Asian Games 2023: ಭಾರತದ ಆಟಗಾರರಿಗೆ ವೀಸಾ ನಿರಾಕರಿಸಿದ ಚೀನಾ- ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರವಾಸ ರದ್ದು
ನವದೆಹಲಿ, ಸೆಪ್ಟೆಂಬರ್ 22: ಏಷ್ಯನ್ ಗೇಮ್ಸ್ನಲ್ಲಿ ಭಾಗಿಯಾಗಬೇಕಿದ್ದ ಭಾರತದ ಅಥ್ಲೀಟ್ಗಳಿಗೆ ಚೀನಾ ದೇಶವು ವೀಸಾ ಹಾಗೂ ಮಾನ್ಯತೆಯನ್ನು ನಿರಾಕರಿಸಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ಚೀನಾ ದೇಶದ ಪ್ರವಾಸ ರದ್ದುಪಡಿಸಿದ್ದಾರೆ.
ಭಾರತದ ಕ್ರೀಡಾಪಟುಗಳಿಗೆ ಉದ್ದೇಶಪೂರ್ವಕ ಅಡಚಣೆಯನ್ನು ಚೀನಾ ಉಂಟು ಮಾಡುತ್ತಿದೆ ಎಂದು ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಚೀನಾದ ಹ್ಯಾಂಗ್ಝೌನಲ್ಲಿ ನಡೆಯಲಿರುವ 19ನೇ ಏಷ್ಯನ್ ಗೇಮ್ಸ್ಗೆ ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿದ್ದಾರೆ ಎಂದು ಭಾರತ ಸರ್ಕಾರ ತಿಳಿಸಿದೆ.
'ಭಾರತದ ಜನರನ್ನು ಚೀನಾ ವಿಭಿನ್ನವಾಗಿ ಪರಿಗಣಿಸುತ್ತಿದೆ. ಇದನ್ನು ನಾವು ದೃಢವಾಗಿ ತಿರಸ್ಕರಿಸುತ್ತೇವೆ. ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಮತ್ತು ಬೇರ್ಪಡಿಸಲಾಗದ ಭಾಗವಾಗಿ ಉಳಿಯುತ್ತದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಭಾರತೀಯ ಅಥ್ಲೀಟ್ಗಳಿಗೆ ಚೀನಾದ ಉದ್ದೇಶಪೂರ್ವಕ ತಡೆಯನ್ನು ನಮ್ಮ ಸರ್ಕಾರವು ಸಹಿಸುವುದಿಲ್ಲ. ನಾವು ಬೀಜಿಂಗ್ ವಿರುದ್ಧ ಪ್ರತಿಭಟನೆಯನ್ನು ದಾಖಲಿಸಿದ್ದೇವೆ ಎಂದು ಬಾಗ್ಚಿ ತಿಳಿಸಿದ್ದಾರೆ.

ಚೀನಾದ ಈ ಕ್ರಮಗಳಿಂದ ಏಷ್ಯನ್ ಗೇಮ್ಸ್ ಬಗೆಗಿನ ಉತ್ಸಾಹ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಭಾರತದ ಕ್ರೀಡಾ ಸಚಿವರು ಏಷ್ಯನ್ ಗೇಮ್ಸ್ ಸಮಾರಂಭದಲ್ಲಿ ಭಾಗವಹಿಸಲು ಚೀನಾಗೆ ತೆರಳಬೇಕಿತ್ತು. ಆದರೆ, ಚೀನಾ ಕ್ರಮದ ವಿರುದ್ಧ ಪ್ರತಿಭಟನೆಯ ಭಾಗವಾಗಿ ಅವರು ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ಬಾಗ್ಚಿ ಹೇಳಿದ್ದಾರೆ.
ಮೂವರು ಆಟಗಾರರು ತಮ್ಮ ಪ್ರಯಾಣ ದಾಖಲೆಗಳನ್ನು ಡೌನ್ಲೋಡ್ ಮಾಡಲು ಸಾಧ್ಯವಾಗಿಲ್ಲದಿರುವುದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ.

'ಕ್ರೀಡಾಪಟುಗಳು ಸಂಘಟನಾ ಸಮಿತಿಯಿಂದ ಮಾನ್ಯತೆ ಕಾರ್ಡ್ಗಳನ್ನು ಪಡೆಯಬೇಕು. ಆ ನಂತರ, ಅವರು ಏಷ್ಯನ್ ಗೇಮ್ಸ್ಗೆ ಪ್ರಯಾಣಿಸಲು ಅನುಮತಿ ನೀಡಿದ್ದಾರೆ ಎಂದರ್ಥ. ಆದರೆ ಆಶ್ಚರ್ಯಕರವಾಗಿ, ಈ ಮೂವರು ಆಟಗಾರರು ಮಾತ್ರ ತಮ್ಮ ದಾಖಲೆಗಳನ್ನು ಡೌನ್ಲೋಡ್ ಮಾಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಚೀನಾ ಪ್ರಯಾಣ ಸಾಧ್ಯವಾಗಿಲ್ಲ' ಎಂದು ಭಾರತೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ದಕ್ಷಿಣ ಟಿಬೆಟ್ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶವನ್ನು ಚೀನಾ ತನ್ನ ಭೂಪ್ರದೇಶವೆಂದು ವಾದ ಮಾಡುತ್ತ ಬಂದಿದೆ. ಅರುಣಾಚಲ ಪ್ರದೇಶವನ್ನು ಒಳಗೊಂಡಿರುವ ನಕ್ಷೆಯನ್ನು ಚೀನಾ ಕಳೆದು ತಿಂಗಳು ಬಿಡುಗಡೆ ಮಾಡಿತ್ತು. ಇದಕ್ಕೆ ಭಾರತವು ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು.
ಭಾರತ ಹಾಗೂ ಕೆನಡಾ ನಡುವೆ ಸಂಘರ್ಷ ಉಂಟಾಗಿರುವ ಸಂದರ್ಭದಲ್ಲೇ ಈ ಬೆಳವಣಿಗೆಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications