ರಾಜಸ್ಥಾನದಲ್ಲಿ ಕಾಂಗ್ರೆಸ್ ಒಗ್ಗಟ್ಟು: ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ನೇತೃತ್ವದಲ್ಲಿ ಮುಂದಿನ ಚುನಾವಣೆ
ನವದೆಹಲಿ, ಮೇ. 30: ಕಾಂಗ್ರೆಸ್ನ ರಾಜಸ್ಥಾನ ಘಟಕದಲ್ಲಿ ನಾಯಕತ್ವದ ಕಿತ್ತಾಟದ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಒಪ್ಪಿಕೊಂಡಿದ್ದಾರೆ. ಎಲ್ಲಾ ಸಮಸ್ಯೆಗಳನ್ನು ಪಕ್ಷವೇ ಪರಿಹರಿಸಲು ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ.
ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಉನ್ನತ ನಾಯಕತ್ವವು ಅಶೋಕ್ ಗೆಹ್ಲೋಟ್ ಅವರೊಂದಿಗೆ ಸರಣಿ ಚರ್ಚೆಗಳನ್ನು ನಡೆಸಿತು ಮತ್ತು ಸಚಿನ್ ಪೈಲಟ್ ಸಂಜೆಯ ನಂತರ ಅವರೊಂದಿಗೆ ಸೇರಿಕೊಂಡಿದ್ದರು. ಕಾಂಗ್ರೆಸ್ನ ರಾಜ್ಯ ವ್ಯವಹಾರಗಳ ಉಸ್ತುವಾರಿ ಸುಖಜೀಂದರ್ ರಾಂಧವಾ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಇಬ್ಬರು ಪ್ರಮುಖ ರಾಜ್ಯ ನಾಯಕರು ಒಟ್ಟಾಗಿ ಕೆಲಸ ಮಾಡಲು ಮತ್ತು ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲು ಪಕ್ಷವು ಸೂತ್ರವನ್ನು ರೂಪಿಸಿದೆ ಎಂದು ಮೂಲಗಳೊಂದಿಗೆ ತನ್ನ ರಾಜಸ್ಥಾನ ಘಟಕದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳಲು ಪಕ್ಷ ಪ್ರಯತ್ನಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಾಜಿ ಮಾರ್ಗದ ನಿವಾಸದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಮುಂಬರುವ ರಾಜಸ್ಥಾನ ಚುನಾವಣೆಯ ಕುರಿತು ಮಾಹಿತಿ ನೀಡಿದ್ದಾರೆ.
"ನಾವು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಪಕ್ಷವು ಒಟ್ಟಾಗಿ ಕೆಲಸ ಮಾಡಬೇಕು. ಖಂಡಿತವಾಗಿಯೂ ನಾವು ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನ ಬಲಿಷ್ಠ ರಾಜ್ಯವಾಗಲಿದೆ ಎಂಬುದು ಸ್ಪಷ್ಟವಾಗಿದೆ. ನಾವು ಗೆಲ್ಲಲಿದ್ದೇವೆ. ಆದ್ದರಿಂದ ಗೆಹ್ಲೋಟ್ ಜಿ ಮತ್ತು ಸಚಿನ್ ಜಿ ಇಬ್ಬರೂ ಒಟ್ಟಿಗೆ ಇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಇಬ್ಬರೂ ನಾಯಕರು ಈ ವಿಷಯಗಳ ಪ್ರಸ್ತಾಪವನ್ನು ಒಪ್ಪಿಕೊಂಡರು" ಎಂದು ವೇಣುಗೋಪಾಲ್ ಹೇಳಿದ್ದಾರೆ. ಈ ವೇಳೆ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರ ಪಕ್ಕದಲ್ಲಿ ನಿಂತಿದ್ದರು.

"ಮುಂದಿನ ನಿರ್ಧಾರವನ್ನು ಇಬ್ಬರೂ (ಪಕ್ಷ) ಹೈಕಮಾಂಡ್ಗೆ ಬಿಟ್ಟಿದ್ದಾರೆ, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಇಬ್ಬರೂ ಒಪ್ಪಿದ್ದಾರೆ. ಇಬ್ಬರೂ ನಾಯಕರು ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ. ಇದು ಬಿಜೆಪಿ ವಿರುದ್ಧ ಜಂಟಿ ಹೋರಾಟವಾಗಿದೆ. ನಾವು ರಾಜಸ್ಥಾನ ಚುನಾವಣೆಯನ್ನು ಗೆಲ್ಲುತ್ತೇವೆ" ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ನಂತರ ಟ್ವೀಟ್ ಮಾಡಿ, "ಕಾಂಗ್ರೆಸ್ ಪಕ್ಷವು ತನ್ನ ಕರ್ನಾಟಕದ ಯಶಸ್ಸನ್ನು ರಾಜಸ್ಥಾನದಲ್ಲಿಯೂ ಪುನರಾವರ್ತಿಸುವ ಹಾದಿಯಲ್ಲಿದೆ" ಎಂದು ಹೇಳಿದ್ದಾರೆ. ನಂತರ ಟ್ವೀಟ್ನಲ್ಲಿ, ವೇಣುಗೋಪಾಲ್, "ರಾಜಸ್ಥಾನದಲ್ಲಿ ನಮ್ಮ ತಂಡವು 2023 ರ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡುತ್ತದೆ. ಅಬ್ಬರದ ವಿಜಯವನ್ನು ದಾಖಲಿಸುವ ಮೂಲಕ ಪರ್ಯಾಯ ಸರ್ಕಾರಗಳ ದಶಕಗಳ ಸಂಪ್ರದಾಯವನ್ನು ಮುರಿಯುತ್ತದೆ!" ಎಂದಿದ್ದಾರೆ.
ವಸುಂಧರಾ ರಾಜೆ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ನಿಷ್ಕ್ರಿಯತೆಯ ವಿಷಯದ ಬಗ್ಗೆ ಸಚಿನ್ ಪೈಲಟ್, ತಮಮ್ದೆ ಸರ್ಕಾರದ ಅಶೋಕ್ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಮತ್ತು ತಮ್ಮದೇ ಪಕ್ಷದ ಮುಖ್ಯಮಂತ್ರಿ ವಿರುದ್ಧ ದನಿಯೆತ್ತಿದ್ದಾರೆ. ಸುದೀರ್ಘ ಅಂತರದ ನಂತರ ಇದೇ ಮೊದಲ ಬಾರಿಗೆ ರಾಜಸ್ಥಾನ ಮುಖ್ಯಮಂತ್ರಿ ಮತ್ತು ಸಚಿನ್ ಪೈಲಟ್ ಮುಖಾಮುಖಿಯಾಗಿದ್ದರು.
ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರವನ್ನು ರೂಪಿಸಲು ಮತ್ತು ಬಿಜೆಪಿಯನ್ನು ಮೂಲೆಗುಂಪು ಮಾಡಲು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಚುನಾವಣೆಗೆ ಒಳಪಡುವ ರಾಜ್ಯಗಳ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜಸ್ಥಾನ ಘಟಕದಲ್ಲಿನ ಆಂತರಿಕ ಬಿಕ್ಕಟ್ಟು ಪರಿಹರಿಸಲು ಮತ್ತು ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯವನ್ನು ಶಮನಗೊಳಿಸಲು ಪಕ್ಷದ ನಾಯಕತ್ವವು ಪ್ರಯತ್ನಿಸುತ್ತಿದೆ.
2018 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದಾಗಿನಿಂದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಅಧಿಕಾರದ ಜಗಳ ನಡೆದಿದೆ. 2020 ರಲ್ಲಿ, ಸಚಿನ್ ಪೈಲಟ್ ಅವರು ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ವಿಫಲ ದಂಗೆಯನ್ನು ನಡೆಸಿದ್ದರು. ನಂತರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಹುದ್ದೆಗಳಿಂದ ತೆಗೆದುಹಾಕಲಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications