ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ ಅಸರಾಂ ಬಾಪು
ಜೋಧಪುರ, ಜುಲೈ 3: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ ಅಸರಾಂ ಬಾಪು ಶಿಕ್ಷೆ ರದ್ದು ಕೋರಿ ಸೋಮವಾರ ರಾಜಸ್ಥಾನ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಏಪ್ರಿಲ್ 25ರಂದು ಜೋಧಪುರದ ನ್ಯಾಯಾಲಯ ಅಸರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಐದು ವರ್ಷಗಳ ಹಿಂದೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶಿಕ್ಷೆ ನೀಡಲಾಗಿತ್ತು.
ಅಸರಾಂ ಬಾಪು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ.
"ನಾವು ಅಸರಾಂ ಅವರಿಗೆ ಶಿಕ್ಷೆ ನೀಡಿರುವುದನ್ನು ಇಂದು (ಸೋಮವಾರ) ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದೇವೆ. ಸಹ ಅಪರಾಧಿಗಳಿಗೆ ಶಿಕ್ಷೆ ನೀಡಿರುವುದನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹೈಕೋರ್ಟ್ ವಿಚಾರಣಾ ನ್ಯಾಯಾಲಯದಿಂದ ದಾಖಲೆಗಳನ್ನು ಕೇಳಿದೆ," ಎಂದು ಅಸರಾಂ ಪರ ವಕೀಲ್ ನಿಶಾಂತ್ ಬೋರಾ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

ಅಸರಾಂ ಸಹಾಯಕರಾದ ಶರದ್ ಮತ್ತು ಶಿಲ್ಪಿ ಎಂಬ ಇಬ್ಬರಿಗೆ ಜೋಧಪುರ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಜೋಧಪುರ ಸಮೀಪದ ಮನಾಯ್ ನಲ್ಲಿರುವ ಆಶ್ರಮಕ್ಕೆ 2013ರ ಆಗಸ್ಟ್ 15ರಂದು ತನ್ನನ್ನು ಕರೆಸಿಕೊಂಡು ತನ್ನ ಮೇಲೆ ಅಂದೇ ರಾತ್ರಿ ಅತ್ಯಾಚಾರ ನಡೆಸಲಾಗಿತ್ತು ಎಂದು 16 ವರ್ಷದ ಬಾಲಕಿ ದೂರು ಸಲ್ಲಿಸಿದ್ದಳು. ಈ ಪ್ರಕರಣದಲ್ಲಿ ಅಸರಾಂ ಶಿಕ್ಷೆಗೆ ಗುರಿಯಾಗಿದ್ದರು.
ಉತ್ತರ ಪ್ರದೇಶದ ಶಹಜಾನ್ಪುರಕ್ಕೆ ಸೇರಿದ ಯುವತಿ ಮಧ್ಯ ಪ್ರದೇಶದ ಛಿಂದ್ವಾರದಲ್ಲಿರುವ ಅಸರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದರ ಮಧ್ಯದಲ್ಲಿ ಆಕೆಯ ಮೇಲೆ ಅಸರಾಂ ಅತ್ಯಾಚಾರ ನಡೆಸಿದ್ದ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications