದು ವ್ಯಂಗ್ಯವಾಡಿದ್ದಾರೆ.
#WATCH | It would have been better if Lok Sabha speaker Om Birla inaugurated the new Parliament House. RJD has no stand, the old Parliament building did not even have clearance from Delhi Fire Service. Why are they (RJD) calling the Parliament a coffin? They could have said… pic.twitter.com/E1C0EQYZ52
— ANI (@ANI) May 28, 2023
"ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದರೆ ಚೆನ್ನಾಗಿತ್ತು. ಹಳೆಯ ಸಂಸತ್ ಕಟ್ಟಡಕ್ಕೆ ದೆಹಲಿ ಅಗ್ನಿಶಾಮಕ ದಳದ ಅನುಮತಿಯೂ ಇರಲಿಲ್ಲ. ಆರ್ಜೆಡಿ ಪಕ್ಷ ನೂತನ ಸಂಸತ್ತನ್ನು ಶವಪೆಟ್ಟಿಗೆ ಎಂದು ಏಕೆ ಕರೆಯುತ್ತಿದ್ದಾರೆ? ಅವರು ಬೇರೆ ಏನಾದರೂ ಹೇಳಬಹುದಿತ್ತು," ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅಸಾದುದ್ದೀನ್ ಓವೈಸಿ, "ಲೋಕಸಭೆಯ ಉಸ್ತುವಾರಿ ಸ್ಪೀಕರ್ ಹೊರತು ಪ್ರಧಾನಿ ಅಲ್ಲ. ಲೋಕಸಭೆಯು ಜನರಿಗೆ ಉತ್ತರದಾಯಿಯಾಗಿರುತ್ತದೆ. ಹೀಗಾಗಿ ಸಂಸತ್ ಅನ್ನು ಸ್ಪೀಕರ್ ಉದ್ಘಾಟಿಸಿದ್ದರೆ ಚೆನ್ನಾಗಿತ್ತು," ಎಂದು ಅಭಿಪ್ರಾಯಪಟ್ಟರು.
"ಪ್ರಧಾನಿ ಮೋದಿ ಅವರೇ ಎಲ್ಲವನ್ನೂ ಮಾಡುತ್ತಿದ್ದಾರೆ. ಈ ಮೂಲಕ ತನ್ನಿಂದಲ್ಲದೇ ಬೇರೆ ಯಾರೂ ಅದನ್ನು ಮಾಡಲು ಸಾಧ್ಯವಿಲ್ಲ ಎಂದು ತೋರಿಸಲು ಬಯಸಿದ್ದಾರೆ. 2014ಕ್ಕಿಂತ ಮೊದಲು ಭಾರತದಲ್ಲಿ ಏನೂ ಆಗಿಲ್ಲ, ಈಗ ಎಲ್ಲವೂ ನಡೆಯುತ್ತಿದೆ. ಇದು ಪ್ರಧಾನಿಯ ವೈಯಕ್ತಿಕ ಪ್ರಚಾರದ ಹೊಸ ಮಾರ್ಗವಾಗಿದೆ," ಎಂದು ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದರು.

ಸದ್ಯ ನೂತನ ಸಂಸತ್ ಭವನವನ್ನು ಶವ ವಪೆಟ್ಟಿಗೆಗೆ ಹೋಲಿಸಿರುವ ಆರ್ಜೆಡಿ ವಿರುದ್ಧ ದೇಶದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅನೇಕರು ಇದನ್ನು ಅಸಹ್ಯಕರ ಬೆಳವಣಿಗೆ ಎಂದಿದ್ದಾರೆ.
ಆರ್ಜೆಡಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಬಿಜೆಪಿ
ನೂತನ ಸಂಸತ್ ಭವನವನ್ನು ಶವ ಪೆಟ್ಟಿಗೆಗೆ ಹೋಲಿಸಿ ಟ್ವೀಟ್ ಮಾಡಿದ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಲು ಬಿಜೆಪಿ ಮುಂದಾಗಿದೆ.
ಶವ ಪೆಟ್ಟಿಗೆಯ ಆಕಾರಕ್ಕೆ ಹೋಲಿಸಿದ ಆರ್ಜೆಡಿ ಟ್ವೀಟ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಅಲ್ಲದೆ ಟ್ವಿಟ್ಟರ್ ಪೋಸ್ಟ್ನ ಹಿಂದಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದೆ.
ಇಂದು ಶವಪೆಟ್ಟಿಗೆಗೆ ಹೋಲಿಸಿದವರನ್ನು, ದೇಶದ ಜನರು 2024ರಲ್ಲಿ ಅದೇ ಶವ ಪೆಟ್ಟಿಗೆಯಲ್ಲಿ ಹೂಳುತ್ತಾರೆ. ಜನರು ಪ್ರಜಾಪ್ರಭುತ್ವದ ಹೊಸ ಮಂದಿರವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಟೀಕಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications