ಕರ್ನಾಟಕದ ಯೋಧ ನಿರಂಜನ್, ಹನುಮಂತಪ್ಪಗೆ ಸೇನಾ ಗೌರವ
ನವದೆಹಲಿ, ಆಗಸ್ಟ್ 15: ಎನ್ಎಸ್ಜಿ ಪಡೆಯ ಬಾಂಬ್ ನಿಷ್ಕ್ರಿಯ ದಳದ ಕಮಾಂಡಿಂಗ್ ಆಫಿಸರ್ ಆಗಿದ್ದ ಹುತಾತ್ಮ ಲೆಫ್ಟಿನಂಟ್ ಕರ್ನಲ್ ನಿರಂಜನ್ ಅವರಿಗೆ 'ಶೌರ್ಯ ಚಕ್ರ' ಪ್ರಶಸ್ತಿ ಲಭಿಸಿದೆ. ಧಾರಾವಾಡ ಜಿಲ್ಲೆಯ ಲ್ಯಾನ್ಸ್ ನಾಯಕ ಹನುಮಂತಪ್ಪ ಅವರಿಗೆ ರಾಷ್ಟ್ರಪತಿ ಸೇನಾ ಪದಕ ಗೌರವ ನೀಡಲಾಗಿದೆ.
ಎನ್ಎಸ್ಜಿ ಪಡೆಯ ಬಾಂಬ್ ನಿಷ್ಕ್ರಿಯ ದಳದ ಕಮಾಂಡಿಂಗ್ ಆಫೀಸರ್ ಬೆಂಗಳೂರಿನ ನಿರಂಜನ್ ಜೊತೆಗೆ ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (ಎನ್ ಎಸ್ ಜಿ) ಪಡೆಯ ನಾಯಿ 'ರಾಕೆಟ್' ಕೂಡಾ ಮೊದಲ ಬಾರಿಗೆ ಶೌರ್ಯ ಪ್ರಶಸ್ತಿ ಲಭಿಸಿದೆ. 70ನೇ ಸ್ವಾತಂತ್ರ್ಯ ದಿನಾಚರಣೆಯ ದಿನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. [ಪಠಾಣ್ ಕೋಟ್ ಉಗ್ರರ ದಾಳಿ ಟೈಮ್ ಲೈನ್]

ಪಠಾಣ್ ಕೋಟ್ ವಾಯುನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ಕಾರ್ಯನಿರತರಾಗಿದ್ದ ನಿರಂಜನ್ ಅವರು ಗ್ರೆನೇಡ್ ಸ್ಫೋಟವಾಗಿ ಮರಣವನ್ನಪ್ಪಿದ್ದರು.[ಹನುಮಂತಪ್ಪನಿಗೆ ಎದೆಯುಬ್ಬಿಸಿ ಸೆಲ್ಯೂಟ್ ಹೊಡೆಯಿರಿ]
ಲ್ಯಾನ್ಸ್ ನಾಯಕ ಹನುಮಂತಪ್ಪ ಕೊಪ್ಪದ ಅವರು ಕಾಶ್ಮೀರದ ಸಿಯಾಚಿನ್ ನಲ್ಲಿ ಹಿಮದಡಿಯಲ್ಲಿ 6 ದಿನಗಳ ಬದುಕುಳಿದಿದ್ದರು. ಫೆಬ್ರವರಿ 3 ರಂದು ಹನುಮಂತಪ್ಪ ಸೇರಿ 10 ಯೋಧರು ಹಿಮಪಾತದಿಂದ ಸಾವಿಗೀಡಾದರು. [ಹನುಮಂತಪ್ಪನ ಸ್ಮರಣೆಯಲ್ಲಿ ಸಿಯಾಚಿನ್ ಮಿಲಿಟರಿ ಮುಕ್ತವಾಗಲಿ]
ಅಶೋಕ್ ಚಕ್ರ: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಿಂದ ನುಸುಳಿದ ಉಗ್ರರ ವಿರುದ್ಧದ ಹೋರಾಡಿ, ಮೂವರು ಉಗ್ರರನ್ನು ಕೊಂದು, ಹುತಾತ್ಮರಾದ ಹವಾಲ್ದಾರ್ ಹಂಗಾಪನ್ ದಾದಾ ಅವರಿಗೆ ಅಶೋಕ ಚಕ್ರ ಪ್ರಶಸ್ತಿ ಗೌರವ ನೀಡಲಾಗಿದೆ. [ವಾಘಾ ಗಡಿಯಲ್ಲಿ ಭಾರತ-ಪಾಕ್ ನಡುವೆ ಸಿಹಿ ಹಂಚಿಕೆ]
ರಕ್ಷಣಾ ಪಡೆ ಮತ್ತು ಅರೆಸೇನಾ ಪಡೆಗಳ ಒಟ್ಟು 82 ಜನರಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪದಕಗಳನ್ನು ಘೋಷಿಸಿದ್ದಾರೆ. ಈ ಬಾರಿ 14 ಜನರಿಗೆ ಶೌರ್ಯ ಚಕ್ರ, 63 ಜನರಿಗೆ ಸೇನಾ ಪದಕ, ತಲಾ ಇಬ್ಬರಿಗೆ ನವ (ನೌಕಾ) ಸೇನೆ ಮತ್ತು ವಾಯು ಸೇನೆ ಪದಕಗಳನ್ನು ಪ್ರದಾನ ಮಾಡಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications