Asaduddin Owaisi: ಸಂಸದ ಅಸಾದುದ್ದೀನ್ ಓವೈಸಿ ಮನೆ ಧ್ವಂಸ- ಅವಿಶ್ವಾಸ ನಿರ್ಣಯ ಭಾಷಣದ ಬಳಿಕ ಬೆದರಿಕೆ ಕರೆಗಳು
ನವದೆಹಲಿ, ಆಗಸ್ಟ್ 14: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆಯ ಬಾಗಿಲಿನ ಎರಡು ಗಾಜುಗಳು ಒಡೆದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಒಡೆದ ಗಾಜುಗಳ ಸುತ್ತಮುತ್ತ ಕಲ್ಲು ಅಥವಾ ಇನ್ನಾವುದೇ ವಸ್ತು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಪ್ರದೇಶವನ್ನು ಪರಿಶೀಲಿಸುತ್ತಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಓವೈಸಿ ಅವರ ಸರ್ಕಾರಿ ಬಂಗಲೆಯಲ್ಲಿದ್ದ ಕೇರ್ಟೇಕರ್ ಯಾರೋ ಬಂಗಲೆಯ ಗಾಜನ್ನು ಒಡೆದಿದ್ದಾರೆ ಎಂದು ದೂರಿದರು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.
ಪೊಲೀಸ್ ದೂರಿನ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಅಶೋಕ ರಸ್ತೆಯಲ್ಲಿರುವ ಅಸಾದುದ್ದೀನ್ ಓವೈಸಿ ಅವರ ಮನೆಯ ( ಸಂಖ್ಯೆ 34 ) ಗೇಟ್ನ ಗಾಜಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಪಿಸಿಆರ್ ಕರೆ ಸ್ವೀಕರಿಸಿದ ನಂತರ, ಡಿಸಿಪಿ, ಎಸಿಪಿ ಮತ್ತು ಎಸ್ಎಚ್ಒ ಸ್ಥಳಕ್ಕೆ ತಲುಪಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮನೆಯ ಸೇವಕ, 'ನಾಯಿ ಒಳಗಿನಿಂದ ಬೊಗಳಲು ಪ್ರಾರಂಭಿಸಿತು. ಆಗ ಹೊರಗೆ ಹೋಗಿ ನೋಡಿದಾಗ, ಗೇಟ್ನಲ್ಲಿ ಒಡೆದ ಗಾಜುಗಳನ್ನು ಗುರುತಿಸಿದೆ ಎಂದು ಎಂದು ಹೇಳಿದ್ದಾರೆ.
'ಹೊರಗೆ ಹೋಗಿ ನೋಡಿದಾಗ, ಕಿಟಕಿಯ ಗಾಜು ಒಡೆದಿರುವುದು ನನಗೆ ಕಂಡುಬಂತು. ಇದಾದ ನಂತರ ನಾನು ಸುತ್ತಲೂ ಸಾಕಷ್ಟು ಹುಡುಕಿದೆ. ಆದರೆ, ಯಾರೂ ಕಾಣಲಿಲ್ಲ' ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಓವೈಸಿ ಫೆಬ್ರವರಿಯಲ್ಲಿ ಆರೋಪಿಸಿದ್ದರು. 2014 ರಿಂದ ಅವರ ಮನೆ ಮೇಲೆ ದಾಳಿ ನಡೆದಿರುವುದು ನಾಲ್ಕನೇ ಬಾರಿ ಎಂದು ಓವೈಸಿ ಹೇಳಿದ್ದಾರೆ.
ದೆಹಲಿಯಲ್ಲಿರುವ ಓವೈಸಿ ಅವರ ಅಧಿಕೃತ ನಿವಾಸವನ್ನು ಧ್ವಂಸಗೊಳಿಸಿರುವುದು ಈ ವರ್ಷದಲ್ಲಿ ಇದು ಎರಡನೇ ಬಾರಿ. ಈ ವರ್ಷದ ಫೆಬ್ರವರಿ 19 ರಂದು ದುಷ್ಕರ್ಮಿಗಳು ಪ್ರವೇಶದ್ವಾರದಲ್ಲಿದ್ದ ಅವರ ನಾಮಫಲಕವನ್ನು ಕಲ್ಲು ಎಸೆದು ಹಾನಿಗೊಳಿಸಿದ್ದರು.
ಇದೇ ವೇಳೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಅವಿಶ್ವಾಸ ನಿರ್ಣಯದ ಮೇಲೆ ಭಾಷಣ ಮಾಡಿದ ನಂತರ ಈ ಕರೆಗಳು ಬರುತ್ತಿವೆ ಎಂದು 'ಜೀ ನ್ಯೂಸ್' ವರದಿ ಮಾಡಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications