ನಾನು ಭಾರತೀಯ ಎಂದು ಕರೆದುಕೊಳ್ಳಲು ನಾಚಿಕೆಪಡುತ್ತೇನೆ: ಬಿಜೆಪಿ ಸಂಸದ ಗೌತಮ್ ಗಂಭೀರ್
ನವದೆಹಲಿ, ಜುಲೈ 21: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದ್ದು, ತನ್ನನ್ನು ತಾನು ಭಾರತೀಯ ಎಂದು ಕರೆದುಕೊಳ್ಳಲು ನಾಚಿಕೆಪಡುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಶುಕ್ರವಾರ ಹೇಳಿದ್ದಾರೆ.
ಮಣಿಪುರದಂತಹ ಘಟನೆಗಳು ಸಾಮಾನ್ಯ ಘಟನೆಯಲ್ಲ. ಇವುಗಳಿಗೆ ಅವಕಾಶ ನೀಡದಿರುವುದು ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ. ನಾನು ಭಾರತೀಯ ಎಂದು ಕರೆದುಕೊಳ್ಳಲು ನಾಚಿಕೆಪಡುತ್ತೇನೆ ಏಕೆಂದರೆ ಈ ಸಮಸ್ಯೆ ಕೇವಲ ಮಣಿಪುರಕ್ಕೆ ಸೀಮಿತವಾಗಿಲ್ಲ. ಇದು ಇಡೀ ದೇಶದ ತಲೆ ತಗ್ಗಿಸುವಂತಾಗಿದೆ. ಆದ್ದರಿಂದ ಇದನ್ನು ರಾಜಕೀಯಗೊಳಿಸಬಾರದು ಎಂದು ಗಂಭೀರ್ ಹೇಳಿದ್ದಾರೆ.

ಮೇ 4 ರಂದು ಇಬ್ಬರು ಮಹಿಳೆಯರನ್ನು ಇನ್ನೊಂದು ಬದಿಯ ಪುರುಷರ ಗುಂಪಿನಿಂದ ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊದ ನಂತರ ಮಣಿಪುರದ ಬೆಟ್ಟಗಳಲ್ಲಿ ಉದ್ವಿಗ್ನತೆ ಉಂಟಾಗಿದೆ. ಮಣಿಪುರ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಆದರೆ ಇದು ರಾಜ್ಯಕ್ಕೆ ಸಂಬಂಧಿಸಿದ ಘಟನೆಯಲ್ಲ, ಇಬ್ಬರು ಮಹಿಳೆಯರು ಅಥವಾ ಹುಡುಗಿಯರಿಗೆ ಈ ರೀತಿ ನಡೆದರೆ ಅದು ಇಡೀ ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದರು.
ಘಟನೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಮಣಿಪುರ ಹಿಂಸಾಚಾರದ ಕುರಿತು ತಮ್ಮ ಮೊದಲ ಸಾರ್ವಜನಿಕ ಹೇಳಿಕೆಗಳಲ್ಲಿ ಮೋದಿ ಅವರು ಗುರುವಾರ ಯಾವುದೇ ತಪ್ಪಿತಸ್ಥರನ್ನು ಉಳಿಸುವುದಿಲ್ಲ. ಕಾನೂನು ತನ್ನ ಸಂಪೂರ್ಣ ಶಕ್ತಿ ಮತ್ತು ದೃಢತೆಯಿಂದ ಕಾರ್ಯನಿರ್ವಹಿಸುತ್ತದೆ ಎಂದು ಪ್ರತಿಜ್ಞೆ ಮಾಡಿದ್ದರು ಎಂದರು.
ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಎಳೆದೊಯ್ದ ಘಟನೆ ಖಂಡಿಸಿ ಅರುಣಾಚಲ ಪ್ರದೇಶ ಯುವ ಕಾಂಗ್ರೆಸ್ (ಎಪಿವೈಸಿ) ಶುಕ್ರವಾರ ಇಲ್ಲಿನ ರಾಜೀವ್ ಗಾಂಧಿ ಭವನದ ಹೊರಗೆ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಮಹಿಳೆಯರ ಘನತೆಯನ್ನು ಕಾಪಾಡುವಲ್ಲಿ ಮತ್ತು ಈಶಾನ್ಯ ರಾಜ್ಯ ಮಣಿಪುರದಲ್ಲಿ ಶಾಶ್ವತ ಶಾಂತಿ ಸ್ಥಾಪಿಸುವಲ್ಲಿ ವಿಫಲರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಪಕ್ಷದ ಯುವ ಕಾರ್ಯಕರ್ತರು ದಹಿಸಿದರು.
ನೂರಾರು ಯುವ ಕಾಂಗ್ರೆಸ್ ಸ್ವಯಂಸೇವಕರು ಭಿತ್ತಿಪತ್ರಗಳು ಮತ್ತು ಬ್ಯಾನರ್ಗಳನ್ನು ಹಿಡಿದಿದು ಎರಡು ತಿಂಗಳಿಗಿಂತ ಹೆಚ್ಚು ಕಳೆದರೂ ರಾಜ್ಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲವಾದ ಪ್ರಧಾನಿ, ಗೃಹ ಸಚಿವರು ಮತ್ತು ಮಣಿಪುರದ ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸಹಜ ಸ್ಥಿತಿ ತರಲು ವಿಫಲವಾಗಿದೆ. ಮಣಿಪುರದ ಬೆಟ್ಟ ಮತ್ತು ಕಣಿವೆ ಪ್ರದೇಶಗಳೆರಡರಲ್ಲೂ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರೂ ಪ್ರಧಾನಿ ಎರಡು ತಿಂಗಳಿಗೂ ಹೆಚ್ಚು ಕಾಲ ಮೌನ ವಹಿಸಿದ್ದರು. ಕೇಂದ್ರ ಏನು ಮಾಡುತ್ತಿತ್ತು? ಎಂದು ಎಪಿವೈಸಿ ಅಧ್ಯಕ್ಷ ತಾರ್ ಜಾನಿ ಪ್ರಶ್ನಿಸಿದರು.
"ನಾವು ಮಣಿಪುರದ ಜನರೊಂದಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇಡೀ ಈಶಾನ್ಯ ಭಾರತವು ಅವರೊಂದಿಗೆ ಇದೆ. ನಾವು ಒಟ್ಟಿಗೆ ನಿಲ್ಲುತ್ತೇವೆ. ಏಕೆಂದರೆ ಪ್ರದೇಶದ ಯಾವುದೇ ರಾಜ್ಯದಲ್ಲಿ ಇದೇ ರೀತಿಯ ಘಟನೆಗಳು ಸಂಭವಿಸಬಹುದು. ಪ್ರಧಾನಿ, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಅಧಿಕಾರದಿಂದ ಕೆಳಗಿಳಿಯಬೇಕು" ಎಂದು ಜಾನಿ ಹೇಳಿದರು.
ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಇಂಫಾಲ್ನ ಅಧಿಕೃತ ಮೂಲಗಳು ಗುರುವಾರ ರಾತ್ರಿ ತಿಳಿಸಿದ್ದು, ಇಬ್ಬರು ಬುಡಕಟ್ಟು ಮಹಿಳೆಯರನ್ನು ವಿವಸ್ತ್ರಗೊಳಿಸಿ ಕರೆದೊಯ್ಯುತ್ತಿರುವ 26 ಸೆಕೆಂಡುಗಳ ವೀಡಿಯೊ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications