ಕರ್ನಾಟಕದ ಯೋಧ ನಿರಂಜನ್, ಹನುಮಂತಪ್ಪಗೆ ಸೇನಾ ಗೌರವ
ನವದೆಹಲಿ, ಆಗಸ್ಟ್ 15: ಎನ್ಎಸ್ಜಿ ಪಡೆಯ ಬಾಂಬ್ ನಿಷ್ಕ್ರಿಯ ದಳದ ಕಮಾಂಡಿಂಗ್ ಆಫಿಸರ್ ಆಗಿದ್ದ ಹುತಾತ್ಮ ಲೆಫ್ಟಿನಂಟ್ ಕರ್ನಲ್ ನಿರಂಜನ್ ಅವರಿಗೆ 'ಶೌರ್ಯ ಚಕ್ರ' ಪ್ರಶಸ್ತಿ ಲಭಿಸಿದೆ. ಧಾರಾವಾಡ ಜಿಲ್ಲೆಯ ಲ್ಯಾನ್ಸ್ ನಾಯಕ ಹನುಮಂತಪ್ಪ ಅವರಿಗೆ ರಾಷ್ಟ್ರಪತಿ ಸೇನಾ ಪದಕ ಗೌರವ ನೀಡಲಾಗಿದೆ.
ಎನ್ಎಸ್ಜಿ ಪಡೆಯ ಬಾಂಬ್ ನಿಷ್ಕ್ರಿಯ ದಳದ ಕಮಾಂಡಿಂಗ್ ಆಫೀಸರ್ ಬೆಂಗಳೂರಿನ ನಿರಂಜನ್ ಜೊತೆಗೆ ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (ಎನ್ ಎಸ್ ಜಿ) ಪಡೆಯ ನಾಯಿ 'ರಾಕೆಟ್' ಕೂಡಾ ಮೊದಲ ಬಾರಿಗೆ ಶೌರ್ಯ ಪ್ರಶಸ್ತಿ ಲಭಿಸಿದೆ. 70ನೇ ಸ್ವಾತಂತ್ರ್ಯ ದಿನಾಚರಣೆಯ ದಿನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. [ಪಠಾಣ್ ಕೋಟ್ ಉಗ್ರರ ದಾಳಿ ಟೈಮ್ ಲೈನ್]

ಪಠಾಣ್ ಕೋಟ್ ವಾಯುನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ಕಾರ್ಯನಿರತರಾಗಿದ್ದ ನಿರಂಜನ್ ಅವರು ಗ್ರೆನೇಡ್ ಸ್ಫೋಟವಾಗಿ ಮರಣವನ್ನಪ್ಪಿದ್ದರು.[ಹನುಮಂತಪ್ಪನಿಗೆ ಎದೆಯುಬ್ಬಿಸಿ ಸೆಲ್ಯೂಟ್ ಹೊಡೆಯಿರಿ]
ಲ್ಯಾನ್ಸ್ ನಾಯಕ ಹನುಮಂತಪ್ಪ ಕೊಪ್ಪದ ಅವರು ಕಾಶ್ಮೀರದ ಸಿಯಾಚಿನ್ ನಲ್ಲಿ ಹಿಮದಡಿಯಲ್ಲಿ 6 ದಿನಗಳ ಬದುಕುಳಿದಿದ್ದರು. ಫೆಬ್ರವರಿ 3 ರಂದು ಹನುಮಂತಪ್ಪ ಸೇರಿ 10 ಯೋಧರು ಹಿಮಪಾತದಿಂದ ಸಾವಿಗೀಡಾದರು. [ಹನುಮಂತಪ್ಪನ ಸ್ಮರಣೆಯಲ್ಲಿ ಸಿಯಾಚಿನ್ ಮಿಲಿಟರಿ ಮುಕ್ತವಾಗಲಿ]
ಅಶೋಕ್ ಚಕ್ರ: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಿಂದ ನುಸುಳಿದ ಉಗ್ರರ ವಿರುದ್ಧದ ಹೋರಾಡಿ, ಮೂವರು ಉಗ್ರರನ್ನು ಕೊಂದು, ಹುತಾತ್ಮರಾದ ಹವಾಲ್ದಾರ್ ಹಂಗಾಪನ್ ದಾದಾ ಅವರಿಗೆ ಅಶೋಕ ಚಕ್ರ ಪ್ರಶಸ್ತಿ ಗೌರವ ನೀಡಲಾಗಿದೆ. [ವಾಘಾ ಗಡಿಯಲ್ಲಿ ಭಾರತ-ಪಾಕ್ ನಡುವೆ ಸಿಹಿ ಹಂಚಿಕೆ]
ರಕ್ಷಣಾ ಪಡೆ ಮತ್ತು ಅರೆಸೇನಾ ಪಡೆಗಳ ಒಟ್ಟು 82 ಜನರಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪದಕಗಳನ್ನು ಘೋಷಿಸಿದ್ದಾರೆ. ಈ ಬಾರಿ 14 ಜನರಿಗೆ ಶೌರ್ಯ ಚಕ್ರ, 63 ಜನರಿಗೆ ಸೇನಾ ಪದಕ, ತಲಾ ಇಬ್ಬರಿಗೆ ನವ (ನೌಕಾ) ಸೇನೆ ಮತ್ತು ವಾಯು ಸೇನೆ ಪದಕಗಳನ್ನು ಪ್ರದಾನ ಮಾಡಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications