ಕಾಂಡೋಮ್ ಹೆಚ್ಚು ಬಳಸುತ್ತಿರುವುದು ಮುಸ್ಲಿಮರೇ; ಆರೆಸ್ಸೆಸ್ ಮುಖ್ಯಸ್ಥರಿಗೆ ಒವೈಸಿ ಟಾಂಟ್
ಹೈದರಾಬಾದ್, ಅ. 9: ದೇಶದಲ್ಲಿ ಮುಸಲ್ಮಾನರ ಸಂಖ್ಯೆ ಏರುತ್ತಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪರೋಕ್ಷವಾಗಿ ಮಾಡಿದ ಕಾಮೆಂಟ್ಗೆ ಒವೈಸಿ ತಿರುಗೇಟು ನೀಡಿದ್ದಾರೆ. ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿಲ್ಲ. ಬದಲಾಗಿ ಮುಸ್ಲಿಮರೇ ಹೆಚ್ಚಾಗಿ ಕಾಂಡೋಮ್ ಬಳಸುತ್ತಿರುವುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಸರಾ ಪಥಸಂಚಲನದ ವೇಳೆ ಸರಸಂಘಚಾಲಕ ಮೋಹನ್ ಭಾಗವತ್ ಮಾತನಾಡುತ್ತಾ, ಭಾರತಕ್ಕೆ ಜನಸಂಖ್ಯಾ ನಿಯಂತ್ರಣಕ್ಕೆ ನೀತಿ ರೂಪಿಸುವ ಅಗತ್ಯತೆ ಇದೆ. ಎಲ್ಲರಿಗೂ ಅನ್ವಯ ಆಗುವ ಕಾನೂನು ಬರಬೇಕಿದೆ ಎಂದು ಹೇಳಿದ್ದರು. ಅವರ ಆ ಹೇಳಿಕೆಗೆ ಒವೈಸಿ ಪ್ರತಿಕ್ರಿಯಿಸಿದ್ದು ತಮ್ಮ ಭಾಷಣದ ತುಣುಕೊಂದನ್ನು ಸೋಷಿಯಲ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
"ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿಲ್ಲ. ಬದಲಾಗಿ ಇಳಿಯುತ್ತಿದೆ. ಹುಟ್ಟುವ ಮಕ್ಕಳ ನಡುವಿನ ಅಂತರವೂ ಹೆಚ್ಚುತ್ತಿದೆ. ಯಾರು ಹೆಚ್ಚು ಕಾಂಡೂಮ್ ಬಳಸುತ್ತಿರುವುದು? ನಾವೆಯೇ. ಮೋಹನ್ ಭಾಗವತ್ ಈ ಬಗ್ಗೆ ಮಾತನಾಡುವುದಿಲ್ಲ," ಎಂದು ಒವೈಸಿ ಈ ವಿಡಿಯೋದಲ್ಲಿ ಹೇಳಿದ್ದಾರೆ.
ಈ ವಿಚಾರದ ಬಗ್ಗೆ ಹೆಚ್ಚು ಬೆಳಕು ಚೆಲ್ಲಲು ಒವೈಸಿ ರಾಷ್ಟ್ರೀಯ ಆರೋಗ್ಯ ಸಮೀಕ್ಷೆಯ ವರದಿಯೊಂದನ್ನು ಉಲ್ಲೇಖಿಸಿದ್ದು, ಅದರಲ್ಲಿ ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ (ಟಿಎಫ್ಆರ್) ಎಲ್ಲರಿಗಿಂತ ಕಡಿಮೆಗೊಂಡಿದೆ ಎಂದಿದ್ದಾರೆ.

ಹಿಂದು ರಾಷ್ಟ್ರ ಭಾರತ ವಿರೋಧಿ
ಇದೇ ವೇಳೆ, ಕಾಣೆಯಾಗುತ್ತಿರುವ ಹಿಂದೂ ಹೆಣ್ಮಕ್ಕಳ ಬಗ್ಗೆ ಮಾತನಾಡುವಂತೆ ಒವೈಸಿ ಆರೆಸ್ಸೆಸ್ ಮುಖ್ಯಸ್ಥರಿಗೆ ಸವಾಲು ಹಾಕಿದ್ದಾರೆ. "ಮೋಹನ್ ಭಾಗವತ್ಗೆ ನಾನು ಒಂದು ಪ್ರಶ್ನೆ ಕೇಳಬಯಸುತ್ತೇನೆ 2000ರಿಂದ 2019ರವರೆಗೂ ನಮ್ಮ ಲಕ್ಷಾಂತರ ಹಿಂದೂ ಸಹೋದರರಿಯರು ಕಾಣೆಯಾಗಿದ್ದಾರೆ. ಇದು ಸರಕಾರ ನೀಡಿದ ಅಂಕಿ ಅಂಶ. ಈ ಬಗ್ಗೆ ಅವರು ಮಾತನಾಡುವುದಿಲ್ಲ" ಎಂದು ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೇಹಾದುಲ್ ಮುಸ್ಲಿಮೀನ್ ಪಕ್ಷದ ಮುಖ್ಯ ಮುಖ್ಯಸ್ಥರು ತಿಳಿಸಿದ್ದಾರೆ.
ಇನ್ನು, ಹಿಂದೂ ರಾಷ್ಟ್ರ ಎಂದರೆ ಭಾರತದ ರಾಷ್ಟ್ರೀಯತೆ ಎಂಬ ಪರಿಕಲ್ಪಯನ್ನು ಒವೈಸಿ ಇದೇ ವೇಳೆ ತಳ್ಳಿಹಾಕಿದ್ದಾರೆ. "ಭಾರತೀಯ ರಾಷ್ಟ್ರೀಯತೆಗೆ ಹಿಂದೂ ರಾಷ್ಟ್ರ ವಿರುದ್ಧವಾಗಿದೆ. ಹಿಂದೂ ರಾಷ್ಟ್ರ ಪರಿಕಲ್ಪನೆಯು ದೇಶ ವಿರೋಧಿಯಾಗಿದೆ. ಭಾರತಕ್ಕೆ ವಿರುದ್ಧವಾಗಿದೆ" ಎಂದು ಅಸಾದುದ್ದೀನ್ ಒವೈಸಿ ಅಭಿಪ್ರಾಯಪಟ್ಟಿದ್ದಾರೆ.

ಮೋದಿ ಬಗ್ಗೆ ದೀದಿ ಮೃದು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇತ್ತೀಚೆಗೆ ಕೆಲ ವಿಚಾರಗಳಲ್ಲಿ ಪ್ರಧಾನಿ ಮೋದಿ ಬಗ್ಗೆ ಮೃದುವಾಗಿ ಮಾತನಾಡುತ್ತಿರುವ ಬಗ್ಗೆ ಒವೈಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ದೇಶದ ತನಿಖಾ ಸಂಸ್ಥೆಗಳ ಕಿರುಕುಳದಿಂದ ತಪ್ಪಿಸಿಕೊಳ್ಳಲು ಉದ್ಯಮಿಗಳು ದೇಶ ಬಿಟ್ಟು ಹೋಗುತ್ತಿರುವ ವಿಚಾರದ ಬಗ್ಗೆ ಪ್ರಧಾನಿ ಮೋದಿ ಪರವಾಗಿ ಮಮತಾ ಮಾತನಾಡಿದ್ದರು. ಆ ಬಗ್ಗೆ ಒವೈಸಿ ವ್ಯಂಗ್ಯ ಮಾಡಿದ್ದಾರೆ.
"ಬಂಗಾಳಕ್ಕೆ ನಾನು ಹೋದರೆ ನಮ್ಮನ್ನು ಬಿಜೆಪಿಯ ಬಿ-ಟೀಮ್ ಎನ್ನುತ್ತಾರೆ. ಇವರಿಗೆ ಮೋದಿ ಒಳ್ಳೆಯವರು, ಒವೈಸಿ ಕೆಟ್ಟವರು" ಎಂದು ಮಮತಾ ಬ್ಯಾನರ್ಜಿಯನ್ನು ಒವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಓಪನ್ ಜೈಲ್ನಲ್ಲಿ ಮುಸ್ಲಿಮರು
ಬಿಜೆಪಿ ಆಡಳಿತದ ಅವಧಿಯಲ್ಲಿ ಮುಸ್ಲಿಮರು ಭಯಭೀತ ಸ್ಥಿತಿಯಲ್ಲಿದ್ದಾರೆ ಎಂದು ಅಸಾದುದ್ದೀನ್ ಒವೈಸಿ ಮತ್ತೊಮ್ಮೆ ಆರೋಪಿಸಿದ್ದಾರೆ. ಬಿಜೆಪಿ ಎಲ್ಲೆಲ್ಲಿ ಅಧಿಕಾರದಲ್ಲಿದೆಯೋ ಅಲ್ಲಿ ಮುಸ್ಲಿಮರು ಮುಕ್ತ ಕಾರಾಗೃಹದಲ್ಲಿ ಬದುಕುತ್ತಿರುವಂತೆ ತೋರುತ್ತದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಕಂಬಕ್ಕೆ ಕಟ್ಟಿ ಹೊಡೆದ ಘಟನೆ
ಇತ್ತೀಚೆಗೆ ಗುಜರಾತ್ನಲ್ಲಿ ಪೊಲೀಸರು ಮುಸ್ಲಿಮ್ ಯುವಕರನ್ನು ಕಂಬಕ್ಕೆ ಕಟ್ಟಿ ಹೊಡೆದ ಘಟನೆ ಬಗ್ಗೆ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಇದು ನಮ್ಮ ಮರ್ಯಾದೆಯಾ? ಮಿಸ್ಟರ್ ಪ್ರೈಮ್ ಮಿನಿಸ್ಟರ್ ನೀವು ಗುಜರಾತ್ನವರಾಗಿದ್ದೀರಿ. ಆ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ನಿಮ್ಮ ರಾಜ್ಯದಲ್ಲಿ ಮುಸ್ಲಿಮರನ್ನು ಕಂಬಕ್ಕೆ ಕಟ್ಟಿ ಹೊಡೆಯಲಾಗುತ್ತಿದ್ದರೆ ಜನರು ಶಿಳ್ಳೆ ಹೊಡೆಯುತ್ತಾರೆ. ಕೋರ್ಟ್ಗಳನ್ನು ಮುಚ್ಚಿ, ಪೊಲೀಸ್ ಪಡೆಯನ್ನೇ ಸಮಾಪ್ತಿಗೊಳಿಸಿ" ಎಂದು ಒವೈಸಿ ಸಲಹೆ ನೀಡಿದ್ದಾರೆ.
ಇತ್ತೀಚೆಗೆ, ಗುಜರಾತ್ನಲ್ಲಿ ಗರ್ಬ ನರ್ತನ ಕಾರ್ಯಕ್ರಮ ನಡೆಯುತ್ತಿದ್ದಾಗ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಆ ಘಟನೆಯಲ್ಲಿ ಆರೋಪಿಗಳೆಂದು ಕೆಲ ಮುಸ್ಲಿಮರನ್ನು ಬಂಧಿಸಲಾಗಿತ್ತು. ಅವರನ್ನು ಪೊಲೀಸರು ಕಂಬಕ್ಕೆ ಕಟ್ಟಿ ಛಡಿ ಏಟಿನ ರೀತಿ ಹೊಡೆಯಲಾಗುತ್ತಿತ್ತು. ಅದು ಆಗಿದ್ದು ಸಾರ್ವಜನಿಕ ಪ್ರದೇಶದಲ್ಲಿ, ನೂರಾರು ಜನರ ಸಮ್ಮುಖದಲ್ಲಿ. ಹಾಗೆ ಹೊಡೆಯುತ್ತಿದ್ದ ದೃಶ್ಯವನ್ನು ಜನರು ನೋಡಿ ಖುಷಿಪಡುತ್ತಿದ್ದುದು ವೈರಲ್ ಆದ ವಿಡಿಯೋಗಳಿಂದ ತಿಳಿದುಬರುತ್ತದೆ.
(ಒನ್ಇಂಡಿಯಾ ಸುದ್ದಿ)
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications